AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿದ್ದೆಗೆ ಜಾರಿದ ಚಾಲಕ, ನದಿಗೆ ಬಿದ್ದ ಬಸ್​; ಒಂದು ವರ್ಷದ ಮಗು ಸೇರಿ ಮೂವರು ಸಾವು

ಬಸ್​ ನದಿಗೆ ಬೀಳಲು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಚಾಲಕನಿಗೆ ನಿದ್ದೆ ಬಂದ ಪರಿಣಾಮ ಬಸ್​ ನಿಯಂತ್ರಣ ತಪ್ಪಿ ಮೆಲ್ಖೋದ್ರಾ ನದಿಗೆ ಬಿದ್ದಿದೆ.

ನಿದ್ದೆಗೆ ಜಾರಿದ ಚಾಲಕ, ನದಿಗೆ ಬಿದ್ದ ಬಸ್​; ಒಂದು ವರ್ಷದ ಮಗು ಸೇರಿ ಮೂವರು ಸಾವು
ನದಿಗೆ ಬಿದ್ದ ಬಸ್​
TV9 Web
| Edited By: |

Updated on: Jan 02, 2022 | 11:34 AM

Share

ಅಲಿರಾಜ್​ಪುರ: ಬಸ್​ವೊಂದು ನದಿ(Bus Fell Into River)ಗೆ ಬಿದ್ದು ಒಂದು ವರ್ಷದ ಮಗು ಸೇರಿ ಮೂರು ಮಂದಿ ಮೃತಪಟ್ಟು, 28 ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶ(Madhya Pradesh)ದ ಅಲಿರಾಜ್​ಪುರ ಜಿಲ್ಲೆಯಲ್ಲಿ ನಡೆದಿದೆ.  ಇಂದು ಮುಂಜಾನೆ 6ಗಂಟೆ ಹೊತ್ತಿಗೆ ಅಲಿರಾಜ್​ಪುರದ ಚಾಂದ್​ಪುರ ಗ್ರಾಮದ ಬಳಿ ಬಸ್​ ನದಿಗೆ ಬಿದ್ದಿದೆ. ಅಂದಹಾಗೆ, ಈ ಬಸ್​ ಅಲಿರಾಜ್​ಪುರದಿಂದ ಗುಜರಾತ್​​ನ ಉದೇಪುರಕ್ಕೆ ಹೋಗುತ್ತಿತ್ತು ಎಂಬುದಾಗಿ ಪೊಲೀಸ್​ ಅಧಿಕಾರಿ ಮನೋಜ್​ ಕುಮಾರ್ ತಿಳಿಸಿದ್ದಾರೆ.

ಬಸ್​ ನದಿಗೆ ಬೀಳಲು ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ಈ ಚಾಲಕನಿಗೆ ನಿದ್ದೆ ಬಂದ ಪರಿಣಾಮ ಬಸ್​ ನಿಯಂತ್ರಣ ತಪ್ಪಿ ಮೆಲ್ಖೋದ್ರಾ ನದಿಗೆ ಬಿದ್ದಿದೆ. ಮೃತರನ್ನು ಕೈಲಾಶ್​ ಮೇದಾ (48), ಮೀರಾಬಾಯಿ (46) ಎಂದು ಗುರುತಿಸಲಾಗಿದೆ. ಮೃತಪಟ್ಟ ಒಂದು ವರ್ಷದ ಮಗುವಿನ ಹೆಸರು ಗೊತ್ತಾಗಿಲ್ಲ. ಇನ್ನು 28 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟ ಮೂರೂ ಮಂದಿ ಗುಜರಾತ್​​ನವರೇ ಆಗಿದ್ದಾರೆ. ಜಿಲ್ಲಾಧಿಕಾರಿ ಮನೋಜ್​ ಪುಷ್ಪ್​ ಅವರು ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಾಗೇ, ಇದೇ ವರ್ಷ ಫೆಬ್ರವರಿಯಲ್ಲಿ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಬಸ್​ವೊಂದು ಸೇತುವೆಯ ಕೆಳಗೆ ಬಿದ್ದು 51 ಮಂದಿ ಮೃತಪಟ್ಟಿದ್ದರು. ಮುಂಜಾನೆ 7.30ರ ಹೊತ್ತಿಗೆ ಘಟನೆ ನಡೆದಿತ್ತು.  ಸೆಪ್ಟೆಂಬರ್​ನಲ್ಲಿ ಮೇಘಾಲಯದಲ್ಲಿ ಇಂಥದ್ದೇ ಒಂದು ದುರ್ಘಟನೆ ನಡೆದಿತ್ತು. ತುರಾದಿಂದ ಶಿಲ್ಲಾಂಘ್​ಗೆ ತೆರಳುತ್ತಿದ್ದ ಬಸ್​ ರಂಗ್ಡಿ ನದಿಗೆ ಬಿದ್ದು, ಚಾಲಕ ಸೇರಿ ಆರು ಮಂದಿ ಮೃತಪಟ್ಟಿದ್ದರು.  2020ರ ಫೆಬ್ರವರಿಯಲ್ಲಿ ಜೈಪುರದಲ್ಲಿ. ಮುದವೆ ಮುಗಿಸಿ ವಾಪಸ್​ ಬರುತ್ತಿದ್ದ ಖಾಸಗಿ ಬಸ್​ವೊಂದು ಬುಂಡಿ ಜಿಲ್ಲೆಯ ಕೋಟಾ-ದೌಸಾ ಹೆದ್ದಾರಿಯಲ್ಲಿ ಮೇಜ್​ ನದಿಗೆ ಬಿದ್ದಿತ್ತು. ಈ ದುರಂತದಲ್ಲಿ  25ಮಂದಿ ಮೃತಪಟ್ಟಿದ್ದರು.ಈ ಬಸ್​ನಲ್ಲಿ ಅತ್ಯಂತ ಹೆಚ್ಚಿನ ಜನರು ತುಂಬಿ ಹೋಗಿದ್ದರು. ಚಾಲಕನಿಗೆ ನಿಯಂತ್ರಣ ಮಾಡಲಾಗದೆ ಅವಘಡ ಸಂಭವಿಸಿತ್ತು.

ಇದನ್ನೂ ಓದಿ: SSLC ಪರೀಕ್ಷೆ ದಿನಾಂಕ ಶೀಘ್ರವೇ ಪ್ರಕಟಿಸಲು ಶಿಕ್ಷಣ ಇಲಾಖೆಗೆ ಪತ್ರ ಬರೆದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ