AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಮಮತಾ ಬ್ಯಾನರ್ಜಿ ಒಬ್ಬಂಟಿಯಾಗುತ್ತಾರೆ..: ಗೃಹ ಸಚಿವ ಅಮಿತ್​ ಶಾ

ಟಿಎಂಸಿ ಮಾ, ಮಾಟಿ, ಮನುಷ್ಯ್​ ( ತಾಯಿ, ಭೂಮಿ..ಮನುಷ್ಯತ್ವ) ಎಂಬ ಘೋಷಣೆಗಳೊಂದಿಗೆ ಬಾಯಲ್ಲಿ ಬಡಾಯಿ ಕೊಚ್ಚುವ ಟಿಎಂಸಿ ವಾಸ್ತವವಾಗಿ ಸುಲಿಗೆ, ಭ್ರಷ್ಟಾಚಾರ, ಅಶಾಂತಿ ಸೃಷ್ಟಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಅಮಿತ್ ಶಾ ಟೀಕಿಸಿದರು.

ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಮಮತಾ ಬ್ಯಾನರ್ಜಿ ಒಬ್ಬಂಟಿಯಾಗುತ್ತಾರೆ..: ಗೃಹ ಸಚಿವ ಅಮಿತ್​ ಶಾ
ಅಮಿತ್ ಶಾ ಮತ್ತು ಮಮತಾ ಬ್ಯಾನರ್ಜಿ
Follow us
Lakshmi Hegde
| Updated By: ರಾಜೇಶ್ ದುಗ್ಗುಮನೆ

Updated on:Jan 31, 2021 | 5:01 PM

ದೆಹಲಿ: ಟಿಎಂಸಿ ಮುಖಂಡರು ಒಬ್ಬೊಬ್ಬರಾಗಿ ನಮ್ಮ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗೆ ಮುಂದುವರಿದರೆ ಮುಂದಿನ ವಿಧಾನ ಸಭೆ ಚುನಾವಣೆಯನ್ನು ಮಮತಾ ಬ್ಯಾನರ್ಜಿ ಏಕಾಂಗಿಯಾಗಿ ಎದುರಿಸಬೇಕಾಗುತ್ತದೆ ಎಂದು ಕೇಂದ್ರ  ಗೃಹ ಸಚಿವ ಅಮಿತ್​ ಶಾ ಹೇಳಿದರು.

ಇಂದು ಹೌರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ವರ್ಚ್ಯುವಲ್​ ಆಗಿ ಭಾಷಣ ಮಾಡಿದ ಅವರು, ದೀದಿ ವಿರುದ್ಧ ಹರಿಹಾಯ್ದರು. ಹಾಗೇ ಇಂದು ಬಿಜೆಪಿಗೆ ಸೇರ್ಪಡೆಯಾದ ಐವರು ಮಾಜಿ ಟಿಎಂಸಿ ಮುಖಂಡರಿಗೆ ಸ್ವಾಗತ ಕೋರಿದರು.

ಟಿಎಂಸಿ ನಾಯಕರು ಒಬ್ಬರ ಬೆನ್ನಿಗೆ ಮತ್ತೊಬ್ಬರಂತೆ ಬಿಜೆಪಿಗೆ ಯಾಕೆ ಸೇರುತ್ತಿದ್ದಾರೆ ಎಂಬ ಬಗ್ಗೆ ಮಮತಾ ಬ್ಯಾನರ್ಜಿ ಚಿಂತನೆ ಮಾಡಬೇಕು.. ಅವರೆಲ್ಲ ಪಕ್ಷ ಬಿಡುತ್ತಿದ್ದಾರೆ ಎಂದರೆ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ವಿಫಲರಾಗಿದ್ದಾರೆ. ಈ ರಾಜ್ಯದ ಜನರಿಗೆ ಬೇಕಾಗಿದ್ದನ್ನು ಕೊಟ್ಟಿಲ್ಲ ಎಂದೇ ಅರ್ಥ. ಹೀಗೆ ಆದರೆ ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಅವರು ಏಕಾಂಗಿಯಾಗುತ್ತಾರೆ ಎಂದು ಹೇಳಿದರು.

ಸಂಬಂಧಿಗಳ ಸೇವೆಯಲ್ಲಿ ತೊಡಗಿದ್ದಾರೆ ! ಮಮತಾ ಬ್ಯಾನರ್ಜಿ ರಾಜ್ಯದ ಜನರ ಸೇವೆ ಮಾಡುತ್ತಿಲ್ಲ.. ಬದಲಾಗಿ ಇಲ್ಲಿರುವ ತನ್ನ ಸೋದರಳಿಯನ ಸೇವೆ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅಮಿತ್ ಶಾ, ಟಿಎಂಸಿ ಮಾ, ಮಾಟಿ, ಮನುಷ್ಯ್​ ( ತಾಯಿ, ಭೂಮಿ..ಮನುಷ್ಯತ್ವ) ಎಂಬ ಘೋಷಣೆಗಳೊಂದಿಗೆ ಬಾಯಲ್ಲಿ ಬಡಾಯಿ ಕೊಚ್ಚುವ ಟಿಎಂಸಿ ವಾಸ್ತವವಾಗಿ ಸುಲಿಗೆ, ಭ್ರಷ್ಟಾಚಾರ, ಅಶಾಂತಿ ಸೃಷ್ಟಿಸುವ ಕಾರ್ಯದಲ್ಲಿ ತೊಡಗಿದೆ ಎಂದರು. ಹಾಗೇ ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅದನ್ನೆಲ್ಲ ನಿರ್ಮೂಲನ ಮಾಡಿ, ಅಭಿವೃದ್ಧಿಯೆಡೆಗೆ ಗಮನ ಕೊಡಲಾಗುವುದು ಎಂದು ಭರವಸೆ ನೀಡಿದರು.

ಪಶ್ಚಿಮ ಬಂಗಾಳಕ್ಕೆ ಅಮಿತ್​ ಶಾ ಬದಲು ಸ್ಮೃತಿ ಇರಾನಿ ಭೇಟಿ; ಹೌರಹ್​ನಲ್ಲಿ ಪ್ರಚಾರ ಸಭೆ

Published On - 5:01 pm, Sun, 31 January 21

ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು