AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಖಾ ಒಂದು ಅನಿಷ್ಠ, ಕೆಟ್ಟ ಪದ್ಧತಿ.. ಖಂಡಿತ ನಾವದನ್ನು ನಿಷೇಧ ಮಾಡುತ್ತೇವೆ ಎಂದ ಉತ್ತರಪ್ರದೇಶ ಸಚಿವ

ಇಂದು ಬುರ್ಖಾ ಬಗ್ಗೆ ಮಾತನಾಡಿದ ಶುಕ್ಲಾ ಇತ್ತೀಚೆಗಷ್ಟೇ, ಮುಸ್ಲಿಮರು ಮಸೀದಿಗಳಲ್ಲಿ ನಮಾಜ್​ ಮಾಡುವಾಗ ಧ್ವನಿ ವರ್ಧಕ ಬಳಕೆ ಮಾಡುತ್ತಿರುವುದರಿಂದ ತೊಂದರೆಯಾಗುತ್ತದೆ ಎಂದು ಸ್ಥಳೀಯ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ಬುರ್ಖಾ ಒಂದು ಅನಿಷ್ಠ, ಕೆಟ್ಟ ಪದ್ಧತಿ.. ಖಂಡಿತ ನಾವದನ್ನು ನಿಷೇಧ ಮಾಡುತ್ತೇವೆ ಎಂದ ಉತ್ತರಪ್ರದೇಶ ಸಚಿವ
ಆನಂದ್​ ಸ್ವರೂಪ್ ಶುಕ್ಲಾ
Lakshmi Hegde
|

Updated on:Mar 25, 2021 | 6:52 PM

Share

ವಾರಾಣಸಿ: ಮುಸ್ಲಿಂ ಮಹಿಳೆಯರು ಧರಿಸುವ ಬುರ್ಕಾ ಬಗ್ಗೆ ಈಗಾಗಲೇ ಹಲವರು ಮಾತನಾಡಿ, ವಿವಾದ ಸೃಷ್ಟಿಸಿದ್ದಾರೆ. ಅವರ ಸಾಲಿಗೆ ಇದೀಗ ಉತ್ತರ ಪ್ರದೇಶ ಸಂಸದೀಯ ವ್ಯವಹಾರಗಳ ಸಚಿವ ಆನಂದ್​ ಸ್ವರೂಪ್​ ಶುಕ್ಲಾ ಸೇರಿದ್ದಾರೆ. ಬುರ್ಖಾ ಧರಿಸುವ ಪದ್ಧತಿಯನ್ನು ಕೆಟ್ಟ ಹಾಗೂ ಅಮಾನವೀಯ ಎಂದು ಕರೆದಿದ್ದಾರೆ. ಮುಸ್ಲಿಂ ಮಹಿಳೆಯರ ಮೇಲೆ ಬುರ್ಕಾ ಎಂಬ ಅಮಾನವೀಯ, ಪಾಪಕರ ಪದ್ಧತಿಯನ್ನು ಹೇರಲಾಗುತ್ತಿದೆ. ಇದನ್ನು ಹಲವು ರಾಷ್ಟ್ರಗಳು ಈಗಾಗಲೇ ನಿಷೇಧಿಸಿವೆ. ನಾವು ನಮ್ಮ ದೇಶದಲ್ಲಿ ತ್ರಿವಳಿ ತಲಾಖ್​ ಅನಿಷ್ಠ ಪದ್ಧತಿಯನ್ನು ತೆಗೆದುಹಾಕಿದಂತೆ ಖಂಡಿತ ಬುರ್ಖಾವನ್ನೂ ನಿಷೇಧ ಮಾಡುತ್ತೇವೆ ಎಂದಿದ್ದಾರೆ.

ನಮಾಜ್ ಬಗ್ಗೆಯೂ ಕ್ಯಾತೆ ತೆಗೆದಿದ್ದರು ಇಂದು ಬುರ್ಖಾ ಬಗ್ಗೆ ಮಾತನಾಡಿದ ಶುಕ್ಲಾ ಇತ್ತೀಚೆಗಷ್ಟೇ, ಮುಸ್ಲಿಮರು ಮಸೀದಿಗಳಲ್ಲಿ ನಮಾಜ್​ ಮಾಡುವಾಗ ಧ್ವನಿ ವರ್ಧಕ ಬಳಕೆ ಮಾಡುತ್ತಿರುವುದರಿಂದ ತೊಂದರೆಯಾಗುತ್ತದೆ ಎಂದು ಸ್ಥಳೀಯ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಬಲ್ಲಿಯಾದಲ್ಲಿರುವ ಮದೀನಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುವಾಗ ಧ್ವನಿ ವರ್ಧಕ ಬಳಸುತ್ತಾರೆ. ದಿನಕ್ಕೆ 5ಬಾರಿ ನಮಾಜ್​ ಮಾಡುತ್ತಾರೆ. ಅಷ್ಟೂ ಬಾರಿಯೂ ಮೈಕ್​​ ಬಳಕೆ ಮಾಡುತ್ತಾರೆ. ಇದರಿಂದ ನನ್ನ ಕೆಲಸಕ್ಕೆ ತೊಂದರೆಯಾಗುತ್ತದೆ. ಯೋಗ, ಧ್ಯಾನ, ಪೂಜೆ, ಕಚೇರಿಗೆ ಸಂಬಂಧಪಟ್ಟ ಕೆಲಸಗಳನ್ನು ಮಾಡಲು ತೊಂದರೆಯಾಗುತ್ತದೆ. ಬರೀ ನನಗಷ್ಟೇ ಅಲ್ಲ, ಸಮೀಪ ಇರುವ ಉಳಿದ ಮನೆಯವರಿಗೆ, ಶಿಕ್ಷಣ ಸಂಸ್ಥೆಗಳಿಗೂ ಇದು ಸಮಸ್ಯೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಕೂಡ ಪ್ರಭಾವ ಬೀರುತ್ತಿದೆ. ಹಾಗಾಗಿ ಈ ಶಬ್ದವನ್ನು ತಗ್ಗಿಸಬೇಕು. ಧ್ವನಿ ವರ್ಧಕಗಳ ಪ್ರಮಾಣ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ತಿಳಿಸಿದ್ದರು.

ಇದನ್ನೂ ಓದಿ:  ‘ಸೂಪರ್ ಕಾಪ್‘ ಆಗಲು ನಾನೇ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಇಟ್ಟಿದ್ದೆ; ತಪ್ಪೊಪ್ಪಿಗೆ ಹೇಳಿಕೆ ನೀಡಿದ ಸಚಿನ್ ವಾಜೆ

ಉಪಸಮರಕ್ಕೆ ಸಜ್ಜಾದ ‘ಕೈ’ ಪಡೆ: ಕಾಂಗ್ರೆಸ್​ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

Published On - 6:49 pm, Thu, 25 March 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!