AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ: ನಿದ್ರೆಗೆ ಜಾರಿದ ಚಾಲಕ, ಪಲ್ಟಿ ಹೊಡೆದ ಬಸ್​, ಹೊತ್ತಿಕೊಂಡ ಬೆಂಕಿ, ಮಹಿಳೆ ಸಜೀವದಹನ

ಚಾಲಕನ ನಿರ್ಲಕ್ಷ್ಯದಿಂದ ಬಸ್​ ಪಲ್ಟಿಯಾಗಿ, ಬೆಂಕಿ ಹೊತ್ತಿಕೊಂಡು ಮಹಿಳೆ ಸುಟ್ಟು ಕರಕಲಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಜೋಗುಲಾಂಬ ಗದ್ವಾಲ್ ಜಿಲ್ಲೆಯಲ್ಲಿ ಶನಿವಾರ ಚಿತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳಾ ಪ್ರಯಾಣಿಕರು ಸುಟ್ಟು ಕರಕಲಾದ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತೆಲಂಗಾಣ: ನಿದ್ರೆಗೆ ಜಾರಿದ ಚಾಲಕ, ಪಲ್ಟಿ ಹೊಡೆದ ಬಸ್​, ಹೊತ್ತಿಕೊಂಡ ಬೆಂಕಿ, ಮಹಿಳೆ ಸಜೀವದಹನ
ಬೆಂಕಿImage Credit source: India Today
ನಯನಾ ರಾಜೀವ್
|

Updated on: Jan 13, 2024 | 12:15 PM

Share

ಚಾಲಕನ ನಿರ್ಲಕ್ಷ್ಯದಿಂದ ಬಸ್​ ಪಲ್ಟಿಯಾಗಿ, ಬೆಂಕಿ ಹೊತ್ತಿಕೊಂಡು ಮಹಿಳೆ ಸುಟ್ಟು ಕರಕಲಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ಜೋಗುಲಾಂಬ ಗದ್ವಾಲ್ ಜಿಲ್ಲೆಯಲ್ಲಿ ಶನಿವಾರ ಚಿತ್ತೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳಾ ಪ್ರಯಾಣಿಕರು ಸುಟ್ಟು ಕರಕಲಾದ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಶನಿವಾರ ಮುಂಜಾನೆ 3 ಗಂಟೆಗೆ ಜಗನ್ ಅಮೆಜಾನ್ ಟ್ರಾವೆಲ್ ಬಸ್ ಹೈದರಾಬಾದ್‌ನಿಂದ ಚಿತ್ತೂರಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬಸ್‌ನ ನಿಯಂತ್ರಣ ತಪ್ಪಿದ ಕಾರಣ ಚಾಲಕ ನಿದ್ರೆಗೆ ಜಾರಿದ ಕಾರಣ 40 ಪ್ರಯಾಣಿಕರಿದ್ದ ಖಾಸಗಿ ಬಸ್​ ಪಲ್ಟಿ ಹೊಡೆದು ಬೆಂಕಿ ಹೊತ್ತಿಕೊಂಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರೈಲ್ವೆ ಎಂಜಿನ್​ನಲ್ಲಿ ಕಾಣಿಸಿಕೊಂಡ ಬೆಂಕಿ, ಗೇಟ್​ಮ್ಯಾನ್ ಯಶ್​ಪಾಲ್​ ಸಮಯ ಪ್ರಜ್ಞೆಯಿಂದ ನಾರಾರು ಜೀವಗಳು ಅಪಾಯದಿಂದ ಪಾರು

ಕೂಡಲೇ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದಿದ್ದಾರೆ. ಮಹಿಳೆಯೊಬ್ಬಳು ಬೆಂಕಿಯೊಳಗೆ ಸಿಕ್ಕಿಹಾಕಿಕೊಂಡಿದ್ದರಿಂದ ಕೆಳಗಿಳಿಯಲು ಸಾಧ್ಯವಾಗಲಿಲ್ಲ, ಬಸ್​ ಜೊತೆಯಲ್ಲೇ ಸುಟ್ಟುಹೋಗಿದ್ದಾರೆ. ಮೃತಪಟ್ಟ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ