AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಗೆ ಜಾರಿದ ಚಾಲಕ, ನದಿಗೆ ಬಿದ್ದ ಬಸ್​; ಒಂದು ವರ್ಷದ ಮಗು ಸೇರಿ ಮೂವರು ಸಾವು

ಬಸ್​ ನದಿಗೆ ಬೀಳಲು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಚಾಲಕನಿಗೆ ನಿದ್ದೆ ಬಂದ ಪರಿಣಾಮ ಬಸ್​ ನಿಯಂತ್ರಣ ತಪ್ಪಿ ಮೆಲ್ಖೋದ್ರಾ ನದಿಗೆ ಬಿದ್ದಿದೆ.

ನಿದ್ದೆಗೆ ಜಾರಿದ ಚಾಲಕ, ನದಿಗೆ ಬಿದ್ದ ಬಸ್​; ಒಂದು ವರ್ಷದ ಮಗು ಸೇರಿ ಮೂವರು ಸಾವು
ನದಿಗೆ ಬಿದ್ದ ಬಸ್​
TV9 Web
| Edited By: |

Updated on: Jan 02, 2022 | 11:34 AM

Share

ಅಲಿರಾಜ್​ಪುರ: ಬಸ್​ವೊಂದು ನದಿ(Bus Fell Into River)ಗೆ ಬಿದ್ದು ಒಂದು ವರ್ಷದ ಮಗು ಸೇರಿ ಮೂರು ಮಂದಿ ಮೃತಪಟ್ಟು, 28 ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶ(Madhya Pradesh)ದ ಅಲಿರಾಜ್​ಪುರ ಜಿಲ್ಲೆಯಲ್ಲಿ ನಡೆದಿದೆ.  ಇಂದು ಮುಂಜಾನೆ 6ಗಂಟೆ ಹೊತ್ತಿಗೆ ಅಲಿರಾಜ್​ಪುರದ ಚಾಂದ್​ಪುರ ಗ್ರಾಮದ ಬಳಿ ಬಸ್​ ನದಿಗೆ ಬಿದ್ದಿದೆ. ಅಂದಹಾಗೆ, ಈ ಬಸ್​ ಅಲಿರಾಜ್​ಪುರದಿಂದ ಗುಜರಾತ್​​ನ ಉದೇಪುರಕ್ಕೆ ಹೋಗುತ್ತಿತ್ತು ಎಂಬುದಾಗಿ ಪೊಲೀಸ್​ ಅಧಿಕಾರಿ ಮನೋಜ್​ ಕುಮಾರ್ ತಿಳಿಸಿದ್ದಾರೆ.

ಬಸ್​ ನದಿಗೆ ಬೀಳಲು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಚಾಲಕನಿಗೆ ನಿದ್ದೆ ಬಂದ ಪರಿಣಾಮ ಬಸ್​ ನಿಯಂತ್ರಣ ತಪ್ಪಿ ಮೆಲ್ಖೋದ್ರಾ ನದಿಗೆ ಬಿದ್ದಿದೆ. ಮೃತರನ್ನು ಕೈಲಾಶ್​ ಮೇದಾ (48), ಮೀರಾಬಾಯಿ (46) ಎಂದು ಗುರುತಿಸಲಾಗಿದೆ. ಮೃತಪಟ್ಟ ಒಂದು ವರ್ಷದ ಮಗುವಿನ ಹೆಸರು ಗೊತ್ತಾಗಿಲ್ಲ. ಇನ್ನು 28 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟ ಮೂರೂ ಮಂದಿ ಗುಜರಾತ್​​ನವರೇ ಆಗಿದ್ದಾರೆ. ಜಿಲ್ಲಾಧಿಕಾರಿ ಮನೋಜ್​ ಪುಷ್ಪ್​ ಅವರು ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಾಗೇ, ಇದೇ ವರ್ಷ ಫೆಬ್ರವರಿಯಲ್ಲಿ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬಸ್​ವೊಂದು ಸೇತುವೆಯ ಕೆಳಗೆ ಬಿದ್ದು 51 ಮಂದಿ ಮೃತಪಟ್ಟಿದ್ದರು. ಮುಂಜಾನೆ 7.30ರ ಹೊತ್ತಿಗೆ ಘಟನೆ ನಡೆದಿತ್ತು.  ಸೆಪ್ಟೆಂಬರ್​ನಲ್ಲಿ ಮೇಘಾಲಯದಲ್ಲಿ ಇಂಥದ್ದೇ ಒಂದು ದುರ್ಘಟನೆ ನಡೆದಿತ್ತು. ತುರಾದಿಂದ ಶಿಲ್ಲಾಂಘ್​ಗೆ ತೆರಳುತ್ತಿದ್ದ ಬಸ್​ ರಂಗ್ಡಿ ನದಿಗೆ ಬಿದ್ದು, ಚಾಲಕ ಸೇರಿ ಆರು ಮಂದಿ ಮೃತಪಟ್ಟಿದ್ದರು.  2020ರ ಫೆಬ್ರವರಿಯಲ್ಲಿ ಜೈಪುರದಲ್ಲಿ. ಮುದವೆ ಮುಗಿಸಿ ವಾಪಸ್​ ಬರುತ್ತಿದ್ದ ಖಾಸಗಿ ಬಸ್​ವೊಂದು ಬುಂಡಿ ಜಿಲ್ಲೆಯ ಕೋಟಾ-ದೌಸಾ ಹೆದ್ದಾರಿಯಲ್ಲಿ ಮೇಜ್​ ನದಿಗೆ ಬಿದ್ದಿತ್ತು. ಈ ದುರಂತದಲ್ಲಿ  25ಮಂದಿ ಮೃತಪಟ್ಟಿದ್ದರು.ಈ ಬಸ್​ನಲ್ಲಿ ಅತ್ಯಂತ ಹೆಚ್ಚಿನ ಜನರು ತುಂಬಿ ಹೋಗಿದ್ದರು. ಚಾಲಕನಿಗೆ ನಿಯಂತ್ರಣ ಮಾಡಲಾಗದೆ ಅವಘಡ ಸಂಭವಿಸಿತ್ತು.

ಇದನ್ನೂ ಓದಿ: SSLC ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಪತ್ರ ಬರೆದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ