AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರದ ಉದ್ಯಮಿ ಮನೆ ಮೇಲೆ ಜಿಎಸ್​ಟಿ ಅಧಿಕಾರಿಗಳಿಂದ ದಾಳಿ; ನಗದು ಎಣಿಕೆಯೇ ಮುಗಿಯುತ್ತಿಲ್ಲ, ಬೀಗ ತೆಗೆಯಲೂ ಸಾಧ್ಯವಾಗುತ್ತಿಲ್ಲ !

ಇದು ಅಂತಿಂಥ ಉದ್ಯಮಿಯ ಕಥೆಯಲ್ಲ. ಪಿಯುಷ್ ಜೈನ್​ ಮನೆ, ಮತ್ತಿತರ ಪ್ರದೇಶಗಳ ಒಟ್ಟು 40 ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರಿಗೆ ಸೇರಿದ ನಾಲ್ಕು ಮನೆಗಳಿಂದ ಒಟ್ಟು 300 ಕೀಗಳನ್ನು ಜಪ್ತಿ ಮಾಡಲಾಗಿದೆ.

ಕಾನ್ಪುರದ ಉದ್ಯಮಿ ಮನೆ ಮೇಲೆ ಜಿಎಸ್​ಟಿ ಅಧಿಕಾರಿಗಳಿಂದ ದಾಳಿ; ನಗದು ಎಣಿಕೆಯೇ ಮುಗಿಯುತ್ತಿಲ್ಲ, ಬೀಗ ತೆಗೆಯಲೂ ಸಾಧ್ಯವಾಗುತ್ತಿಲ್ಲ !
ಕಾನ್ಪುರ ಉದ್ಯಮಿಯ ಮನೆ ಮೇಲೆ ದಾಳಿ
TV9 Web
| Edited By: |

Updated on: Dec 27, 2021 | 2:39 PM

Share

ಕಾನ್ಪುರ ಮೂಲದ ಉದ್ಯಮಿ ಪಿಯುಷ್ ಜೈನ್​ ಎಂಬುವರನ್ನು ತೆರಿಗೆ ವಂಚನೆ ಆರೋಪದಡಿ ನಿನ್ನೆ ರಾತ್ರಿ ಬಂಧಿಸಲಾಯಿತು. ಈ ಉದ್ಯಮಿಯ ಮನೆ ಮೇಲೆ ಕೇಂದ್ರೀಯ ತನಿಖಾ ದಳಗಳು ದಾಳಿ ನಡೆಸಿದ ಸುಮಾರು 40 ತಾಸುಗಳ ಬಳಿಕ ಆತನನ್ನು ಬಂಧಿಸಲಾಗಿದೆ. ಉದ್ಯಮಿಯ ಮನೆಯಿಂದ ಭರ್ಜರಿ ಮೊತ್ತದ ನಗದು ವಶಪಡಿಸಿಕೊಳ್ಳಲಾಗಿದ್ದು, ಇತ್ತೀಚಿನ ದಿನಗಳಲ್ಲೇ ಅತ್ಯಂತ ದೊಡ್ಡ ಮೊತ್ತದ ಹಣ ವಶಪಡಿಸಿಕೊಂಡ ದಾಳಿ ಇದು ಎನ್ನಲಾಗಿದೆ.  

ಅಂದಹಾಗೆ ಈ ಉದ್ಯಮಿಯ ಮನೆ ಮೇಲೆ ಸರಕು ಮತ್ತು ಸೇವಾ ತೆರಿಗೆ (GST) ಅಧಿಕಾರಿಗಳು ದಾಳಿ ನಡೆಸಿದ್ದರು. ಜೈನ್​​ಗೆ ಸಂಬಂಧಪಟ್ಟ ಸ್ಥಳಗಳಿಂದ ಇದುವರೆಗೆ ಒಟ್ಟಾರೆ 257 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.  ನಕಲಿ ಬೆಲೆಪಟ್ಟಿಯ ಮೂಲಕ ಸರಕು ರವಾನೆ ಮಾಡಿ ಮತ್ತು ಜಿಎಸ್​ಟಿ ಪೋರ್ಟಲ್​​ನಲ್ಲಿ ಅಪ್​ಲೋಡ್ ಮಾಡಬೇಕಾದ ಇ ವೇ ಬಿಲ್ (ಎಲೆಕ್ಟ್ರಾನಿಕ್​ ವೇ ಬಿಲ್-ಸರಕು ಸಾಗಣೆ ಬಗ್ಗೆ ಮಾಹಿತಿ ನೀಡುವುದು​) ವಂಚನೆ ಮಾಡುವ ಮೂಲಕ ಸಂಪಾದಿಸಿದ್ದು ಎನ್ನಲಾಗಿದೆ. ಹಾಗೇ, ಸದ್ಯಕ್ಕೆ 257 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ಕನೇ ದಿನವೂ ದಾಳಿ ಮುಂದುವರಿದಿದೆ. ಈ ದಾಳಿಯೆಲ್ಲ ಮುಗಿಯುವ ಹೊತ್ತಿಗೆ ಇನ್ನಷ್ಟು ಹೆಚ್ಚಿನ ನಗದು ಪತ್ತೆಯಾಗುವ ಸಾಧ್ಯತೆ ಇದೆ.  ಜಿಎಸ್​ಟಿಯ  ಉತ್ತರ ಪ್ರದೇಶ, ಗುಜರಾತ್​ ಘಟಕಗಳ ಅಧಿಕಾರಿಗಳು ಸೇರಿ ಪಿಯುಷ್​ ಜೈನ್​ ಮನೆ ಮತ್ತು ಆತನಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದು, ಇಂದು ಅಹ್ಮದಾಬಾದ್​ ಕೋರ್ಟ್​ಗೆ ಹಾಜರುಪಡಿಸುವ ಸಾಧ್ಯತೆ ಇದೆ.

257 ಕೋಟಿ ರೂ.ಮತ್ತು ಮುಂದುವರಿದ ಎಣಿಕೆ ಆಗಲೇ ಹೇಳಿದಂತೆ ಸದ್ಯ ಪಿಯುಷ್​ ಜೈನ್​ರಿಂದ ಒಟ್ಟು 257 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಅದರಲ್ಲಿ ಜೈನ್​ಗೆ ಸೇರಿದ ಕಾರ್ಖಾನೆ ಮತ್ತು ಮನೆಯಿಂದ 10 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ. ಕಾನ್ಪುರದ ಆನಂದನಗರದಲ್ಲಿರುವ ಮನೆಯಿಂದ 177 ಕೋಟಿ ರೂ. ಕನೌಜ್​ ಮನೆಯಿಂದ ಸುಮಾರು 107 ಕೋಟಿ ರೂ.ವಶವಾಗಿದೆ. ಆದರೆ ಅದನ್ನು ಪೂರ್ತಿಯಾಗಿ ಇನ್ನೂ ಎಣಿಸಿಯೇ ಮುಗಿದಿಲ್ಲ. ಹಾಗೇ, ಇನ್ನಷ್ಟು ಹಣ ಪತ್ತೆಯಾಗುವ ಸಾಧ್ಯತೆ ಇದೆ ಎಂದು ಜಿಎಸ್​ಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

40 ತಾಸುಗಳಿಂದಲೂ ಪಿಯುಷ್​ಗೆ ಸಂಬಂಧಪಟ್ಟ ಮನೆಗಳು, ಕಚೇರಿಗಳ ಮೇಲೆ ದಾಳಿ, ಹಣ ಎಣಿಕೆ ಕಾರ್ಯ ನಡೆಯುತ್ತಲೇ ಇದೆ.  ನಗದು ಲೆಕ್ಕ ಮಾಡುವ ಒಟ್ಟು 19 ಮಷಿನ್​ಗಳ ಮೂಲಕ ಎಣಿಕೆ ಕಾರ್ಯ ನಡೆಯುತ್ತಿದೆ.  ಬರೀ ನಗದು ಮಾತ್ರವಲ್ಲದೆ, ಪಿಯುಷ್​ ಜೈನ್​ ಕನೌಜ್​ ಮನೆಯಿಂದ 250 ಕೆಜಿ ಬೆಳ್ಳಿ, 25 ಕೆಜಿ ಚಿನ್ನವನ್ನು ಕೂಡ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.  ಅಷ್ಟೇ ಅಲ್ಲ, 40 ಕಂಪನಿಗಳ ಮಾಲೀಕ ಈತ. ಅದರಲ್ಲಿ ಎರಡು ಕಂಪನಿಗಳು ಮಧ್ಯಪ್ರಾಚ್ಯ ದೇಶಗಳಲ್ಲಿವೆ ಎಂದೂ ಹೇಳಲಾಗಿದೆ.

ಶ್ರೀಗಂಧದ ಎಣ್ಣೆಯೂ ಪತ್ತೆ ಇದು ಅಂತಿಂಥ ಉದ್ಯಮಿಯ ಕಥೆಯಲ್ಲ. ಪಿಯುಷ್ ಜೈನ್​ ಮನೆ, ಮತ್ತಿತರ ಪ್ರದೇಶಗಳ ಒಟ್ಟು 40 ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇವರಿಗೆ ಸೇರಿದ ನಾಲ್ಕು ಮನೆಗಳಿಂದ ಒಟ್ಟು 300 ಕೀಗಳನ್ನು ಜಪ್ತಿ ಮಾಡಲಾಗಿದೆ. ಮನೆಗಳಲ್ಲಿರುವ ಕೆಲವು ಕೋಣೆಗಳ ಬಾಗಿಲನ್ನು ತೆಗೆಯಲು ಬಾರದ ಕಾರಣ ಬೀಗ ತೆಗೆಯುವವರನ್ನೂ ಕರೆಸಲಾಗಿದೆ. ಬರೀ ಇಷ್ಟೇ ಅಲ್ಲ, ಈ ಉದ್ಯಮಿಯ ಬಳಿ ಡ್ರಮ್​ಗಟ್ಟಲೆ ಶ್ರೀಗಂಧದ ಎಣ್ಣೆಯೂ ಸಿಕ್ಕಿದೆ. ರಟ್ಟಿನ ಬಾಕ್ಸ್​ಗಳಲ್ಲೂ 2000 ರೂಪಾಯಿ ನೋಟಿ ಬಂಡಲ್​​ಗಳು ಪತ್ತೆಯಾಗಿವೆ. ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿಯ ಇತಿಹಾಸದಲ್ಲೇ ಇದು ಅತಿದೊಡ್ಡ ನಗದು ಜಪ್ತಿಯಾಗಿದೆ ಎಂದು ಮಂಡಳಿ ಅಧ್ಯಕ್ಷ  ವಿವೇಕ್ ಜೋಹ್ರಿ ಹೇಳಿದ್ದಾರೆ.  ಅದೇ ಇಷ್ಟು ಹಣ ಎಲ್ಲಿಂದ ಬಂತು ಎಂದು ಕೇಳಿದ್ದಕ್ಕೆ ಉದ್ಯಮಿ ಪಿಯುಷ್ ಜೈನ್​, ನನ್ನ ಪೂರ್ವಜರ ಕಾಲದಿಂದಲೂ ಸುಮಾರು 400 ಕೆಜಿಯಷ್ಟು ಚಿನ್ನ ಇತ್ತು. ಅದನ್ನೆಲ್ಲ ಮಾರಿ ಗಳಿಸಿದ ಹಣ ಇದು ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ.

ರಾಜಕೀಯ ಸ್ಪರ್ಶ ಪಡೆದುಕೊಂಡ ದಾಳಿ ಉತ್ತರಪ್ರದೇಶದಲ್ಲಿ ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಇದೇ ಹೊತ್ತಲ್ಲಿ ನಡೆದ ಈ ದಾಳಿ ಮತ್ತು ಬಹುದೊಡ್ಡ ಮೊತ್ತದ ನಗದು ವಶ ರಾಜಕೀಯ ಸ್ಪರ್ಶ ಪಡೆದುಕೊಂಡಿದೆ. ಈ ಉದ್ಯಮಿ ಪಿಯುಷ್​ ಜೈನ್​ ಸಮಾಜವಾದಿ ಪಕ್ಷದ ಜತೆ ಗುರುತಿಸಿಕೊಂಡವನು ಎಂದು ಹೇಳಿದ್ದಾರೆ. ಇದೀಗ ದಾಳಿಗೆ ಒಳಗಾದ ವ್ಯಕ್ತಿ, ನವೆಂಬರ್​ನಲ್ಲಿ ಸಮಾಜವಾದಿ ಸುಗಂಧ ದ್ರವ್ಯವನ್ನು ಬಿಡುಗಡೆ ಮಾಡಿದ ವ್ಯಕ್ತಿ ಎಂದು ಆರೋಪಿಸಿದ್ದಾರೆ. ಆದರೆ ಈ ಆರೋಪನ್ನು ಸಮಾಜವಾದಿ ಪಕ್ಷ ಅಲ್ಲಗಳೆದಿದೆ. ನಮಗೂ, ಆತನಿಗೂ ಯಾವುದೇ ಸಂಬಂಧವಿಲ್ಲ ಎಂದು ಎಸ್​ಪಿ ವಕ್ತಾರ ವಿಜಯ್​ ದ್ವಿವೇದಿ ತಿಳಿಸಿದ್ದಾರೆ.

ಇದನ್ನೂ ಓದಿ: Narendra Modi: ಹಿಮಾಚಲ ಪ್ರದೇಶದಲ್ಲಿ 28,000 ಕೋಟಿ ರೂ.ಗೂ ಅಧಿಕ ವೆಚ್ಚದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

Follow Us
Web contact
Web contact

TV9 Kannada

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ