AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Acciden: ಮಹಾರಾಷ್ಟ್ರದಲ್ಲಿ ಭೀಕರ ಬಸ್ ಅಪಘಾತ, ಮೃತರ ಕುಟುಂಬಗಳಿಗೆ 2 ಲಕ್ಷ, ಗಾಯಳುಗಳಿಗೆ 50ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 26 ಜನರು ಸಾವನ್ನಪ್ಪಿದ್ದು, ಇದೀಗ ಅವರಿಗೆ ದೇಶ ಪ್ರಧಾನಿ ಸಂತಾಪ ಸೂಚಿಸಿದ್ದು, ಸಾವನ್ನಪ್ಪಿರುವರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ.

Bus Acciden: ಮಹಾರಾಷ್ಟ್ರದಲ್ಲಿ ಭೀಕರ ಬಸ್ ಅಪಘಾತ, ಮೃತರ ಕುಟುಂಬಗಳಿಗೆ 2 ಲಕ್ಷ, ಗಾಯಳುಗಳಿಗೆ 50ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Jul 01, 2023 | 12:08 PM

Share

ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 26 ಜನರು ಸಾವನ್ನಪ್ಪಿದ್ದು, ಇದೀಗ ಅವರಿಗೆ ದೇಶ ಪ್ರಧಾನಿ ಸಂತಾಪ ಸೂಚಿಸಿದ್ದು, ಸಾವನ್ನಪ್ಪಿರುವರ ಕುಟುಂಬಗಳಿಗೆ 2 ಲಕ್ಷ ಮತ್ತು ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಅಪಘಾತದ ಬಗ್ಗೆ ಈಗಾಗಲೇ ಮಾಹಿತಿ ಪಡೆದಿದ್ದು, ರಾಜ್ಯ ಸರ್ಕಾರವು ಕೂಡ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ನಾನು ದೇವರಲ್ಲಿ ಪ್ರಾರ್ಥನೆ ಮಾಡುವೆ, ಸಾವನ್ನಪ್ಪಿರುವವ ಕುಟುಂಬಗಳಿಗೆ ದುಃಖ ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಜತೆಗೆ ಗಾಯಗೊಂಡಿರುವವರು ಶೀಘ್ರವಾಗಿ ಗುಣಮುಖವಾಗಿ ಬರಲಿ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.

ಇಂದು ಮುಂಜಾನೆ ಬುಲ್ಧಾನಾ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಬಸ್ಸೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು , 26 ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ. ಇತರ ಪ್ರಯಾಣಿಕರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಾಣ ಉಳಿಸಿಕೊಳ್ಳಲು ಅದೇ ರಸ್ತೆಯಲ್ಲಿ ಪ್ರಯಾಣಿಸುತ್ತಿದ್ದ ಜನರನ್ನು ಸಹಾಯಕ್ಕಾಗಿ ಅಂಗಲಾಚಿದರೂ ಯಾರೊಬ್ಬರು ಕೂಡ ಸಹಾಯಕ್ಕೆ ಬಂದಿಲ್ಲ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಪೊಲೀಸರು ಶಂಕಿಸಿರುವ ಪ್ರಕಾರ ನಾಗ್ಪುರದಿಂದ ಪುಣೆಗೆ ತೆರಳುತ್ತಿದ್ದ ಬಸ್ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಕಂಬಕ್ಕೆ ಡಿಕ್ಕಿ ಹೊಡೆದು, ಅಲ್ಲಿದ್ದ ಡಿವೈಡರ್​ಗೂ ಕೂಡ ಡಿಕ್ಕಿ ಹೊಡೆದ ಕಾರಣ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಿದ್ದಾರೆ. ಆದರೆ ಬಸ್ ಚಾಲಕ ಟೈರ್ ಒಡೆದು ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 34 ಪ್ರಯಾಣಿಕರಲ್ಲಿ 26 ಜನರು ಸಾವನ್ನಪ್ಪಿದ್ದು ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಜನ ಸಾಯುತ್ತಿದ್ದರು, ಸಹಾಯಕ್ಕಾಗಿ ಅಂಗಲಾಚಿದರೂ ನಿಲ್ಲದೇ ಹೋದವು ಕಾರುಗಳು; ಮಹಾ ಬಸ್ ದುರಂತದಲ್ಲಿ ಬದುಕುಳಿದವರ ಅಳಲು

5 ಲಕ್ಷ ನೆರವು ನೀಡುವುದಾಗಿ ಸಿಎಂ ಶಿಂಧೆ ಘೋಷಿಸಿದ್ದಾರೆ

ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಸಮೃದ್ಧಿ ಹೆದ್ದಾರಿಯಲ್ಲಿ ಖಾಸಗಿ ಬಸ್‌ನ ಭೀಕರ ಅಪಘಾತದ ಬಗ್ಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಸಹಾಯಧನ ಘೋಷಿಸಿದ್ದಾರೆ. ಇದರ ಜತೆಗೆ ಈ ಅಪಘಾತದ ಬಗ್ಗೆ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತಕ್ಕೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಫೇಸ್​ ಬುಕ್​​ ಮೂಲಕ ಸಂತಾಪ ಸೂಚಿಸಿದ್ದಾರೆ. ಟಿವಿ9 ವರದಿ ಮಾಡಿದ ನಂತರ, ಈ ಬಗ್ಗೆ ಫೇಸ್​ ಬುಕ್​​ನಲ್ಲಿ ಟಿವಿ9 ವೆಬ್​​ ಸೈಟ್​ ಮಾಡಿದ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ.   ಮಹಾರಾಷ್ಟ್ರದ ಬುಲ್ಧಾನದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 25 ಮಂದಿ ಸಜೀವ ದಹನವಾಗಿರುವ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಫೇಸ್​ ಬುಕ್​​ನಲ್ಲಿ ಬರೆದುಕೊಂಡಿದ್ದಾರೆ.

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ