AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್ ಬಳಿ ಹೊತ್ತಿಉರಿದ ಬಸ್: 11 ಪ್ರಯಾಣಿಕರು ಸಜೀವ ದಹನ, 21 ಜನರಿಗೆ ಗಾಯ

ಶನಿವಾರ ಮುಂಜಾನೆ ಬಸ್ ಟ್ರಕ್‌ಗೆ ಢಿಕ್ಕಿ ಹೊಡೆದಿದೆ. ಈ ಪರಿಣಾಮ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಹೊತ್ತಿಉರಿದಿದ್ದು 11 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಹಾಗೂ 21 ಜನರಿಗೆ ಗಾಯಗಳಾಗಿದ್ದು ನಾಸಿಕ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಸಿಕ್ ಬಳಿ ಹೊತ್ತಿಉರಿದ ಬಸ್: 11 ಪ್ರಯಾಣಿಕರು ಸಜೀವ ದಹನ, 21 ಜನರಿಗೆ ಗಾಯ
TV9 Web
| Edited By: |

Updated on:Oct 08, 2022 | 10:50 AM

Share

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಬಳಿ ದುರ್ಘಟನೆಯೊಂದು ನಡೆದಿದೆ. ಚಲಿಸುತ್ತಿದ್ದ ಬಸ್ ಹೊತ್ತಿಉರಿದಿದ್ದು 11 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಹಾಗೂ 21 ಜನರಿಗೆ ಗಾಯಗಳಾಗಿದ್ದು ನಾಸಿಕ್​​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೂ ಮುನ್ನ ಶನಿವಾರ ಮುಂಜಾನೆ ಬಸ್ ಟ್ರಕ್‌ಗೆ ಢಿಕ್ಕಿ ಹೊಡೆದಿದೆ. ಈ ಪರಿಣಾಮ ಬಸ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಸ್ಥಿತಿ ನಿಯಂತ್ರಿಸುವ ಮುನ್ನವೇ ಬಸ್​ನಲ್ಲಿದ್ದ ಹನ್ನೊಂದು ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಔರಂಗಾಬಾದ್ ರಸ್ತೆಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖಾಸಗಿ ಸ್ಲೀಪರ್ ಕೋಚ್ ಬಸ್​ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ನಂದೂರ್ ನಾಕಾದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಕೆಲವೇ ನಿಮಿಷಗಳಲ್ಲಿ ಬೆಂಕಿ ಹೊತ್ತಿಕೊಂಡಿತು. ಸದ್ಯ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳ ಎಲ್ಲಾ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ನಾಸಿಕ್‌ನ ರಕ್ಷಕ ಸಚಿವ ದಾದಾ ಭೂಸೆ ಹೇಳಿದ್ದಾರೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ ಎಂದು ನಾಸಿಕ್ ರಕ್ಷಣಾ ಸಚಿವ ದಾದಾ ಭೂಸೆ ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ನಾವು ಇನ್ನೂ ನಿಖರವಾದ ಸಾವಿನ ಸಂಖ್ಯೆಯನ್ನು ನೀಡಲು ಸಾಧ್ಯವಿಲ್ಲ ಎಂದು ನಾಸಿಕ್ ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ 38 ಮಂದಿಯಲ್ಲಿ ಮೂವರು ಗಂಭೀರರಾಗಿದ್ದಾರೆ ಎಂದು ಅವರು ಹೇಳಿದರು.

ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಮೃತರ ಮುಂದಿನ ಕುಟುಂಬಕ್ಕೆ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಿದರು. ಈ ಬಗ್ಗೆ ಪಿಎಂಒ ಟ್ವೀಟ್ ಮಾಡಿದೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ನಾಸಿಕ್ (ಮಹಾರಾಷ್ಟ್ರ)ದಲ್ಲಿ ನಡೆದ ರಸ್ತೆ ಅಪಘಾತ ಹೃದಯವಿದ್ರಾವಕವಾಗಿದೆ. ಈ ಭೀಕರ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರ ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ.

ಬಸ್‌ನಲ್ಲಿ 30 ಪ್ರಯಾಣಿಕರಿದ್ದರು ಎಂದು ಚಿಂತಾಮಣಿ ಟ್ರಾವೆಲ್ಸ್ ಮಾಲೀಕ ಗುಡ್ಡು ಜಯಸ್ವಾಲ್ ತಿಳಿಸಿದ್ದಾರೆ. ವಾಶಿಮ್‌ನಿಂದ ಬಸ್ ಹತ್ತಿದ ಪ್ರಯಾಣಿಕರ ಗಣೇಶ್ ಲಾಂಡ್ಗೆ, ಬಸ್ ಯಾವುದೋ ಡಿಕ್ಕಿ ಹೊಡೆದ ನಂತರ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿತು. ಕೆಲವರು ಕಿಟಕಿಯಿಂದ ತಪ್ಪಿಸಿಕೊಂಡರು ಎಂದು ಹೇಳಿದರು.

ನನ್ನ ಮನೆಯ ಸಮೀಪವೇ ಈ ಘಟನೆ ನಡೆದಿದೆ. ಭಾರೀ ವಾಹನಗಳು ಇಲ್ಲಿ ಸಂಚರಿಸುತ್ತವೆ. ಘಟನೆಯ ನಂತರ ಬಸ್‌ಗೆ ಬೆಂಕಿ ತಗುಲಿ ಜನರು ಸುಟ್ಟು ಕರಕಲಾದರು. ನಾವು ಅದನ್ನು ನೋಡಿದ್ದೇವೆ ಆದರೆ ಏನೂ ಮಾಡಲು ಸಾಧ್ಯವಾಗಲಿಲ್ಲ. ನಂತರ ಅಗ್ನಿಶಾಮಕ ದಳ ಮತ್ತು ಪೊಲೀಸರು ಬಂದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:06 am, Sat, 8 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ