ಮತ್ತೆ ರಸ್ತೆ ಅಪಘಾತ: ಬೆಳಗಿನ ಜಾವ ನಾಲ್ವರು ವಲಸೆ ಕಾರ್ಮಿಕರ ದುರ್ಮರಣ

ಮಹಾರಾಷ್ಟ್ರ: ವಲಸೆ ಕಾರ್ಮಿಕರ ಬದುಕು ನಿಜಕ್ಕೂ ದುರಂತ ಅಂತ್ಯ ಕಾಣುತ್ತಿದೆ. ನಿನ್ನೆ ರಾತ್ರಿ ಬಸ್ಸಿನಲ್ಲಿ ತಮ್ಮೂರುಗಳಿಗೆ ಹೊರಟಿದ್ದ ವಲಸೆ ಕಾರ್ಮಿಕರ ಪೈಕಿ ನಾಲ್ಕು ಮಂದಿ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ. ಇಂದು ಬೆಳಗಿನ ಜಾವ ಯಾವತ್ಮಾಲ್ ಬಳಿ ಕಾರ್ಮಿಕರಿದ್ದ ಬಸ್ಸು, ಟ್ರಕ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಸೋಲಾಪುರದಿಂದ ಜಾರ್ಖಂಡ್​ ಕಡೆಗೆ ಪ್ರಯಾಣಿಸುತ್ತಿತ್ತು. ಭೀಕರ ಅಪಘಾತದಲ್ಲಿ 15 ಕಾರ್ಮಿಕರು ಗಾಯಗೊಂಡಿದ್ದಾರೆ. ಲಾಕ್​ಡೌನ್​ ಕಾಲದಲ್ಲಿ ದೇಶಾದ್ಯಂತ ಇದುವರೆಗೆ ಇಂತಹ ರಸ್ತೆ ಅಪಘಾತಗಳಲ್ಲಿ ಸುಮಾರು 400 ಮಂದಿ ಕಾರ್ಮಿಕರು […]

ಮತ್ತೆ ರಸ್ತೆ ಅಪಘಾತ: ಬೆಳಗಿನ ಜಾವ ನಾಲ್ವರು ವಲಸೆ ಕಾರ್ಮಿಕರ ದುರ್ಮರಣ
ಸಾಧು ಶ್ರೀನಾಥ್​ Edited By:

Updated on: May 23, 2020 | 6:33 AM

ಮಹಾರಾಷ್ಟ್ರ: ವಲಸೆ ಕಾರ್ಮಿಕರ ಬದುಕು ನಿಜಕ್ಕೂ ದುರಂತ ಅಂತ್ಯ ಕಾಣುತ್ತಿದೆ. ನಿನ್ನೆ ರಾತ್ರಿ ಬಸ್ಸಿನಲ್ಲಿ ತಮ್ಮೂರುಗಳಿಗೆ ಹೊರಟಿದ್ದ ವಲಸೆ ಕಾರ್ಮಿಕರ ಪೈಕಿ ನಾಲ್ಕು ಮಂದಿ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಇಂದು ಬೆಳಗಿನ ಜಾವ ಯಾವತ್ಮಾಲ್ ಬಳಿ ಕಾರ್ಮಿಕರಿದ್ದ ಬಸ್ಸು, ಟ್ರಕ್​ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಸೋಲಾಪುರದಿಂದ ಜಾರ್ಖಂಡ್​ ಕಡೆಗೆ ಪ್ರಯಾಣಿಸುತ್ತಿತ್ತು. ಭೀಕರ ಅಪಘಾತದಲ್ಲಿ 15 ಕಾರ್ಮಿಕರು ಗಾಯಗೊಂಡಿದ್ದಾರೆ. ಲಾಕ್​ಡೌನ್​ ಕಾಲದಲ್ಲಿ ದೇಶಾದ್ಯಂತ ಇದುವರೆಗೆ ಇಂತಹ ರಸ್ತೆ ಅಪಘಾತಗಳಲ್ಲಿ ಸುಮಾರು 400 ಮಂದಿ ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ.

 

Published On - 10:42 am, Tue, 19 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us