AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧುಮೇಹ ,ಹೃದ್ರೋಗ ಮತ್ತು ಕಿಡ್ನಿ ಕಾಯಿಲೆಗಿರುವ ಔಷಧಿಗಳ ಬೆಲೆ ಕಡಿತಕ್ಕೆ ಸರ್ಕಾರ ಚಿಂತನೆ

ಲಾಭಾಂಶಕ್ಕೆ ಮಿತಿ ವಿಧಿಸುವ ಮೂಲಕ ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆ ಮತ್ತು ಗಂಭೀರವಾದ ಕಿಡ್ನಿ ಕಾಯಿಲೆಗಿರುವ ಔಷಧಿಗಳ ಬೆಲೆ ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ.

ಮಧುಮೇಹ ,ಹೃದ್ರೋಗ ಮತ್ತು ಕಿಡ್ನಿ ಕಾಯಿಲೆಗಿರುವ ಔಷಧಿಗಳ ಬೆಲೆ ಕಡಿತಕ್ಕೆ ಸರ್ಕಾರ ಚಿಂತನೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jul 08, 2022 | 1:02 PM

ಲಾಭದ ಪ್ರಮಾಣಕ್ಕೆ ಮಿತಿ ವಿಧಿಸುವ (trade margins)ಮೂಲಕ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ ಕೆಲವು ನಿರ್ಣಾಯಕ ಔಷಧಿಗಳ ಬೆಲೆ ಕಡಿತಕ್ಕೆ ಚಿಂತನೆ ನಡೆಸಿದೆ ಎಂದು ನ್ಯೂಸ್18 ಡಾಟ್ ಕಾಂ ವರದಿ ಮಾಡಿದೆ. ಲಾಭಾಂಶಕ್ಕೆ ಮಿತಿ ವಿಧಿಸುವುದು ಅಥವಾ ಟ್ರೇಡ್ ಮಾರ್ಜಿನ್ ಎಂದರೆ ಉತ್ಪಾದನಾ ವೆಚ್ಚ ಮತ್ತು ರೋಗಿಗಳಿಗೆ ನೀಡುವ ಎಂಆರ್​​ಪಿ(ಗರಿಷ್ಠ ಮಾರಾಟ ಬೆಲೆ) ನಡುವಿನ ಅಂತರವಾಗಿದೆ. ಈ ಮೂಲಕ ಸಕ್ಕರೆ ಕಾಯಿಲೆ, ಹೃದಯ ಸಂಬಂಧಿ ಕಾಯಿಲೆ ಮತ್ತು ಗಂಭೀರವಾದ ಕಿಡ್ನಿ ಕಾಯಿಲೆಗಿರುವ ಔಷಧಿಗಳ ಬೆಲೆ ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಲಾಭಾಂಶದ ಮಿತಿಯನ್ನು ಹಂತ ಹಂತವಾಗಿ ಮಾಡಲಾಗುತ್ತದೆ. ಉದಾಹರಣೆಗೆ ಮೊದಲಿಗೆ ನಾವು ಕ್ಯಾನ್ಸರ್ ರೋಗ ಗುಣಪಡಿಸುವ ಔಷಧಿಗಳಿಗೆ ಲಾಭಾಂಶ ಮಿತಿಯನ್ನು ಕಡಿತ ಮಾಡಿದೆವು. ಅದೇ ರೀತಿ  ಈ ಬಾರಿನ ನಾವು ಮಧುವೇಹ ಅಥವಾ ಕಿಡ್ನಿ ರೋಗಕ್ಕಿರುವ ಔಷಧಿಗಳ ಲಾಭಾಂಶದ ಮಿತಿ ಕಡಿತ ಘೋಷಿಸಲಿದ್ದೇವೆ ಎಂದು ಮೂಲಗಳು ಹೇಳಿವೆ.

ರಾಷ್ಟ್ರೀಯ ಔಷಧ ದರ ಪ್ರಾಧಿಕಾರ (NPPA) ಈ ಬಗ್ಗೆ ಹಲವಾರು ತಿಂಗಳಿನಿಂದ ಕಾರ್ಯಪ್ರವೃತ್ತವಾಗಿದೆ ಎಂದು ಮೂಲಗಳು ಹೇಳಿವೆ. 2018-19ರಲ್ಲಿ ರಾಷ್ಟ್ರೀಯ ಔಷಧ ದರ ಪ್ರಾಧಿಕಾರವು ಆಯ್ಕೆ ಮಾಡಲಾದ 42 ನಾನ್ ಶೆಡ್ಯೂಲ್ಡ್ ಆಂಟಿ ಕ್ಯಾನ್ಸರ್ ಔಷಧಿಗಳ ಟ್ರೇಡ್ ಮಾರ್ಜಿನ್ ಮಿತಿಗೊಳಿಸಿತು. ಇದರಿಂದಾಗಿ ಈ ಔಷಧಿಗಳ 526 ಬ್ರಾಂಡ್  ಗಳ ಎಂಆರ್ ಪಿ ಮೇಲೆ ಶೇ90ರಷ್ಟು ಕಡಿತ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಲೋಕಸಭೆಯಲ್ಲಿ ಹೇಳಿದ್ದಾರೆ.

ಈ ಬಾರಿ ಎನ್ ಪಿಪಿಎ ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದು, ಅದರ ಫಲಿತಾಂಶವನ್ನು ಆಧರಿಸಿ ನಿರ್ಧಾರ ತೆಗೆದುಕೊಳ್ಳಲಿದೆ.

Published On - 12:26 pm, Fri, 8 July 22

ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಒಂದಂಕಿಗೆ ಸುಸ್ತಾದ ಪಂತ್; ಕೋಪಗೊಂಡ ಮಾಲೀಕ
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್!
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
5 ಲಕ್ಷ ರೂ ಮೌಲ್ಯದ ಸಿಕ್ಸರ್ ಬಾರಿಸಿದ ಮಿಚೆಲ್ ಮಾರ್ಷ್
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್