AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಜ್ರಿವಾಲ್ ನಿವಾಸದ ಮೇಲೆ ದಾಳಿ: ಸ್ಥಿತಿಗತಿ ವರದಿ ಸಲ್ಲಿಸಲು ಪೊಲೀಸರಿಗೆ 2 ವಾರಗಳ ಕಾಲಾವಕಾಶ ನೀಡಿದ ದೆಹಲಿ ಹೈಕೋರ್ಟ್

ಕೆಲವರು ಗೇಟ್ ಹಾರಿದರು. ಅವರು ಅದರಲ್ಲಿ ಯಶಸ್ವಿ ಆಗಲಿಲ್ಲ ಅಥವಾ ಅದು ಅವರ ಉದ್ದೇಶವೂ ಆಗಿರಲಿಕ್ಕಿಲ್ಲ ಎಂದು ತೋರುತ್ತದೆ. ಕೆಲವರು ಕಾನೂನು ಕೈಗೆತ್ತಿಕೊಂಡರು. ಅಲ್ಲಿ ಖಂಡಿತವಾಗಿಯೂ ಭಯದ ಸೃಷ್ಟಿಸಲು ಪ್ರಯತ್ನಿಸಲಾಗಿದೆ, ಅದು ಸ್ಪಷ್ಟವಾಗಿದೆ...

ಕೇಜ್ರಿವಾಲ್ ನಿವಾಸದ ಮೇಲೆ ದಾಳಿ: ಸ್ಥಿತಿಗತಿ ವರದಿ ಸಲ್ಲಿಸಲು ಪೊಲೀಸರಿಗೆ 2 ವಾರಗಳ ಕಾಲಾವಕಾಶ ನೀಡಿದ ದೆಹಲಿ ಹೈಕೋರ್ಟ್
ಅರವಿಂದ ಕೇಜ್ರಿವಾಲ್ ಮನೆಯ ಮುಖ್ಯ ದ್ವಾರಕ್ಕೆ ಕೇ ಸರಿ ಬಣ್ಣ ಬಳೆದಿರುವುದು
TV9 Web
| Edited By: |

Updated on: Apr 01, 2022 | 2:43 PM

Share

ದೆಹಲಿ: ಬಿಜೆಪಿಯ (BJP) ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾ (BYJM) ಗೆ ಸೇರಿದ ಸುಮಾರು 200 ಪ್ರತಿಭಟನಾಕಾರರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal)  ಅವರ ನಿವಾಸದ ಹೊರಗೆ ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಮತ್ತು ಮುಖ್ಯ ಗೇಟ್ ಅನ್ನು ಧ್ವಂಸಗೊಳಿಸಿದ್ದರು. ಇದಾಗಿ ಎರಡು ದಿನಗಳ ನಂತರ ದೆಹಲಿ ಹೈಕೋರ್ಟ್ ಇಲ್ಲಿಯವರೆಗೆ ನಡೆಸಿದ ತನಿಖೆಯ ಸ್ಥಿತಿಗತಿ ವರದಿಯನ್ನು ಎರಡು ವಾರಗಳಲ್ಲಿ ಸಲ್ಲಿಸಲು ಪೊಲೀಸರಿಗೆ ಆದೇಶಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿಪಿನ್ ಸಂಘಿ ಮತ್ತು ನ್ಯಾಯಮೂರ್ತಿ ನವೀನ್ ಚಾವ್ಲಾ ಅವರ ವಿಭಾಗೀಯ ಪೀಠವು, ಈ ಕೃತ್ಯವು ಭಯವನ್ನು ಸೃಷ್ಟಿಸಲು ಪ್ರಯತ್ನಿಸಲಾಗಿದೆ ಎಂಬುದು ಸ್ಪಷ್ಟವಾಗಿದೆ. ಘಟನೆಯ ಬಗ್ಗೆ ದೆಹಲಿ ಪೊಲೀಸರು ಯಾವ ಮಾಹಿತಿ ಹೊಂದಿದ್ದರು ಎಂಬುದನ್ನು ವಿವರಿಸಬೇಕು ಎಂದು ಹೇಳಿದರು. ಅಲ್ಲಿ ಏನಾಗಿದೆ ಎಂಬುದರ ಬಗ್ಗೆ ನಾವು ವಿಡಿಯೊಗಳನ್ನು ಸಹ ನೋಡಿದ್ದೇವೆ. ಅಶಿಸ್ತಿನ ಜನಸಮೂಹವನ್ನು ವಿಡಿಯೊದಲ್ಲಿ ಕಾಣಬಹುದು. ಅವರು ಮುಖ್ಯ ಪ್ರವೇಶ ದ್ವಾರವನ್ನು ಹಾಳುಗೆಡವುತ್ತಾರೆ. ಸಾರ್ವಜನಿಕ ಆಸ್ತಿಯೂ ನಾಶವಾಗಿದೆ. ಕೆಲವರು ಗೇಟ್ ಹಾರಿದರು. ಅವರು ಅದರಲ್ಲಿ ಯಶಸ್ವಿ ಆಗಲಿಲ್ಲ ಅಥವಾ ಅದು ಅವರ ಉದ್ದೇಶವೂ ಆಗಿರಲಿಕ್ಕಿಲ್ಲ ಎಂದು ತೋರುತ್ತದೆ. ಕೆಲವರು ಕಾನೂನು ಕೈಗೆತ್ತಿಕೊಂಡರು. ಅಲ್ಲಿ ಖಂಡಿತವಾಗಿಯೂ ಭಯದ ಸೃಷ್ಟಿಸಲು ಪ್ರಯತ್ನಿಸಲಾಗಿದೆ, ಅದು ಸ್ಪಷ್ಟವಾಗಿದೆ. ಪೊಲೀಸ್ ಪಡೆ  ಬಹುಶಃ ಅಸಮರ್ಪಕವಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ಅಲ್ಲಿದ್ದವರು ತಡೆಯಲು ಯತ್ನಿಸುತ್ತಿದ್ದರು. ಬಹುಶಃ ಅವರು ಹೆಚ್ಚು ಸಂಖ್ಯೆಯಲ್ಲಿದ್ದರು. ಈ ರೀತಿಯ ಘಟನೆ ನಡೆಯುತ್ತಿರುವ ಬಗ್ಗೆ ನೀವು ಯಾವ ರೀತಿಯ ಸೂಚನೆಯನ್ನು ಮತ್ತು ಯಾವ ರೀತಿಯ ಬೆದರಿಕೆ ಗ್ರಹಿಕೆಯನ್ನು ಹೊಂದಿದ್ದೀರಿ ಎಂಬುದನ್ನು ನೀವು ವಿವರಿಸಬೇಕು, ”ಎಂದು ನ್ಯಾಯಾಲಯ ಹೇಳಿದೆ.

ಪೊಲೀಸರನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಸಂಜಯ್ ಜೈನ್, ಎಫ್‌ಐಆರ್ ದಾಖಲಾಗಿದೆ ಮತ್ತು ಅರ್ಜಿದಾರರ ಕಳವಳಗಳನ್ನು ಪರಿಹರಿಸಲು ದೆಹಲಿ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ ಎಂದು ಸಲ್ಲಿಸಿದರು. ಎಂಟು ಜನರನ್ನು ಬಂಧಿಸಲಾಗಿದೆ ಮತ್ತು ಕೇಜ್ರಿವಾಲ್ ಅವರ ಬೆದರಿಕೆ ಗ್ರಹಿಕೆಯನ್ನು ಅರ್ಥಮಾಡಿಕೊಳ್ಳಲು ದೆಹಲಿ ಪೊಲೀಸರು ಸಿಎಂ ಸೆಕ್ರೆಟರಿಯೇಟ್‌ನೊಂದಿಗೆ ಸಭೆಯನ್ನು ಏರ್ಪಡಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.

ಮುಚ್ಚಿದ ಕವರ್‌ನಲ್ಲಿ ಸ್ಥಿತಿ ವರದಿಯನ್ನು ಸಲ್ಲಿಸುವುದಾಗಿ ಮತ್ತು ಘಟನೆಯ ಸಿಸಿಟಿವಿ ದೃಶ್ಯಗಳು ಸೇರಿದಂತೆ ಎಲ್ಲಾ ಪುರಾವೆಗಳನ್ನು ಸಂರಕ್ಷಿಸಲಾಗುವುದು ಎಂದು ಜೈನ್ ಹೇಳಿದರು.

ದಾಳಿಯ ಸ್ವತಂತ್ರ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು (SIT) ರಚಿಸುವಂತೆ ಕೋರಿ ಆಮ್ ಆದ್ಮಿ ಪಕ್ಷದ ಶಾಸಕ ಸೌರಭ್ ಭಾರದ್ವಾಜ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಭಾರದ್ವಾಜ್ ಅವರು ಎಸ್‌ಐಟಿಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಮುಖ್ಯಸ್ಥರಾಗಬೇಕು ಎಂದು ಹೇಳಿದ್ದಾರೆ.

ಭಾರದ್ವಾಜ್ ಅವರು ಅರ್ಜಿಯಲ್ಲಿ, ಸಿಎಂ ನಿವಾಸದ ಹೊರಗೆ ಭದ್ರತೆಯನ್ನು ನಿರ್ವಹಿಸುವ ಜವಾಬ್ದಾರಿ ಹೊಂದಿರುವ ಪೊಲೀಸ್ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ. ಕೇಜ್ರಿವಾಲ್ ಅವರ ನಿವಾಸದ ಹೊರಗೆ ಸೂಕ್ತ ಭದ್ರತೆಗಾಗಿ ನಿರ್ದೇಶನವನ್ನು ಕೋರುವುದರ ಜೊತೆಗೆ ಅವರ ನಿವಾಸದ ಹೊರಗಿನ ರಸ್ತೆಯನ್ನು ಸುರಕ್ಷಿತವಾಗಿರಿಸಲು ಹಿಂದಿನ ನ್ಯಾಯಾಲಯದ ಆದೇಶ ಪಾಲಿಸುವಂತೆ ಅರ್ಜಿಯಲ್ಲಿ ಹೇಳಲಾಗಿದೆ. ಹಿಂಸಾಚಾರವು ಕೇಜ್ರಿವಾಲ್ ಮತ್ತು ಅವರ ಕುಟುಂಬವನ್ನು ಉದ್ದೇಶಿಸಿ ಆಗಿತ್ತು ಎಂದು ಹೇಳಿದ ಭಾರದ್ವಾಜ್, ಬಲ ಪ್ರಯೋಗದಿಂದ ರಾಷ್ಟ್ರ ರಾಜಧಾನಿಯಲ್ಲಿರು ಚುನಾಯಿತ ಪ್ರತಿನಿಧಿ ಮತ್ತು ದೆಹಲಿಯ ಚುನಾಯಿತ ಸರ್ಕಾರವನ್ನು ಬಗ್ಗುಬಡಿಯಲು ಉದ್ದೇಶಿಸಲಾಗಿದೆ ಎಂದು ವಾದಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿಯಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ದೆಹಲಿ ಪೊಲೀಸರು ತನ್ನ ಕರ್ತವ್ಯವನ್ನು ಸಂಪೂರ್ಣವಾಗಿ ತ್ಯಜಿಸಿದ್ದಾರೆ ಎಂದು ಆರೋಪಿಸಿದ ಭಾರದ್ವಾಜ್, ಪೊಲೀಸರು ಬಲವನ್ನು ನಿಯಂತ್ರಿಸುವ ಕೇಂದ್ರ ಸರ್ಕಾರದ ಆಡಳಿತ ಪಕ್ಷದ ಗೂಂಡಾಗಳೊಂದಿಗೆ ಕೈಜೋಡಿಸಿದ್ದಾರೆ ಎಂದು ತೋರುತ್ತದೆ ಎಂದು ಆರೋಪಿಸಿದ್ದಾರೆ. ಈ ಹಿಂದೆ ಉಪಮುಖ್ಯಮಂತ್ರಿ ಮನೆ ಮೇಲೆ ದಾಳಿ ನಡೆದಾಗಲೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಆರೋಪಿಸಿದರು “ಪೊಲೀಸರ ಇಂತಹ ನಿಷ್ಕ್ರಿಯತೆ ಮತ್ತು ಜಟಿಲತೆಯಿಂದಾಗಿ ಬಿಜೆಪಿ ಗೂಂಡಾಗಳು ದೆಹಲಿಯ ಎನ್‌ಸಿಟಿ ಸರ್ಕಾರದ ಚುನಾಯಿತ ಅಧಿಕಾರಿಗಳ ಮೇಲೆ ಪದೇ ಪದೇ ದಾಳಿ ನಡೆಸಲು ಧೈರ್ಯತೋರಿಸುತ್ತಿದ್ದಾರೆ ಎಂದು ಭಾರದ್ವಾಜ್ ಮನವಿಯಲ್ಲಿ ತಿಳಿಸಿದ್ದಾರೆ.

ದೆಹಲಿ ಪೊಲೀಸರು ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಸುತ್ತಾರೆ ಎಂದು ಸಂದೇಹ ವ್ಯಕ್ತಪಡಿಸಿದ ಭಾರದ್ವಾಜ್, ದೆಹಲಿಯಲ್ಲಿ ಚುನಾಯಿತ ಅಧಿಕಾರಿಗಳ ಮೇಲೆ ದಾಳಿಗಳು ದಿನನಿತ್ಯದ ವಿಷಯವಾಗುತ್ತಿರುವಾಗ, ಜವಾಬ್ದಾರಿಯನ್ನು ಸರಿಪಡಿಸದಿದ್ದರೆ ಜನರು ಕಾನೂನು ಸುವ್ಯವಸ್ಥೆಯಲ್ಲಿ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ವಾದಿಸಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಪರೆಶಾನಿ ಪೇ ಚರ್ಚಾ ಮಾಡುವುದು ಯಾವಾಗ?; ಇಂಧನ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಬಗ್ಗೆ ಎನ್​​ಸಿಪಿ ತರಾಟೆ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?