AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್; ಐವರು ದುರ್ಮರಣ, 25 ಮಂದಿಗೆ ಗಾಯ

ಇನ್ನೊಂದು ವಾಹನವನ್ನು ಬಸ್ ಚಾಲಕ ಓವರ್ ಟೇಕ್ ಮಾಡಲು ಯತ್ನಿಸಿದಾಗ ಈ ಅಪಘಾತ (Accident) ಸಂಭವಿಸಿದೆ ಎಂದು ಸಿಮ್ರಾಲ್ ಪೊಲೀಸ್ ಠಾಣೆಯ ಉಸ್ತುವಾರಿ ಆರ್ ಎಸ್ ಭದೋರಿಯಾ ಹೇಳಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಭೇರುಘಾಟ್‌ನಲ್ಲಿ ಸುಮಾರು 50 ಅಡಿ ಆಳವಿರುವ...

ಮಧ್ಯಪ್ರದೇಶದಲ್ಲಿ ಕಂದಕಕ್ಕೆ ಉರುಳಿ ಬಿದ್ದ ಬಸ್; ಐವರು ದುರ್ಮರಣ, 25 ಮಂದಿಗೆ ಗಾಯ
ಮಧ್ಯಪ್ರದೇಶದಲ್ಲಿ ಅಪಘಾತImage Credit source: Social Media
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jun 23, 2022 | 7:51 PM

Share

ಮಹು: ಗುರುವಾರ ಮಧ್ಯಾಹ್ನ ಮಧ್ಯಪ್ರದೇಶದ (Madhya pradesh) ಇಂದೋರ್ ಜಿಲ್ಲೆಯ ಭೇರುಘಾಟ್‌ನಲ್ಲಿ(Bherughat) ಬಸ್ಸೊಂದು 50 ಅಡಿ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಐವರು ಸಾವಿಗೀಡಾಗಿದ್ದು 25 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನೊಂದು ವಾಹನವನ್ನು ಬಸ್ ಚಾಲಕ ಓವರ್ ಟೇಕ್ ಮಾಡಲು ಯತ್ನಿಸಿದಾಗ ಈ ಅಪಘಾತ (Accident) ಸಂಭವಿಸಿದೆ ಎಂದು ಸಿಮ್ರಾಲ್ ಪೊಲೀಸ್ ಠಾಣೆಯ ಉಸ್ತುವಾರಿ ಆರ್ ಎಸ್ ಭದೋರಿಯಾ ಹೇಳಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಭೇರುಘಾಟ್‌ನಲ್ಲಿ ಸುಮಾರು 50 ಅಡಿ ಆಳವಿರುವ ಕಂದಕಕ್ಕೆ ಬಸ್ ಉರುಳಿ ಬಿದ್ದಿದೆ. ಈ ದಾರಿಯಾಗಿ ಸಾಗುತ್ತಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಐವರು ಪ್ರಯಾಣಿಕರು ಸ್ಥಳದಲ್ಲಿ ಸಾವಿಗೀಡಾಗಿದ್ದು , 25 ಮಂದಿಗೆ ಗಾಯಗೊಳಗಾಗಿದ್ದಾರೆ. ಗಾಯಗೊಂಡವರನ್ನು ಮಹು ಮತ್ತು ಇಂದೋರ್‌ನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಅವರು ಹೇಳಿದರು. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು , ಗಾಯಗೊಂಡ ಪ್ರಯಾಣಿಕರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸಿದ್ದಾರೆ.

ಮೃತರ ಕುಟುಂಬಕ್ಕೆ ನಾಲ್ಕು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿಗಳನ್ನು ಸರ್ಕಾರ ಘೋಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!