AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: 15 ದಿನದ ಹೆಣ್ಣು ಶಿಶುವಿನ ಜೀವಂತ ಸಮಾಧಿ, ಆದರೂ ಬದುಕಿ ಬಂದಿದ್ಹೇಗೆ?

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ 15 ದಿನಗಳ ಹೆಣ್ಣುಮಗುವನ್ನು ಜೀವಂತ ಸಮಾಧಿ ಮಾಡಿರುವ ಮನಕಲಕುವ ಘಟನೆ ಶಹಜಹಾನ್ಪುರದಲ್ಲಿ ನಡೆದಿದೆ. ಜಿಲ್ಲೆಯ ಜೈತಿಪುರ ಪ್ರದೇಶದ ಗೋದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಹಗುಲ್ ನದಿಯ ಸೇತುವೆಯ ಬಳಿಯ ಕೆಲವು ಸಣ್ಣ ಮರಗಳ ನಡುವೆ ಶಿಶುವನ್ನು ನೆಲದಲ್ಲಿ ಹೂಳಲಾಗಿತ್ತು. ಕುರಿಗಾಹಿಯೊಬ್ಬ ಶಿಶುವಿನ ಅಳುವ ಧ್ವನಿಯನ್ನು ಕೇಳಿ ಅಲ್ಲಿಗೆ ಓಡಿ ಬಂದಿದ್ದರು. ನಂತರ ಅವರು ಮಗುವಿನ ಒಂದು ಕೈ ಮಣ್ಣಿನಿಂದ ಹೊರಗೆ ಇರುವುದನ್ನು ಗಮನಿಸಿದ್ದಾರೆ.

ಉತ್ತರ ಪ್ರದೇಶ: 15 ದಿನದ ಹೆಣ್ಣು ಶಿಶುವಿನ ಜೀವಂತ ಸಮಾಧಿ, ಆದರೂ ಬದುಕಿ ಬಂದಿದ್ಹೇಗೆ?
ಮಗು
ನಯನಾ ರಾಜೀವ್
|

Updated on: Sep 16, 2025 | 11:24 AM

Share

ಲಕ್ನೋ, ಸೆಪ್ಟೆಂಬರ್ 16: ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ 15 ದಿನಗಳ ಹೆಣ್ಣುಮಗು(Girl Baby)ವನ್ನು ಜೀವಂತ ಸಮಾಧಿ ಮಾಡಿರುವ ಮನಕಲಕುವ ಘಟನೆ ಶಹಜಹಾನ್ಪುರದಲ್ಲಿ ನಡೆದಿದೆ. ಜಿಲ್ಲೆಯ ಜೈತಿಪುರ ಪ್ರದೇಶದ ಗೋದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಹಗುಲ್ ನದಿಯ ಸೇತುವೆಯ ಬಳಿಯ ಕೆಲವು ಸಣ್ಣ ಮರಗಳ ನಡುವೆ ಶಿಶುವನ್ನು ನೆಲದಲ್ಲಿ ಹೂಳಲಾಗಿತ್ತು.

ಕುರಿಗಾಹಿಯೊಬ್ಬ ಶಿಶುವಿನ ಅಳುವ ಧ್ವನಿಯನ್ನು ಕೇಳಿ ಅಲ್ಲಿಗೆ ಓಡಿ ಬಂದಿದ್ದರು. ನಂತರ ಅವರು ಮಗುವಿನ ಒಂದು ಕೈ ಮಣ್ಣಿನಿಂದ ಹೊರಗೆ ಇರುವುದನ್ನು ಗಮನಿಸಿದ್ದಾರೆ. ಇದಾದ ನಂತರ, ಅವರು ಸುತ್ತಮುತ್ತಲಿನ ಜನರಿಗೆ ಮಾಹಿತಿ ನೀಡಿದರು. ಸುತ್ತಮುತ್ತಲಿನ ಜನರು ಅಲ್ಲಿಗೆ ತಲುಪಿದಾಗ, ಅವರು ಕೂಡ ಮಗುವನ್ನು ನೋಡಿದ್ದಾರೆ. ನಂತರ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿದರು. ಪೊಲೀಸರು ಬಹಳ ಎಚ್ಚರಿಕೆಯಿಂದ ಮಣ್ಣನ್ನು ತೆಗೆದು ಶಿಶುವನ್ನು ಭೂಮಿಯೊಳಗಿಂದ ಹೊರತೆಗೆದರು. ಆಗ ಮಗು ಸಣ್ಣದಾಗಿ ಉಸಿರಾಡುತ್ತಿತ್ತು. ತಕ್ಷಣ ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮತ್ತಷ್ಟು ಓದಿ: ಜಬಲ್​​ಪುರ: 5.2 ಕೆಜಿ ತೂಕದ ಆರೋಗ್ಯವಂತ ಮಗುವಿಗೆ ಜನ್ಮಕೊಟ್ಟ ಮಹಿಳೆ

ನಂತರ, ಉತ್ತಮ ಚಿಕಿತ್ಸೆಗಾಗಿ ಶಿಶುವನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಯಿತು. ಸರ್ಕಾರಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಶ್ ಕುಮಾರ್ ಮಾತನಾಡಿ, ಮಗುವಿಗೆ 10 ರಿಂದ 15 ದಿನಗಳಾಗಿದ್ದು , ತುಂಬಾ ದುರ್ಬಲವಾಗಿದೆ. ಮಗುವಿನ ದೇಹದ ಮೇಲೆ ಇರುವೆ ಕಚ್ಚಿದ ಗಾಯಗಳಿದ್ದು, ಆಕೆಗೆ ಸಾಕಷ್ಟು ರಕ್ತ ಹೋಗಿದೆ. ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಶಿಶುವಿನ ಬೆರಳುಗಳು ಒಂದಕ್ಕೊಂದು ಸೇರಿಕೊಂಡಿರುವುದು ಕಂಡುಬಂದಿದೆ. ಪೊಲೀಸರು ಈ ವಿಷಯವನ್ನು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ. ಬಹಗುಲ್ ನದಿ ರಸ್ತೆಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ ಎಂದು ಜೈತ್‌ಪುರ ಪೊಲೀಸ್ ಠಾಣೆಯ ಎಸ್‌ಎಚ್‌ಒ ಗೌರವ್ ತ್ಯಾಗಿ ಹೇಳಿದ್ದಾರೆ.

ಈ ಅಮಾನವೀಯ ಕೃತ್ಯವನ್ನು ಯಾರು ಮಾಡಿದ್ದಾರೆಂದು ತಿಳಿಯುವ ಸಲುವಾಗಿ ಖಾಸಗಿ ಆಸ್ಪತ್ರೆಗಳಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಶಿಶು ಇನ್ನೂ ಉಸಿರಾಡುತ್ತಿರುವುದಕ್ಕೆ ಜನರು ದೇವರಿಗೆ ಧನ್ಯವಾದ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್