AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Acciden: ಮಹಾರಾಷ್ಟ್ರದಲ್ಲಿ ಭೀಕರ ಬಸ್ ಅಪಘಾತ, ಮೃತರ ಕುಟುಂಬಗಳಿಗೆ 2 ಲಕ್ಷ, ಗಾಯಳುಗಳಿಗೆ 50ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 26 ಜನರು ಸಾವನ್ನಪ್ಪಿದ್ದು, ಇದೀಗ ಅವರಿಗೆ ದೇಶ ಪ್ರಧಾನಿ ಸಂತಾಪ ಸೂಚಿಸಿದ್ದು, ಸಾವನ್ನಪ್ಪಿರುವರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

Bus Acciden: ಮಹಾರಾಷ್ಟ್ರದಲ್ಲಿ ಭೀಕರ ಬಸ್ ಅಪಘಾತ, ಮೃತರ ಕುಟುಂಬಗಳಿಗೆ 2 ಲಕ್ಷ, ಗಾಯಳುಗಳಿಗೆ 50ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Jul 01, 2023 | 12:08 PM

Share

ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 26 ಜನರು ಸಾವನ್ನಪ್ಪಿದ್ದು, ಇದೀಗ ಅವರಿಗೆ ದೇಶ ಪ್ರಧಾನಿ ಸಂತಾಪ ಸೂಚಿಸಿದ್ದು, ಸಾವನ್ನಪ್ಪಿರುವರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಅಪಘಾತದ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದು, ರಾಜ್ಯ ಸರ್ಕಾರವು ಕೂಡ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ನಾನು ದೇವರಲ್ಲಿ ಪ್ರಾರ್ಥನೆ ಮಾಡುವೆ, ಸಾವನ್ನಪ್ಪಿರುವವ ಕುಟುಂಬಗಳಿಗೆ ದುಃಖ ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಜತೆಗೆ ಗಾಯಗೊಂಡಿರುವವರು ಶೀಘ್ರವಾಗಿ ಗುಣಮುಖವಾಗಿ ಬರಲಿ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.

ಇಂದು ಮುಂಜಾನೆ ಬುಲ್ಧಾನಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ಸೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು , 26 ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಇತರ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಾಣ ಉಳಿಸಿಕೊಳ್ಳಲು ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಜನರನ್ನು ಸಹಾಯಕ್ಕಾಗಿ ಅಂಗಲಾಚಿದರೂ ಯಾರೊಬ್ಬರು ಕೂಡ ಸಹಾಯಕ್ಕೆ ಬಂದಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಪೊಲೀಸರು ಶಂಕಿಸಿರುವ ಪ್ರಕಾರ ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಬಸ್ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಕಂಬಕ್ಕೆ ಡಿಕ್ಕಿ ಹೊಡೆದು, ಅಲ್ಲಿದ್ದ ಡಿವೈಡರ್​ಗೂ ಕೂಡ ಡಿಕ್ಕಿ ಹೊಡೆದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿದ್ದಾರೆ. ಆದರೆ ಬಸ್ ಚಾಲಕ ಟೈರ್ ಒಡೆದು ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 34 ಪ್ರಯಾಣಿಕರಲ್ಲಿ 26 ಜನರು ಸಾವನ್ನಪ್ಪಿದ್ದು ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಜನ ಸಾಯುತ್ತಿದ್ದರು, ಸಹಾಯಕ್ಕಾಗಿ ಅಂಗಲಾಚಿದರೂ ನಿಲ್ಲದೇ ಹೋದವು ಕಾರುಗಳು; ಮಹಾ ಬಸ್ ದುರಂತದಲ್ಲಿ ಬದುಕುಳಿದವರ ಅಳಲು

5 ಲಕ್ಷ ನೆರವು ನೀಡುವುದಾಗಿ ಸಿಎಂ ಶಿಂಧೆ ಘೋಷಿಸಿದ್ದಾರೆ

ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್‌ನ ಭೀಕರ ಅಪಘಾತದ ಬಗ್ಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಸಹಾಯಧನ ಘೋಷಿಸಿದ್ದಾರೆ. ಇದರ ಜತೆಗೆ ಈ ಅಪಘಾತದ ಬಗ್ಗೆ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಫೇಸ್​ ಬುಕ್​​ ಮೂಲಕ ಸಂತಾಪ ಸೂಚಿಸಿದ್ದಾರೆ. ಟಿವಿ9 ವರದಿ ಮಾಡಿದ ನಂತರ, ಈ ಬಗ್ಗೆ ಫೇಸ್​ ಬುಕ್​​ನಲ್ಲಿ ಟಿವಿ9 ವೆಬ್​​ ಸೈಟ್​ ಮಾಡಿದ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.   ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25 ಮಂದಿ ಸಜೀವ ದಹನವಾಗಿರುವ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಫೇಸ್​ ಬುಕ್​​ನಲ್ಲಿ ಬರೆದುಕೊಂಡಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ