ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಮಮತಾ ಬ್ಯಾನರ್ಜಿ ಒಬ್ಬಂಟಿಯಾಗುತ್ತಾರೆ..: ಗೃಹ ಸಚಿವ ಅಮಿತ್​ ಶಾ

ಟಿಎಂಸಿ ಮಾ, ಮಾಟಿ, ಮನುಷ್ಯ್​ ( ತಾಯಿ, ಭೂಮಿ..ಮನುಷ್ಯತ್ವ) ಎಂಬ ಘೋಷಣೆಗಳೊಂದಿಗೆ ಬಾಯಲ್ಲಿ ಬಡಾಯಿ ಕೊಚ್ಚುವ ಟಿಎಂಸಿ ವಾಸ್ತವವಾಗಿ ಸುಲಿಗೆ, ಭ್ರಷ್ಟಾಚಾರ, ಅಶಾಂತಿ ಸೃಷ್ಟಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಅಮಿತ್ ಶಾ ಟೀಕಿಸಿದರು.

ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಮಮತಾ ಬ್ಯಾನರ್ಜಿ ಒಬ್ಬಂಟಿಯಾಗುತ್ತಾರೆ..: ಗೃಹ ಸಚಿವ ಅಮಿತ್​ ಶಾ
ಅಮಿತ್ ಶಾ ಮತ್ತು ಮಮತಾ ಬ್ಯಾನರ್ಜಿ
Follow us
| Updated By: ರಾಜೇಶ್ ದುಗ್ಗುಮನೆ

Updated on:Jan 31, 2021 | 5:01 PM

ದೆಹಲಿ: ಟಿಎಂಸಿ ಮುಖಂಡರು ಒಬ್ಬೊಬ್ಬರಾಗಿ ನಮ್ಮ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಹೀಗೆ ಮುಂದುವರಿದರೆ ಮುಂದಿನ ವಿಧಾನ ಸಭೆ ಚುನಾವಣೆಯನ್ನು ಮಮತಾ ಬ್ಯಾನರ್ಜಿ ಏಕಾಂಗಿಯಾಗಿ ಎದುರಿಸಬೇಕಾಗುತ್ತದೆ ಎಂದು ಕೇಂದ್ರ  ಗೃಹ ಸಚಿವ ಅಮಿತ್​ ಶಾ ಹೇಳಿದರು.

ಇಂದು ಹೌರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ವರ್ಚ್ಯುವಲ್​ ಆಗಿ ಭಾಷಣ ಮಾಡಿದ ಅವರು, ದೀದಿ ವಿರುದ್ಧ ಹರಿಹಾಯ್ದರು. ಹಾಗೇ ಇಂದು ಬಿಜೆಪಿಗೆ ಸೇರ್ಪಡೆಯಾದ ಐವರು ಮಾಜಿ ಟಿಎಂಸಿ ಮುಖಂಡರಿಗೆ ಸ್ವಾಗತ ಕೋರಿದರು.

ಟಿಎಂಸಿ ನಾಯಕರು ಒಬ್ಬರ ಬೆನ್ನಿಗೆ ಮತ್ತೊಬ್ಬರಂತೆ ಬಿಜೆಪಿಗೆ ಯಾಕೆ ಸೇರುತ್ತಿದ್ದಾರೆ ಎಂಬ ಬಗ್ಗೆ ಮಮತಾ ಬ್ಯಾನರ್ಜಿ ಚಿಂತನೆ ಮಾಡಬೇಕು.. ಅವರೆಲ್ಲ ಪಕ್ಷ ಬಿಡುತ್ತಿದ್ದಾರೆ ಎಂದರೆ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ವಿಫಲರಾಗಿದ್ದಾರೆ. ಈ ರಾಜ್ಯದ ಜನರಿಗೆ ಬೇಕಾಗಿದ್ದನ್ನು ಕೊಟ್ಟಿಲ್ಲ ಎಂದೇ ಅರ್ಥ. ಹೀಗೆ ಆದರೆ ಮುಂಬರುವ ವಿಧಾನಸಭಾ ಚುನಾವಣೆ ಹೊತ್ತಿಗೆ ಅವರು ಏಕಾಂಗಿಯಾಗುತ್ತಾರೆ ಎಂದು ಹೇಳಿದರು.

ಸಂಬಂಧಿಗಳ ಸೇವೆಯಲ್ಲಿ ತೊಡಗಿದ್ದಾರೆ ! ಮಮತಾ ಬ್ಯಾನರ್ಜಿ ರಾಜ್ಯದ ಜನರ ಸೇವೆ ಮಾಡುತ್ತಿಲ್ಲ.. ಬದಲಾಗಿ ಇಲ್ಲಿರುವ ತನ್ನ ಸೋದರಳಿಯನ ಸೇವೆ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅಮಿತ್ ಶಾ, ಟಿಎಂಸಿ ಮಾ, ಮಾಟಿ, ಮನುಷ್ಯ್​ ( ತಾಯಿ, ಭೂಮಿ..ಮನುಷ್ಯತ್ವ) ಎಂಬ ಘೋಷಣೆಗಳೊಂದಿಗೆ ಬಾಯಲ್ಲಿ ಬಡಾಯಿ ಕೊಚ್ಚುವ ಟಿಎಂಸಿ ವಾಸ್ತವವಾಗಿ ಸುಲಿಗೆ, ಭ್ರಷ್ಟಾಚಾರ, ಅಶಾಂತಿ ಸೃಷ್ಟಿಸುವ ಕಾರ್ಯದಲ್ಲಿ ತೊಡಗಿದೆ ಎಂದರು. ಹಾಗೇ ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅದನ್ನೆಲ್ಲ ನಿರ್ಮೂಲನ ಮಾಡಿ, ಅಭಿವೃದ್ಧಿಯೆಡೆಗೆ ಗಮನ ಕೊಡಲಾಗುವುದು ಎಂದು ಭರವಸೆ ನೀಡಿದರು.

ಪಶ್ಚಿಮ ಬಂಗಾಳಕ್ಕೆ ಅಮಿತ್​ ಶಾ ಬದಲು ಸ್ಮೃತಿ ಇರಾನಿ ಭೇಟಿ; ಹೌರಹ್​ನಲ್ಲಿ ಪ್ರಚಾರ ಸಭೆ

Published On - 5:01 pm, Sun, 31 January 21

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​