AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Bypolls: ಖಾಲಿ ಇರುವ ಎರಡು ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಉಪಚುನಾವಣೆಗೆ ಸಂಬಂಧಪಟ್ಟ ಅಧಿಸೂಚನೆಯನ್ನು ನವೆಂಬರ್​ 9ರಂದು ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ನವೆಂಬರ್​ 16 ಕೊನೇ ದಿನ ಇರುತ್ತದೆ. ನವೆಂಬರ್​ 29ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದೆ.

Rajya Sabha Bypolls: ಖಾಲಿ ಇರುವ ಎರಡು ರಾಜ್ಯಸಭಾ ಸ್ಥಾನಗಳಿಗೆ ಉಪಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
ರಾಜ್ಯಸಭೆ
TV9 Web
| Updated By: Lakshmi Hegde|

Updated on: Oct 31, 2021 | 2:53 PM

Share

ಕೇರಳ ಮತ್ತು ಪಶ್ಚಿಮ ಬಂಗಾಳದಿಂದ ಖಾಲಿ ಇರುವ ರಾಜ್ಯಸಭಾ ಸ್ಥಾನ (Rajyasabha Seat) ಗಳಿಗೆ ನವೆಂಬರ್​ 29ರಂದು ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ (Election Commission) ಇಂದು ಘೋಷಣೆ ಮಾಡಿದೆ. ಈ ಎರಡೂ ರಾಜ್ಯಗಳಿಂದ ತಲಾ ಒಂದು ರಾಜ್ಯಸಭಾ ಸೀಟ್​ ಖಾಲಿ ಇದೆ.  ಕೇರಳದ ಕಾಂಗ್ರೆಸ್​​ (M) ನಾಯಕ ಜೋಸೆ ಕೆ ಮಣಿ ರಾಜೀನಾಮೆ ನೀಡಿದ್ದರು. ಹಾಗೇ ಪಶ್ಚಿಮ ಬಂಗಾಳದ ರಾಜ್ಯ ಸಭಾ ಸದಸ್ಯೆ ಟಿಎಂಸಿಯ ಅರ್ಪಿತಾ ಘೋಷ್​ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.  

ಕೇರಳದಿಂದ ರಾಜ್ಯಸಭೆಗೆ ಹೋಗಿದ್ದ ಮಣಿ 2021ರ ಜನವರಿ 11ರಂದು ರಾಜೀನಾಮೆ ಸಲ್ಲಿಸಿದ್ದರು. ಅವರ ಅವಧಿ 2024ರ ಜುಲೈಗೆ ಮುಗಿಯುವುದಿತ್ತು. ಆದರೆ ಅದಕ್ಕೂ ಮೂರು ವರ್ಷ ಮೊದಲೇ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು ತೃಣಮೂಲ ಕಾಂಗ್ರೆಸ್​ನ ಅರ್ಪಿತಾ ಘೋಷ್​ ಸೆಪ್ಟೆಂಬರ್​ 15ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಅಧಿಕಾರ ಅವಧಿ 2026ಕ್ಕೆ ಮುಗಿಯುವುದಿತ್ತು. ಈ ಎರಡೂ ಸ್ಥಾನಗಳಿಗೆ ನವೆಂಬರ್​ 29ರಂದು ಉಪಚುನಾವಣೆ ನಡೆಸಲು ಚುನಾವನಾ ಆಯೋಗ ನಿರ್ಧಾರ ಮಾಡಿದೆ.  ಕೇರಳದಲ್ಲಿ ಕೊವಿಡ್​ 19 ಜಾಸ್ತಿ ಇದ್ದ ಕಾರಣ ಚುನಾವಣೆ ನಡೆಸಲು ಆಯೋಗ ಸ್ವಲ್ಪ ಹಿಂದೇಟು ಹಾಕಿತ್ತು. ಆದರೆ ಈಗ ಅಲ್ಲಿನ ಪರಿಸ್ಥಿತಿ ಸ್ವಲ್ಪ ಸುಧಾರಿಸಿದ್ದರಿಂದ ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯ ಸಭೆ ಸ್ಥಾನಗಳಿಗೆ ಒಟ್ಟಿಗೇ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ.

ಉಪಚುನಾವಣೆಗೆ ಸಂಬಂಧಪಟ್ಟ ಅಧಿಸೂಚನೆಯನ್ನು ನವೆಂಬರ್​ 9ರಂದು ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ನವೆಂಬರ್​ 16 ಕೊನೇ ದಿನ ಇರುತ್ತದೆ. ನವೆಂಬರ್​ 29ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆವರೆಗೆ ಚುನಾವಣೆ ನಡೆಯಲಿದೆ. ವೋಟಿಂಗ್​ ಅಂತ್ಯವಾದ ಒಂದು ತಾಸಿನಲ್ಲಿ ಮತಎಣಿಕೆ ಕೂಡ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿಕೆ ಬಿಡುಗಡೆ ಮಾಡಿದೆ.  ಹಾಗೇ ಕೊವಿಡ್​ 19 ನಿಯಂತ್ರಣಾ ನಿಯಮಗಳನ್ನು ಸರಿಯಾಗಿ ಅನುಸರಿಸಲಾಗುವುದು ಎಂದೂ ಹೇಳಿದೆ.

ಇದನ್ನೂ ಓದಿ: ಪತ್ನಿ ಅಶ್ವಿನಿಗೆ ಪ್ರೀತಿಯಿಂದ 4 ಕೋಟಿ ಬೆಲೆಬಾಳುವ ಕಾರನ್ನು ಉಡುಗೊರೆಯಾಗಿ ನೀಡಿದ್ದ ಪುನೀತ್​ ರಾಜ್​ಕುಮಾರ್​

ಬಾಗಲಕೋಟೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ 200 ಕ್ವಿಂಟಾಲ್ ಅಕ್ಕಿ ಜಪ್ತಿ! ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ