AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಮಾರ್ಗ ಮಧ್ಯೆ ಬಸ್​ ಚಾಲಕನಿಗೆ ಕಾಣಿಸಿಕೊಂಡ ಎದೆನೋವು, ಸಾವಿಗೂ ಮುನ್ನ 48 ಪ್ರಯಾಣಿಕರ ರಕ್ಷಣೆ

ಬಸ್​ ಚಾಲಕರೊಬ್ಬರಿಗೆ ಹಠಾತ್​ ಎದೆನೋವು ಕಾಣಿಸಿಕೊಂಡಿತ್ತು. ನಿಯಂತ್ರಣ ತಪ್ಪಿತ್ತು, ಆದರೂ ಸಾವಿಗೂ ಮುನ್ನ ಅವರು 48 ಪ್ರಯಾಣಿಕರನ್ನು ರಕ್ಷಿಸಿ ಹೀರೋ ಎನಿಸಿಕೊಂಡಿದ್ದಾರೆ. ಖಾಸಗಿ ಬಸ್​ವೊಂದು ಭುವನೇಶ್ವರಕ್ಕೆ ಹೊರಟಿತ್ತು, ಮಾರ್ಗಮಧ್ಯೆ ಬಸ್ ಚಾಲಕರಿಗೆ ಎದೆನೋವು ಕಾಣಿಸಿಕೊಂಡಿತ್ತು, ಅವರು ನಿಯಂತ್ರಣ ಕಳೆದುಕೊಳ್ಳುತ್ತಿದ್ದರು, ಹಾಗಾಗಿ ಪ್ರಯಾಣಿಕರಿಗೆ ಏನು ಆಗಬಾರದೆಂದು ರಸ್ತೆಯ ಪಕ್ಕದಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು ಬಸ್​ ಅನ್ನು ನಿಲ್ಲಿಸಿದ್ದಾರೆ.

ಒಡಿಶಾ: ಮಾರ್ಗ ಮಧ್ಯೆ ಬಸ್​ ಚಾಲಕನಿಗೆ ಕಾಣಿಸಿಕೊಂಡ ಎದೆನೋವು, ಸಾವಿಗೂ ಮುನ್ನ 48 ಪ್ರಯಾಣಿಕರ ರಕ್ಷಣೆ
ಹೃದಯಸ್ತಂಭನ
ನಯನಾ ರಾಜೀವ್
|

Updated on: Oct 29, 2023 | 8:26 AM

Share

ಬಸ್​ ಚಾಲಕರೊಬ್ಬರಿಗೆ ಹಠಾತ್​ ಎದೆನೋವು ಕಾಣಿಸಿಕೊಂಡಿತ್ತು. ನಿಯಂತ್ರಣ ತಪ್ಪಿತ್ತು, ಆದರೂ ಸಾವಿಗೂ ಮುನ್ನ ಅವರು 48 ಪ್ರಯಾಣಿಕರನ್ನು ರಕ್ಷಿಸಿ ಹೀರೋ ಎನಿಸಿಕೊಂಡಿದ್ದಾರೆ. ಖಾಸಗಿ ಬಸ್​ವೊಂದು ಭುವನೇಶ್ವರಕ್ಕೆ ಹೊರಟಿತ್ತು, ಮಾರ್ಗಮಧ್ಯೆ ಬಸ್ ಚಾಲಕರಿಗೆ ಎದೆನೋವು ಕಾಣಿಸಿಕೊಂಡಿತ್ತು, ಅವರು ನಿಯಂತ್ರಣ ಕಳೆದುಕೊಳ್ಳುತ್ತಿದ್ದರು, ಹಾಗಾಗಿ ಪ್ರಯಾಣಿಕರಿಗೆ ಏನು ಆಗಬಾರದೆಂದು ರಸ್ತೆಯ ಪಕ್ಕದಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು ಬಸ್​ ಅನ್ನು ನಿಲ್ಲಿಸಿದ್ದಾರೆ.

ಕಂಧಮಾಲ್ ಜಿಲ್ಲೆಯ ಪಬುರಿಯಾ ಗ್ರಾಮದ ಬಳಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಸ್‌ನ ಚಾಲಕ ಸನಾ ಪ್ರಧಾನ್ ಎಂದು ಗುರುತಿಸಲಾಗಿದ್ದು, ಚಾಲನೆ ಮಾಡುವಾಗ ಎದೆ ನೋವು ಕಾಣಿಸಿಕೊಂಡಿತ್ತು. ಅವರು ಗೋಡೆಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ ಬಸ್​ ಅಲ್ಲಿಯೇ ನಿಂತಿದೆ, 48 ಪ್ರಯಾಣಿಕರು ಕೂಡ ಸುರಕ್ಷಿತವಾಗಿದ್ದಾರೆ.

ಖಾಸಗಿ ಬಸ್, ಮಾ ಲಕ್ಷ್ಮಿ ಸಾಮಾನ್ಯವಾಗಿ ಪ್ರತಿ ರಾತ್ರಿ ಕಂಧಮಾಲ್‌ನ ಸಾರಂಗರ್‌ನಿಂದ ಜಿ ಉದಯಗಿರಿ ಮೂಲಕ ರಾಜ್ಯದ ರಾಜಧಾನಿ ಭುವನೇಶ್ವರಕ್ಕೆ ಚಲಿಸುತ್ತದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Heart Attack and Cardiac Arrest : ಹೃದಯಾಘಾತ ಹಾಗೂ ಹೃದಯಸ್ತಂಭನ ನಡುವಿನ ವ್ಯತ್ಯಾಸವೇನು?

ಘಟನೆಯ ನಂತರ, ಚಾಲಕರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಲ್ಲಿನ ವೈದ್ಯರು ಹೃದಯ ಸ್ತಂಭನದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ವಲ್ಪ ಸಮಯದ ಬಳಿಕ ಮತ್ತೋರ್ವ ಚಾಲಕರ ಸಹಾಯದಿಂದ ಬಸ್​ ತಲುಪಬೇಕಾದ ಸ್ಥಳವನ್ನು ತಲುಪಿತು. ಮರಣೋತ್ತರ ಪರೀಕ್ಷೆಯ ನಂತರ ಪ್ರಧಾನ್ ಅವರ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು. ತನಿಖೆಯನ್ನೂ ಆರಂಭಿಸಲಾಗಿದೆ ಎಂದು ಇನ್​ಸ್ಪೆಕ್ಟರ್ ಸೆಂಧಾ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ