AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prashant Kishor: ಗುಜರಾತ್​ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಕೈಜೋಡಿಸಲಿದ್ದಾರಾ ಪ್ರಶಾಂತ್ ಕಿಶೋರ್?

Gujarat Assembly Elections 2022 | Rahul Gandhi: ಯಾವುದೇ ಷರತ್ತುಗಳಿಲ್ಲದೇ ಗುಜರಾತ್ ಚುನಾವಣೆಯಲ್ಲಿ ಮಾತ್ರ ಕೆಲಸ ಮಾಡಲು ಪ್ರಶಾಂತ್ ಕಿಶೋರ್ ಆಸಕ್ತಿ ತೋರಿಸಿರುವುದಾಗಿ ಮೂಲಗಳು ಹೇಳಿವೆ. ಪ್ರಶಾಂತ್ ಕಿಶೋರ್ ನೀಡಿರುವ ಆಹ್ವಾನಕ್ಕೆ ಕಾಂಗ್ರೆಸ್ ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ. ಈ ಬಗ್ಗೆ ಪ್ರಶಾಂತ್ ಆಪ್ತರು ಹೇಳಿದ್ದೇನು?

Prashant Kishor: ಗುಜರಾತ್​ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಕೈಜೋಡಿಸಲಿದ್ದಾರಾ ಪ್ರಶಾಂತ್ ಕಿಶೋರ್?
ರಾಹುಲ್ ಗಾಂಧಿ, ಪ್ರಶಾಂತ್ ಕಿಶೋರ್ (ಸಾಂದರ್ಭಿಕ ಚಿತ್ರ)
TV9 Web
| Updated By: shivaprasad.hs|

Updated on: Mar 25, 2022 | 11:16 AM

Share

ಮುಂಬರುವ ಗುಜರಾತ್​ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಕೆಲಸ ಮಾಡಲು ಚುನಾವಣಾ ತಂತ್ರಗಾರಿಕಾ ನಿಪುಣ ಪ್ರಶಾಂತ್ ಕಿಶೋರ್ (Prashant Kishor) ರಾಹುಲ್ ಗಾಂಧಿಯವರನ್ನು ಸಂಪರ್ಕಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್​ಡಿಟಿವಿ ವರದಿ ಮಾಡಿದೆ. ಕಳೆದ ವರ್ಷ ಎರಡೂ ಪಕ್ಷಗಳ ನಡುವಿನ (ಕಾಂಗ್ರೆಸ್- ಪ್ರಶಾಂತ್ ಕಿಶೋರ್) ಮಾತುಕತೆ ವಿಫಲವಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಎರಡು ಮೂಲಗಳನ್ನು ಉಲ್ಲೇಖಿಸಿ ಈ ಮಾಹಿತಿ ನೀಡಲಾಗಿದೆ. ಕಳೆದ ಸೆಪ್ಟೆಂಬರ್​ನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕುರಿತು ಪಕ್ಷದ ನಾಯಕರು ಪ್ರಶಾಂತ್ ಕಿಶೋರ್​ರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ನಂತರ ಕಾಂಗ್ರೆಸ್ ಕಿಶೋರ್​ರ ಮಾಜಿ ಸಹವರ್ತಿಯೊಂದಿಗೆ ಚುನಾವಣಾ ತಂತ್ರಗಾರಿಕೆಗೆ ಸಹಿ ಹಾಕಿತು. ಪ್ರಶಾಂತ್ ಕಿಶೋರ್ ತೃಣಮೂಲ ಕಾಂಗ್ರೆಸ್​ ಪಾಳಯ ಸೇರಿದರು. ಇದೀಗ ಗುಜರಾತ್ ಚುನಾವಣೆಯಲ್ಲಿ ಪ್ರಶಾಂತ್ ಕಿಶೋರ್ ಪಾತ್ರದ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಯಾವುದೇ ಷರತ್ತುಗಳಿಲ್ಲದೇ ಗುಜರಾತ್ ಚುನಾವಣೆಯಲ್ಲಿ ಮಾತ್ರ ಕೆಲಸ ಮಾಡಲು ಪ್ರಶಾಂತ್ ಕಿಶೋರ್ ಆಸಕ್ತಿ ತೋರಿಸಿರುವುದಾಗಿ ಮೂಲಗಳು ಹೇಳಿವೆ. ಪ್ರಶಾಂತ್ ಕಿಶೋರ್ ನೀಡಿರುವ ಆಹ್ವಾನಕ್ಕೆ ಕಾಂಗ್ರೆಸ್ ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ. ಗುಜರಾತ್​ನ ಕೆಲವು ನಾಯಕರಿಗೆ ಪ್ರಶಾಂತ್ ಕಿಶೋರ್​ರೊಂದಿಗೆ ಚುನಾವಣೆಯಲ್ಲಿ ಕೆಲಸ ಮಾಡಲು ಆಸಕ್ತಿ ಇದೆ. ಆದರೆ ಈ ಬಗ್ಗೆ ಅಂತಿಮ ತೀರ್ಮಾನವನ್ನು ರಾಹುಲ್ ಗಾಂಧಿ ತೆಗೆದುಕೊಳ್ಳುತ್ತಾರೆ ಎನ್ನಲಾಗಿದೆ.

ಪ್ರಶಾಂತ್ ಕಿಶೋರ್ ಆಪ್ತರು ಹೇಳುತ್ತಿರುವುದೇನು?

ಆದರೆ ಪ್ರಶಾಂತ್ ಕಿಶೋರ್ ಆಪ್ತರು ಈ ವರದಿಯನ್ನು ನಿರಾಕರಿಸಿದ್ದಾರೆ. ಆಪ್ತರ ಪ್ರಕಾರ, ಪ್ರಶಾಂತ್ ಕಿಶೋರ್​ಗೆ ಕಳೆದ ವರ್ಷ ಕಾಂಗ್ರೆಸ್​ನೊಂದಿಗೆ ಕೆಲಸ ಮಾಡಲು ತೀವ್ರ ಆಸಕ್ತಿ ಇತ್ತು. ಆದರೆ ‘ಪಾಲುದಾರಿಕೆಯ ಸಮಸ್ಯೆಯಿಂದ ಪ್ರಶಾಂತ್ ಕಿಶೋರ್ ಜತೆ ಕೆಲಸ ಮಾಡಲು ಸಾಧ್ಯವಾಗಿಲ್ಲ’. ಈ ಬಗ್ಗೆ ಪ್ರಿಯಾಂಕಾ ಗಾಂಧಿ ಕೂಡ ಮಾತನಾಡಿದ್ದರು.

ಕಳೆದ ವರ್ಷ ಪ್ರಶಾಂತ್ ಕಿಶೋರ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದರು. ಇದು ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಪ್ರಸ್ತುತ ಪ್ರಶಾಂತ್ ಕಿಶೋರ್ ಕಾಂಗ್ರೆಸ್​ನೊಂದಿಗೆ ಕೆಲಸ ಮಾಡುವ ಎಲ್ಲಾ ಅವಕಾಶಗಳು ಮುಗಿದಿವೆ ಎಂದೂ ಕೆಲವು ಮೂಲಗಳು ಹೇಳಿವೆ.

ಕಳೆದ ಬಾರಿ ಮಾತುಕತೆ ಮುಗಿಸಿದ ಪ್ರಶಾಂತ್ ಕಿಶೋರ್, ‘ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವುದು ಯಾವುದೇ ವ್ಯಕ್ತಿಯ ದೈವಿಕ ಹಕ್ಕಲ್ಲ’ ಎಂದು ವ್ಯಂಗ್ಯವಾಡಿದ್ದರು. ಅಲ್ಲಿಗೆ ಕಾಂಗ್ರೆಸ್ ಜತೆಗಿನ ಚುನಾವಣಾ ಸಮನ್ವಯ ಈಡೇರಿಲ್ಲ ಎಂಬುದು ಸ್ಪಷ್ಟವಾಗಿತ್ತು. ವಿಶೇಷವಾಗಿ ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಶೇ.90ಕ್ಕಿಂತ ಹೆಚ್ಚು ಚುನಾವಣೆಗಳಲ್ಲಿ ಸೋತಿರುವಾಗ ಚುನಾವಣಾ ತಂತ್ರಗಾರಿಕೆಯಲ್ಲಿ ಪಳಗಿದ ಪ್ರಶಾಂತ್ ಕಿಶೋರ್ ಜತೆ ಕೈಜೋಡಿಸದೇ ಇದ್ದುದು ಅಚ್ಚರಿಗೆ ಕಾರಣವಾಗಿತ್ತು.

ಪ್ರಸ್ತುತ ಕಾಂಗ್ರೆಸ್ ನಾಯಕತ್ವದ ಬಗ್ಗೆ ಮಾತನಾಡಿದ್ದ ಕಿಶೋರ್, ‘‘2024ರಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ಸ್ಥಾನವನ್ನು ಹೊಂದಬಹುದು. ಆದರೆ, ಈಗಿನ ನಾಯಕತ್ವದಲ್ಲಿ ಅಲ್ಲ’’ ಎಂದು ಅಭಿಪ್ರಾಯ ಹಂಚಿಕೊಂಡಿದ್ದರು. ಕಾಂಗ್ರೆಸ್ ಜತೆಗಿನ ಅಭಿಪ್ರಾಯ ಭೇದದ ನಡುವೆಯೂ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಜತೆ ಕೆಲಸ ಮಾಡುತ್ತಾರಾ ಎನ್ನುವುದು ಹಲವರ ಪ್ರಶ್ನೆ. ಆದ್ದರಿಂದಲೇ ಕಾಂಗ್ರೆಸ್ ಹಾಗೂ ಪ್ರಶಾಂತ್ ಕಿಶೋರ್ ಗುಜರಾತ್ ಚುನಾವಣೆಯ ಪಾಲುದಾರಿಕೆಯ ಬಗ್ಗೆ ತೀವ್ರ ಕುತೂಹಲ ಸೃಷ್ಟಿಯಾಗಿದೆ.

ಇದನ್ನೂ ಓದಿ:

ಗುಜರಾತ್ ವಿಧಾನಸಭೆ ಚುನಾವಣೆಗೂ ಮುನ್ನ ಚುನಾವಣಾ ನಿಪುಣ ಪ್ರಶಾಂತ್ ಕಿಶೋರ್ ಘರ್ ವಾಪಸಿ ಸಾಧ್ಯತೆ ಹೆಚ್ಚು! ಹೇಗೆ?

ರಷ್ಯಾದಲ್ಲಿ ಇನ್ಫೋಸಿಸ್ ಕಾರ್ಯನಿರ್ವಹಣೆ; ನಾರಾಯಣ ಮೂರ್ತಿ ಅಳಿಯ, ಬ್ರಿಟನ್​ ಹಣಕಾಸು ಸಚಿವ ರಿಷಿ ಸುನಕ್​ಗೆ ಕಠಿಣ ಪ್ರಶ್ನೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ