AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಗೆ ಜಾರಿದ ಚಾಲಕ, ನದಿಗೆ ಬಿದ್ದ ಬಸ್​; ಒಂದು ವರ್ಷದ ಮಗು ಸೇರಿ ಮೂವರು ಸಾವು

ಬಸ್​ ನದಿಗೆ ಬೀಳಲು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಚಾಲಕನಿಗೆ ನಿದ್ದೆ ಬಂದ ಪರಿಣಾಮ ಬಸ್​ ನಿಯಂತ್ರಣ ತಪ್ಪಿ ಮೆಲ್ಖೋದ್ರಾ ನದಿಗೆ ಬಿದ್ದಿದೆ.

ನಿದ್ದೆಗೆ ಜಾರಿದ ಚಾಲಕ, ನದಿಗೆ ಬಿದ್ದ ಬಸ್​; ಒಂದು ವರ್ಷದ ಮಗು ಸೇರಿ ಮೂವರು ಸಾವು
ನದಿಗೆ ಬಿದ್ದ ಬಸ್​
TV9 Web
| Edited By: |

Updated on: Jan 02, 2022 | 11:34 AM

Share

ಅಲಿರಾಜ್​ಪುರ: ಬಸ್​ವೊಂದು ನದಿ(Bus Fell Into River)ಗೆ ಬಿದ್ದು ಒಂದು ವರ್ಷದ ಮಗು ಸೇರಿ ಮೂರು ಮಂದಿ ಮೃತಪಟ್ಟು, 28 ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶ(Madhya Pradesh)ದ ಅಲಿರಾಜ್​ಪುರ ಜಿಲ್ಲೆಯಲ್ಲಿ ನಡೆದಿದೆ.  ಇಂದು ಮುಂಜಾನೆ 6ಗಂಟೆ ಹೊತ್ತಿಗೆ ಅಲಿರಾಜ್​ಪುರದ ಚಾಂದ್​ಪುರ ಗ್ರಾಮದ ಬಳಿ ಬಸ್​ ನದಿಗೆ ಬಿದ್ದಿದೆ. ಅಂದಹಾಗೆ, ಈ ಬಸ್​ ಅಲಿರಾಜ್​ಪುರದಿಂದ ಗುಜರಾತ್​​ನ ಉದೇಪುರಕ್ಕೆ ಹೋಗುತ್ತಿತ್ತು ಎಂಬುದಾಗಿ ಪೊಲೀಸ್​ ಅಧಿಕಾರಿ ಮನೋಜ್​ ಕುಮಾರ್ ತಿಳಿಸಿದ್ದಾರೆ.

ಬಸ್​ ನದಿಗೆ ಬೀಳಲು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಚಾಲಕನಿಗೆ ನಿದ್ದೆ ಬಂದ ಪರಿಣಾಮ ಬಸ್​ ನಿಯಂತ್ರಣ ತಪ್ಪಿ ಮೆಲ್ಖೋದ್ರಾ ನದಿಗೆ ಬಿದ್ದಿದೆ. ಮೃತರನ್ನು ಕೈಲಾಶ್​ ಮೇದಾ (48), ಮೀರಾಬಾಯಿ (46) ಎಂದು ಗುರುತಿಸಲಾಗಿದೆ. ಮೃತಪಟ್ಟ ಒಂದು ವರ್ಷದ ಮಗುವಿನ ಹೆಸರು ಗೊತ್ತಾಗಿಲ್ಲ. ಇನ್ನು 28 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟ ಮೂರೂ ಮಂದಿ ಗುಜರಾತ್​​ನವರೇ ಆಗಿದ್ದಾರೆ. ಜಿಲ್ಲಾಧಿಕಾರಿ ಮನೋಜ್​ ಪುಷ್ಪ್​ ಅವರು ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಾಗೇ, ಇದೇ ವರ್ಷ ಫೆಬ್ರವರಿಯಲ್ಲಿ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬಸ್​ವೊಂದು ಸೇತುವೆಯ ಕೆಳಗೆ ಬಿದ್ದು 51 ಮಂದಿ ಮೃತಪಟ್ಟಿದ್ದರು. ಮುಂಜಾನೆ 7.30ರ ಹೊತ್ತಿಗೆ ಘಟನೆ ನಡೆದಿತ್ತು.  ಸೆಪ್ಟೆಂಬರ್​ನಲ್ಲಿ ಮೇಘಾಲಯದಲ್ಲಿ ಇಂಥದ್ದೇ ಒಂದು ದುರ್ಘಟನೆ ನಡೆದಿತ್ತು. ತುರಾದಿಂದ ಶಿಲ್ಲಾಂಘ್​ಗೆ ತೆರಳುತ್ತಿದ್ದ ಬಸ್​ ರಂಗ್ಡಿ ನದಿಗೆ ಬಿದ್ದು, ಚಾಲಕ ಸೇರಿ ಆರು ಮಂದಿ ಮೃತಪಟ್ಟಿದ್ದರು.  2020ರ ಫೆಬ್ರವರಿಯಲ್ಲಿ ಜೈಪುರದಲ್ಲಿ. ಮುದವೆ ಮುಗಿಸಿ ವಾಪಸ್​ ಬರುತ್ತಿದ್ದ ಖಾಸಗಿ ಬಸ್​ವೊಂದು ಬುಂಡಿ ಜಿಲ್ಲೆಯ ಕೋಟಾ-ದೌಸಾ ಹೆದ್ದಾರಿಯಲ್ಲಿ ಮೇಜ್​ ನದಿಗೆ ಬಿದ್ದಿತ್ತು. ಈ ದುರಂತದಲ್ಲಿ  25ಮಂದಿ ಮೃತಪಟ್ಟಿದ್ದರು.ಈ ಬಸ್​ನಲ್ಲಿ ಅತ್ಯಂತ ಹೆಚ್ಚಿನ ಜನರು ತುಂಬಿ ಹೋಗಿದ್ದರು. ಚಾಲಕನಿಗೆ ನಿಯಂತ್ರಣ ಮಾಡಲಾಗದೆ ಅವಘಡ ಸಂಭವಿಸಿತ್ತು.

ಇದನ್ನೂ ಓದಿ: SSLC ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಪತ್ರ ಬರೆದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ