ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ, ದೆಹಲಿಯಲ್ಲಿ 4 ಬಸ್‌ಗಳಿಗೆ ಬೆಂಕಿ

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ದೆಹಲಿಯ ಭಾರತ್​ ನಗರ ಬಳಿ ನಾಲ್ಕು ಬಸ್‌ಗಳಿಗೆ ಬೆಂಕಿಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉದ್ರಿಕ್ತರು ಪೊಲೀಸರ ಮೇಲೆ ಕಲ್ಲೆಸೆದಿದ್ದಾರೆ. ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ದೆಹಲಿಯಲ್ಲಿ ಮೂರು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ, ದೆಹಲಿಯಲ್ಲಿ 4 ಬಸ್‌ಗಳಿಗೆ ಬೆಂಕಿ
ಸಾಧು ಶ್ರೀನಾಥ್​

Updated on: Dec 15, 2019 | 6:24 PM

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ಜೋರಾಗಿ ನಡೆಯುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ದೆಹಲಿಯ ಭಾರತ್​ ನಗರ ಬಳಿ ನಾಲ್ಕು ಬಸ್‌ಗಳಿಗೆ ಬೆಂಕಿಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉದ್ರಿಕ್ತರು ಪೊಲೀಸರ ಮೇಲೆ ಕಲ್ಲೆಸೆದಿದ್ದಾರೆ. ಘಟನೆಯಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ದೆಹಲಿಯಲ್ಲಿ ಮೂರು ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ.

Published On - 6:23 pm, Sun, 15 December 19

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us