Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ: ಮಾರ್ಗ ಮಧ್ಯೆ ಬಸ್​ ಚಾಲಕನಿಗೆ ಕಾಣಿಸಿಕೊಂಡ ಎದೆನೋವು, ಸಾವಿಗೂ ಮುನ್ನ 48 ಪ್ರಯಾಣಿಕರ ರಕ್ಷಣೆ

ಬಸ್​ ಚಾಲಕರೊಬ್ಬರಿಗೆ ಹಠಾತ್​ ಎದೆನೋವು ಕಾಣಿಸಿಕೊಂಡಿತ್ತು. ನಿಯಂತ್ರಣ ತಪ್ಪಿತ್ತು, ಆದರೂ ಸಾವಿಗೂ ಮುನ್ನ ಅವರು 48 ಪ್ರಯಾಣಿಕರನ್ನು ರಕ್ಷಿಸಿ ಹೀರೋ ಎನಿಸಿಕೊಂಡಿದ್ದಾರೆ. ಖಾಸಗಿ ಬಸ್​ವೊಂದು ಭುವನೇಶ್ವರಕ್ಕೆ ಹೊರಟಿತ್ತು, ಮಾರ್ಗಮಧ್ಯೆ ಬಸ್ ಚಾಲಕರಿಗೆ ಎದೆನೋವು ಕಾಣಿಸಿಕೊಂಡಿತ್ತು, ಅವರು ನಿಯಂತ್ರಣ ಕಳೆದುಕೊಳ್ಳುತ್ತಿದ್ದರು, ಹಾಗಾಗಿ ಪ್ರಯಾಣಿಕರಿಗೆ ಏನು ಆಗಬಾರದೆಂದು ರಸ್ತೆಯ ಪಕ್ಕದಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು ಬಸ್​ ಅನ್ನು ನಿಲ್ಲಿಸಿದ್ದಾರೆ.

ಒಡಿಶಾ: ಮಾರ್ಗ ಮಧ್ಯೆ ಬಸ್​ ಚಾಲಕನಿಗೆ ಕಾಣಿಸಿಕೊಂಡ ಎದೆನೋವು, ಸಾವಿಗೂ ಮುನ್ನ 48 ಪ್ರಯಾಣಿಕರ ರಕ್ಷಣೆ
ಹೃದಯಸ್ತಂಭನ
Follow us
ನಯನಾ ರಾಜೀವ್
|

Updated on: Oct 29, 2023 | 8:26 AM

ಬಸ್​ ಚಾಲಕರೊಬ್ಬರಿಗೆ ಹಠಾತ್​ ಎದೆನೋವು ಕಾಣಿಸಿಕೊಂಡಿತ್ತು. ನಿಯಂತ್ರಣ ತಪ್ಪಿತ್ತು, ಆದರೂ ಸಾವಿಗೂ ಮುನ್ನ ಅವರು 48 ಪ್ರಯಾಣಿಕರನ್ನು ರಕ್ಷಿಸಿ ಹೀರೋ ಎನಿಸಿಕೊಂಡಿದ್ದಾರೆ. ಖಾಸಗಿ ಬಸ್​ವೊಂದು ಭುವನೇಶ್ವರಕ್ಕೆ ಹೊರಟಿತ್ತು, ಮಾರ್ಗಮಧ್ಯೆ ಬಸ್ ಚಾಲಕರಿಗೆ ಎದೆನೋವು ಕಾಣಿಸಿಕೊಂಡಿತ್ತು, ಅವರು ನಿಯಂತ್ರಣ ಕಳೆದುಕೊಳ್ಳುತ್ತಿದ್ದರು, ಹಾಗಾಗಿ ಪ್ರಯಾಣಿಕರಿಗೆ ಏನು ಆಗಬಾರದೆಂದು ರಸ್ತೆಯ ಪಕ್ಕದಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು ಬಸ್​ ಅನ್ನು ನಿಲ್ಲಿಸಿದ್ದಾರೆ.

ಕಂಧಮಾಲ್ ಜಿಲ್ಲೆಯ ಪಬುರಿಯಾ ಗ್ರಾಮದ ಬಳಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಸ್‌ನ ಚಾಲಕ ಸನಾ ಪ್ರಧಾನ್ ಎಂದು ಗುರುತಿಸಲಾಗಿದ್ದು, ಚಾಲನೆ ಮಾಡುವಾಗ ಎದೆ ನೋವು ಕಾಣಿಸಿಕೊಂಡಿತ್ತು. ಅವರು ಗೋಡೆಗೆ ಬಸ್​ ಡಿಕ್ಕಿ ಹೊಡೆದ ಪರಿಣಾಮ ಬಸ್​ ಅಲ್ಲಿಯೇ ನಿಂತಿದೆ, 48 ಪ್ರಯಾಣಿಕರು ಕೂಡ ಸುರಕ್ಷಿತವಾಗಿದ್ದಾರೆ.

ಖಾಸಗಿ ಬಸ್, ಮಾ ಲಕ್ಷ್ಮಿ ಸಾಮಾನ್ಯವಾಗಿ ಪ್ರತಿ ರಾತ್ರಿ ಕಂಧಮಾಲ್‌ನ ಸಾರಂಗರ್‌ನಿಂದ ಜಿ ಉದಯಗಿರಿ ಮೂಲಕ ರಾಜ್ಯದ ರಾಜಧಾನಿ ಭುವನೇಶ್ವರಕ್ಕೆ ಚಲಿಸುತ್ತದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: Heart Attack and Cardiac Arrest : ಹೃದಯಾಘಾತ ಹಾಗೂ ಹೃದಯಸ್ತಂಭನ ನಡುವಿನ ವ್ಯತ್ಯಾಸವೇನು?

ಘಟನೆಯ ನಂತರ, ಚಾಲಕರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಲ್ಲಿನ ವೈದ್ಯರು ಹೃದಯ ಸ್ತಂಭನದಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ವಲ್ಪ ಸಮಯದ ಬಳಿಕ ಮತ್ತೋರ್ವ ಚಾಲಕರ ಸಹಾಯದಿಂದ ಬಸ್​ ತಲುಪಬೇಕಾದ ಸ್ಥಳವನ್ನು ತಲುಪಿತು. ಮರಣೋತ್ತರ ಪರೀಕ್ಷೆಯ ನಂತರ ಪ್ರಧಾನ್ ಅವರ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು. ತನಿಖೆಯನ್ನೂ ಆರಂಭಿಸಲಾಗಿದೆ ಎಂದು ಇನ್​ಸ್ಪೆಕ್ಟರ್ ಸೆಂಧಾ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್