AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಗೆ ಜಾರಿದ ಚಾಲಕ, ನದಿಗೆ ಬಿದ್ದ ಬಸ್​; ಒಂದು ವರ್ಷದ ಮಗು ಸೇರಿ ಮೂವರು ಸಾವು

ಬಸ್​ ನದಿಗೆ ಬೀಳಲು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಚಾಲಕನಿಗೆ ನಿದ್ದೆ ಬಂದ ಪರಿಣಾಮ ಬಸ್​ ನಿಯಂತ್ರಣ ತಪ್ಪಿ ಮೆಲ್ಖೋದ್ರಾ ನದಿಗೆ ಬಿದ್ದಿದೆ.

ನಿದ್ದೆಗೆ ಜಾರಿದ ಚಾಲಕ, ನದಿಗೆ ಬಿದ್ದ ಬಸ್​; ಒಂದು ವರ್ಷದ ಮಗು ಸೇರಿ ಮೂವರು ಸಾವು
ನದಿಗೆ ಬಿದ್ದ ಬಸ್​
TV9 Web
| Edited By: |

Updated on: Jan 02, 2022 | 11:34 AM

Share

ಅಲಿರಾಜ್​ಪುರ: ಬಸ್​ವೊಂದು ನದಿ(Bus Fell Into River)ಗೆ ಬಿದ್ದು ಒಂದು ವರ್ಷದ ಮಗು ಸೇರಿ ಮೂರು ಮಂದಿ ಮೃತಪಟ್ಟು, 28 ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶ(Madhya Pradesh)ದ ಅಲಿರಾಜ್​ಪುರ ಜಿಲ್ಲೆಯಲ್ಲಿ ನಡೆದಿದೆ.  ಇಂದು ಮುಂಜಾನೆ 6ಗಂಟೆ ಹೊತ್ತಿಗೆ ಅಲಿರಾಜ್​ಪುರದ ಚಾಂದ್​ಪುರ ಗ್ರಾಮದ ಬಳಿ ಬಸ್​ ನದಿಗೆ ಬಿದ್ದಿದೆ. ಅಂದಹಾಗೆ, ಈ ಬಸ್​ ಅಲಿರಾಜ್​ಪುರದಿಂದ ಗುಜರಾತ್​​ನ ಉದೇಪುರಕ್ಕೆ ಹೋಗುತ್ತಿತ್ತು ಎಂಬುದಾಗಿ ಪೊಲೀಸ್​ ಅಧಿಕಾರಿ ಮನೋಜ್​ ಕುಮಾರ್ ತಿಳಿಸಿದ್ದಾರೆ.

ಬಸ್​ ನದಿಗೆ ಬೀಳಲು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಚಾಲಕನಿಗೆ ನಿದ್ದೆ ಬಂದ ಪರಿಣಾಮ ಬಸ್​ ನಿಯಂತ್ರಣ ತಪ್ಪಿ ಮೆಲ್ಖೋದ್ರಾ ನದಿಗೆ ಬಿದ್ದಿದೆ. ಮೃತರನ್ನು ಕೈಲಾಶ್​ ಮೇದಾ (48), ಮೀರಾಬಾಯಿ (46) ಎಂದು ಗುರುತಿಸಲಾಗಿದೆ. ಮೃತಪಟ್ಟ ಒಂದು ವರ್ಷದ ಮಗುವಿನ ಹೆಸರು ಗೊತ್ತಾಗಿಲ್ಲ. ಇನ್ನು 28 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟ ಮೂರೂ ಮಂದಿ ಗುಜರಾತ್​​ನವರೇ ಆಗಿದ್ದಾರೆ. ಜಿಲ್ಲಾಧಿಕಾರಿ ಮನೋಜ್​ ಪುಷ್ಪ್​ ಅವರು ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಾಗೇ, ಇದೇ ವರ್ಷ ಫೆಬ್ರವರಿಯಲ್ಲಿ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬಸ್​ವೊಂದು ಸೇತುವೆಯ ಕೆಳಗೆ ಬಿದ್ದು 51 ಮಂದಿ ಮೃತಪಟ್ಟಿದ್ದರು. ಮುಂಜಾನೆ 7.30ರ ಹೊತ್ತಿಗೆ ಘಟನೆ ನಡೆದಿತ್ತು.  ಸೆಪ್ಟೆಂಬರ್​ನಲ್ಲಿ ಮೇಘಾಲಯದಲ್ಲಿ ಇಂಥದ್ದೇ ಒಂದು ದುರ್ಘಟನೆ ನಡೆದಿತ್ತು. ತುರಾದಿಂದ ಶಿಲ್ಲಾಂಘ್​ಗೆ ತೆರಳುತ್ತಿದ್ದ ಬಸ್​ ರಂಗ್ಡಿ ನದಿಗೆ ಬಿದ್ದು, ಚಾಲಕ ಸೇರಿ ಆರು ಮಂದಿ ಮೃತಪಟ್ಟಿದ್ದರು.  2020ರ ಫೆಬ್ರವರಿಯಲ್ಲಿ ಜೈಪುರದಲ್ಲಿ. ಮುದವೆ ಮುಗಿಸಿ ವಾಪಸ್​ ಬರುತ್ತಿದ್ದ ಖಾಸಗಿ ಬಸ್​ವೊಂದು ಬುಂಡಿ ಜಿಲ್ಲೆಯ ಕೋಟಾ-ದೌಸಾ ಹೆದ್ದಾರಿಯಲ್ಲಿ ಮೇಜ್​ ನದಿಗೆ ಬಿದ್ದಿತ್ತು. ಈ ದುರಂತದಲ್ಲಿ  25ಮಂದಿ ಮೃತಪಟ್ಟಿದ್ದರು.ಈ ಬಸ್​ನಲ್ಲಿ ಅತ್ಯಂತ ಹೆಚ್ಚಿನ ಜನರು ತುಂಬಿ ಹೋಗಿದ್ದರು. ಚಾಲಕನಿಗೆ ನಿಯಂತ್ರಣ ಮಾಡಲಾಗದೆ ಅವಘಡ ಸಂಭವಿಸಿತ್ತು.

ಇದನ್ನೂ ಓದಿ: SSLC ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಪತ್ರ ಬರೆದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು