AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​ನಲ್ಲಿ ಪ್ರವಾಹಕ್ಕೆ ಸಿಲುಕಿ ಬಸ್ ಪಲ್ಟಿ; ಕ್ರೇನ್ ಬಳಸಿ 27 ಜನರ ರಕ್ಷಣೆ

ಪಟಿಯಾಲ, ರೋಚಾರ್ ಮತ್ತು ಮೊಹಾಲಿ ತಗ್ಗು ಪ್ರದೇಶಗಳಿಂದ ಸ್ಥಳಾಂತರಿಸಲು ಕೇಂದ್ರ ಮತ್ತು ರಾಜ್ಯ ರಕ್ಷಣಾ ತಂಡಗಳು ಮತ್ತು ಭಾರತೀಯ ಸೇನೆಯ ಪಡೆಗಳನ್ನು ಕರೆತರಲಾಗಿದೆ. ಸಟ್ಲೆಜ್, ಬಿಯಾಸ್ ಘಗ್ಗರ್ ನದಿಗಳಲ್ಲಿ ಅಪಾಯದ ಮಟ್ಟಕ್ಕಿಂತ ಹೆಚ್ಚು ನೀರು ಹರಿದಿದೆ

ಪಂಜಾಬ್​​ನಲ್ಲಿ ಪ್ರವಾಹಕ್ಕೆ ಸಿಲುಕಿ ಬಸ್ ಪಲ್ಟಿ; ಕ್ರೇನ್ ಬಳಸಿ 27 ಜನರ ರಕ್ಷಣೆ
ಪ್ರವಾಹದಲ್ಲಿ ಮಗುಚಿ ಬಿದ್ದ ಬಸ್
ರಶ್ಮಿ ಕಲ್ಲಕಟ್ಟ
|

Updated on: Jul 10, 2023 | 5:25 PM

Share

ದೆಹಲಿ: ಪಂಜಾಬ್‌ನಲ್ಲಿ (Punjab) ಪ್ರವಾಹಕ್ಕೆ ಸಿಲುಕಿ ಬಸ್ ಮಗುಚಿದೆ. ಪಂಜಾಬ್‌ನ ಅಂಬಾಲಾ-ಯಮುನಾನಗರ ರಸ್ತೆಯಲ್ಲಿ ಮಗುಚಿಬಿದ್ದ ಬಸ್ ನಿಂದ ಪ್ರಯಾಣಿಕರನ್ನು ಕ್ರೇನ್ ಸಹಾಯದಿಂದ ರಕ್ಷಿಸಲಾಗಿದೆ. 27 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎಂದು ಎನ್​​ಡಿಟಿವಿ ವರದಿ ಮಾಡಿದೆ. ಕಳೆದ ಮೂರು ದಿನಗಳಿಂದ ಉತ್ತರ ಭಾರತದಲ್ಲಿ ಭಾರೀ ಮಳೆಯಾಗುತ್ತಿದ್ದು (Rains), ಭೂಕುಸಿತದಿಂದಾಗಿ ಮನೆಗಳಿಗೆ ಹಾನಿ ಸಂಭವಿಸಿದೆ.ಪಂಜಾಬ್ ಈಗಾಗಲೇ ಈ ತಿಂಗಳು ಶೇ70 ರಷ್ಟು ಮಳೆಯನ್ನು ಕೇವಲ ಎರಡು ದಿನಗಳಲ್ಲಿ ಪಡೆದಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ನೀರು ತುಂಬಿದ್ದು, ಅಲ್ಲಿನ ನಿವಾಸಿಗಳನ್ನು ದೋಣಿಗಳಲ್ಲಿ ರಕ್ಷಿಸಲಾಗಿದೆ. ಜನರು ಕುತ್ತಿಗೆಯವರೆಗೆ ನೀರು ಬಂದಿದ್ದು ಹಲವು ವಾಹನಗಳು ನೀರಿನಲ್ಲಿ ಕೊಚ್ಚಿಹೋಗಿವೆ. ಕಳೆದ 50 ಗಂಟೆಗಳಲ್ಲಿ ಚಂಡೀಗಢ, ಮೊಹಾಲಿ ತಮ್ಮ ವಾರ್ಷಿಕ ಮಳೆಯ ಕೋಟಾದ 50 ಪ್ರತಿಶತವನ್ನು ದಾಖಲಿಸಿವೆ.

ನಗರ ಪ್ರದೇಶಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದೆ.

ಪಟಿಯಾಲ, ರೋಚಾರ್ ಮತ್ತು ಮೊಹಾಲಿ ತಗ್ಗು ಪ್ರದೇಶಗಳಿಂದ ಸ್ಥಳಾಂತರಿಸಲು ಕೇಂದ್ರ ಮತ್ತು ರಾಜ್ಯ ರಕ್ಷಣಾ ತಂಡಗಳು ಮತ್ತು ಭಾರತೀಯ ಸೇನೆಯ ಪಡೆಗಳನ್ನು ಕರೆತರಲಾಗಿದೆ. ಸಟ್ಲೆಜ್, ಬಿಯಾಸ್ ಘಗ್ಗರ್ ನದಿಗಳಲ್ಲಿ ಅಪಾಯದ ಮಟ್ಟಕ್ಕಿಂತ ಹೆಚ್ಚು ನೀರು ಹರಿದಿದೆ.

ಇದನ್ನೂ ಓದಿ: ಡೆಹ್ರಾಡೂನ್‌ನಲ್ಲಿ ಪ್ರವಾಹದಲ್ಲಿ ಸಿಲುಕಿದ ಬಸ್; ಕಿಟಕಿಯಿಂದ ಹಾರಿ ಪ್ರಾಣ ಉಳಿಸಿಕೊಂಡ ಪ್ರಯಾಣಿಕರು

ಸುಮಾರು ಒಂದು ದಶಕದಲ್ಲಿ ರಾಜ್ಯದ ಭೀಕರ ಪ್ರವಾಹ ಪರಿಸ್ಥಿತಿಯನ್ನು ಪಂಜಾಬ್ ಎದುರಿಸುತ್ತಿರುವ ಕಾರಣ, ಗೃಹ ಸಚಿವ ಅಮಿತ್ ಶಾ ನಿನ್ನೆ ಮುಖ್ಯಮಂತ್ರಿ ಭಗವಂತ್ ಮಾನ್ ಅವರೊಂದಿಗೆ ಮಾತನಾಡಿದ್ದಾರೆ. ಅವರು ಪ್ರವಾಹ ಪರಿಸ್ಥಿತಿಯ ಬಗ್ಗೆ ವಿಚಾರಿಸಿದರು. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಅಗತ್ಯವಿದ್ದಲ್ಲಿ ನಾವು ಅವರನ್ನು ಸಂಪರ್ಕಿಸುತ್ತೇವೆ ಎಂದು ನಾವು ವಿವರಿಸಿದ್ದೇವೆ ಎಂದು ಮಾನ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ