AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಮಮತಾ ಬ್ಯಾನರ್ಜಿ ಒಬ್ಬಂಟಿಯಾಗುತ್ತಾರೆ..: ಗೃಹ ಸಚಿವ ಅಮಿತ್​ ಶಾ

ಟಿಎಂಸಿ ಮಾ, ಮಾಟಿ, ಮನುಷ್ಯ್​ ( ತಾಯಿ, ಭೂಮಿ..ಮನುಷ್ಯತ್ವ) ಎಂಬ ಘೋಷಣೆಗಳೊಂದಿಗೆ ಬಾಯಲ್ಲಿ ಬಡಾಯಿ ಕೊಚ್ಚುವ ಟಿಎಂಸಿ ವಾಸ್ತವವಾಗಿ ಸುಲಿಗೆ, ಭ್ರಷ್ಟಾಚಾರ, ಅಶಾಂತಿ ಸೃಷ್ಟಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಅಮಿತ್ ಶಾ ಟೀಕಿಸಿದರು.

ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಮಮತಾ ಬ್ಯಾನರ್ಜಿ ಒಬ್ಬಂಟಿಯಾಗುತ್ತಾರೆ..: ಗೃಹ ಸಚಿವ ಅಮಿತ್​ ಶಾ
ಅಮಿತ್ ಶಾ ಮತ್ತು ಮಮತಾ ಬ್ಯಾನರ್ಜಿ
Lakshmi Hegde
| Edited By: |

Updated on:Jan 31, 2021 | 5:01 PM

Share

ದೆಹಲಿ: ಟಿಎಂಸಿ ಮುಖಂಡರು ಒಬ್ಬೊಬ್ಬರಾಗಿ ನಮ್ಮ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗೆ ಮುಂದುವರಿದರೆ ಮುಂದಿನ ವಿಧಾನ ಸಭೆ ಚುನಾವಣೆಯನ್ನು ಮಮತಾ ಬ್ಯಾನರ್ಜಿ ಏಕಾಂಗಿಯಾಗಿ ಎದುರಿಸಬೇಕಾಗುತ್ತದೆ ಎಂದು ಕೇಂದ್ರ  ಗೃಹ ಸಚಿವ ಅಮಿತ್​ ಶಾ ಹೇಳಿದರು.

ಇಂದು ಹೌರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ವರ್ಚ್ಯುವಲ್​ ಆಗಿ ಭಾಷಣ ಮಾಡಿದ ಅವರು, ದೀದಿ ವಿರುದ್ಧ ಹರಿಹಾಯ್ದರು. ಹಾಗೇ ಇಂದು ಬಿಜೆಪಿಗೆ ಸೇರ್ಪಡೆಯಾದ ಐವರು ಮಾಜಿ ಟಿಎಂಸಿ ಮುಖಂಡರಿಗೆ ಸ್ವಾಗತ ಕೋರಿದರು.

ಟಿಎಂಸಿ ನಾಯಕರು ಒಬ್ಬರ ಬೆನ್ನಿಗೆ ಮತ್ತೊಬ್ಬರಂತೆ ಬಿಜೆಪಿಗೆ ಯಾಕೆ ಸೇರುತ್ತಿದ್ದಾರೆ ಎಂಬ ಬಗ್ಗೆ ಮಮತಾ ಬ್ಯಾನರ್ಜಿ ಚಿಂತನೆ ಮಾಡಬೇಕು.. ಅವರೆಲ್ಲ ಪಕ್ಷ ಬಿಡುತ್ತಿದ್ದಾರೆ ಎಂದರೆ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ವಿಫಲರಾಗಿದ್ದಾರೆ. ಈ ರಾಜ್ಯದ ಜನರಿಗೆ ಬೇಕಾಗಿದ್ದನ್ನು ಕೊಟ್ಟಿಲ್ಲ ಎಂದೇ ಅರ್ಥ. ಹೀಗೆ ಆದರೆ ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಅವರು ಏಕಾಂಗಿಯಾಗುತ್ತಾರೆ ಎಂದು ಹೇಳಿದರು.

ಸಂಬಂಧಿಗಳ ಸೇವೆಯಲ್ಲಿ ತೊಡಗಿದ್ದಾರೆ ! ಮಮತಾ ಬ್ಯಾನರ್ಜಿ ರಾಜ್ಯದ ಜನರ ಸೇವೆ ಮಾಡುತ್ತಿಲ್ಲ.. ಬದಲಾಗಿ ಇಲ್ಲಿರುವ ತನ್ನ ಸೋದರಳಿಯನ ಸೇವೆ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅಮಿತ್ ಶಾ, ಟಿಎಂಸಿ ಮಾ, ಮಾಟಿ, ಮನುಷ್ಯ್​ ( ತಾಯಿ, ಭೂಮಿ..ಮನುಷ್ಯತ್ವ) ಎಂಬ ಘೋಷಣೆಗಳೊಂದಿಗೆ ಬಾಯಲ್ಲಿ ಬಡಾಯಿ ಕೊಚ್ಚುವ ಟಿಎಂಸಿ ವಾಸ್ತವವಾಗಿ ಸುಲಿಗೆ, ಭ್ರಷ್ಟಾಚಾರ, ಅಶಾಂತಿ ಸೃಷ್ಟಿಸುವ ಕಾರ್ಯದಲ್ಲಿ ತೊಡಗಿದೆ ಎಂದರು. ಹಾಗೇ ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅದನ್ನೆಲ್ಲ ನಿರ್ಮೂಲನ ಮಾಡಿ, ಅಭಿವೃದ್ಧಿಯೆಡೆಗೆ ಗಮನ ಕೊಡಲಾಗುವುದು ಎಂದು ಭರವಸೆ ನೀಡಿದರು.

ಪಶ್ಚಿಮ ಬಂಗಾಳಕ್ಕೆ ಅಮಿತ್​ ಶಾ ಬದಲು ಸ್ಮೃತಿ ಇರಾನಿ ಭೇಟಿ; ಹೌರಹ್​ನಲ್ಲಿ ಪ್ರಚಾರ ಸಭೆ

Published On - 5:01 pm, Sun, 31 January 21

30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ