AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Bypolls: ರಾಜ್ಯಸಭೆಯ 7 ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ ಮತ್ತು ಅಸ್ಸಾಂ ನಿಂದ ಆಯ್ಕೆಯಾಗಿದ್ದ ರಾಜ್ಯ ಸಭಾ ಸದಸ್ಯರು ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ಖಾಲಿ ಆಗಿದ್ದರೆ, ಮಹಾರಾಷ್ಟ್ರದಲ್ಲಿ, ರಾಜ್ಯಸಭಾ ಸದಸ್ಯ ರಾಜೀವ್ ಶಂಕರರಾವ್ ಸತಾವ್ ಮೃತರಾದ ಹಿನ್ನೆಲೆಯಲ್ಲಿ ಖಾಲಿಯಾಗಿತ್ತು.

Rajya Sabha Bypolls: ರಾಜ್ಯಸಭೆಯ 7 ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
ರಾಜ್ಯಸಭೆ
TV9 Web
| Updated By: Lakshmi Hegde|

Updated on:Sep 09, 2021 | 1:12 PM

Share

ರಾಜ್ಯಸಭೆಯಲ್ಲಿ ಖಾಲಿ ಇರುವ 6 ಸ್ಥಾನಗಳಿಗೆ ಅಕ್ಟೋಬರ್​ 4ರಂದು ಉಪಚುನಾವಣೆ (Rajya Sabha Bypolls) ನಡೆಸಲಾಗುವುದು ಎಂದು ಇಂದು ಚುನಾವಣಾ ಆಯೋಗ (Election Commission) ಘೋಷಿಸಿದೆ.  ತಮಿಳುನಾಡಿನ ಎರಡು ರಾಜ್ಯಸಭಾ ಸ್ಥಾನ, ಪಶ್ಚಿಮ ಬಂಗಾಳದ ಒಂದು, ಅಸ್ಸಾಂ, ಮಧ್ಯಪ್ರದೇಶ, ಪುದುಚೇರಿ ಮತ್ತು ಮಹಾರಾಷ್ಟ್ರಗಳ ತಲಾ ಒಂದು ಸೀಟ್​ಗಾಗಿ ಅಕ್ಟೋಬರ್​ 4ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.  ಇದರಲ್ಲೀಗ ಆರು ಸೀಟುಗಳು ಈಗಾಗಲೇ ಖಾಲಿ ಇದೆ. ಅದರಲ್ಲಿ ಪುದುಚೇರಿಯಲ್ಲಿ ಇನ್ನೂ ಖಾಲಿ ಆಗಿಲ್ಲ. ಆದರೆ ಪುದುಚೇರಿ ರಾಜ್ಯಸಭಾ ಸದಸ್ಯ ಎನ್​. ಗೋಪಾಲಕೃಷ್ಣ ಅಕ್ಟೋಬರ್​ 6ರಂದು ನಿವೃತ್ತ ಗೊಳ್ಳಲಿದ್ದು, ಆ ಸ್ಥಾನಕ್ಕೂ ಕೂಡ ಮುಂಚಿತವಾಗಿಯೇ, ಅಂದರೆ ಅಕ್ಟೋಬರ್​ 4ರಂದು ಚುನಾವಣೆ ನಡೆಯಲಿದೆ ಎಂದು ಎಲೆಕ್ಷನ್​ ಕಮಿಷನ್​ ತಿಳಿಸಿದೆ. 

ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ ಮತ್ತು ಅಸ್ಸಾಂ ನಿಂದ ಆಯ್ಕೆಯಾಗಿದ್ದ ರಾಜ್ಯ ಸಭಾ ಸದಸ್ಯರು ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ಖಾಲಿ ಆಗಿದ್ದರೆ, ಮಹಾರಾಷ್ಟ್ರದಲ್ಲಿ, ರಾಜ್ಯಸಭಾ ಸದಸ್ಯ ರಾಜೀವ್ ಶಂಕರರಾವ್ ಸತಾವ್ ಮೃತರಾದ ಹಿನ್ನೆಲೆಯಲ್ಲಿ ಖಾಲಿಯಾಗಿತ್ತು. ಪಶ್ಚಿಮ ಬಂಗಾಳದ ಮಾನಸ್​ ರಂಜನ್​ ಭುನಿಯಾ, ಅಸ್ಸಾಂ ರಾಜ್ಯ ಸಭಾ ಸದಸ್ಯ ಬಿಸ್ವಜಿತ್ ದೈರ್ಮರ್ಯ, ತಮಿಳುನಾಡಿನ ಕೆ.ಪಿ.ಮುನುಸಾಮಿ ಮತ್ತು ಆರ್​.ವೈಥಿಲಿಂಗಮ್​ ಮತ್ತು ಮಧ್ಯಪ್ರದೇಶದ ಥಾವರ್​ಚಾಂದ್ ಗೆಹ್ಲೋಟ್​ ರಾಜೀನಾಮೆ ನೀಡಿದವರಾಗಿದ್ದಾರೆ.

ರಾಜ್ಯಸಭೆಯ ಒಟ್ಟು 7 ಸ್ಥಾನಗಳಿಗೆ ಉಪಚುನಾವಣೆ ನಡೆಯುವ ಜತೆಗೆ, ಬಿಹಾರದ ವಿಧಾನಪರಿಷತ್​​ನಲ್ಲಿರುವ ಒಂದು ಖಾಲಿ ಸ್ಥಾನಕ್ಕೂ ಅಕ್ಟೋಬರ್​ 4ರಂದೇ ಉಪಚುನಾವಣೆ ನಡೆಯಲಿದೆ ಎಂದು ಇಸಿ ತಿಳಿಸಿದೆ. ಎಂಎಲ್​ಸಿ ತನ್ವೀರ್ ಅಕ್ತರ್​ ಮೇ 9ರಂದು ಮೃತರಾದ ಬಳಿಕ ಈ ಸೀಟ್​ ಖಾಲಿಯಾಗಿತ್ತು. ಈ ಎಲ್ಲ ಉಪಚುನಾವಣೆಗಳ ಫಲಿತಾಂಶ ಅಕ್ಟೋಬರ್ 4ರಂದು ಸಂಜೆಯೇ ಘೋಷಣೆಯಾಗಲಿದೆ.

ಇದನ್ನೂ ಓದಿ: ಕಿರಿಕ್​ ಪಾರ್ಟಿ ರೀತಿ ಡಿಸೆಂಬರ್​ನಲ್ಲಿ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆ; ‘777 ಚಾರ್ಲಿ’ ಟಾರ್ಚರ್​ಗೆ ಧರ್ಮ ಸುಸ್ತೋ ಸುಸ್ತು​

‘ದೇಶವಿರೋಧಿ’ ಉಪನ್ಯಾಸ, ಟೀಕೆಗಳು ಬೇಡ: ಸಿಬ್ಬಂದಿಗಳಿಗೆ ಸೂಚನೆ ನೀಡಿದ ಕೇರಳದ ಸೆಂಟ್ರಲ್ ಯುನಿವರ್ಸಿಟಿ

(Bypolls to 7 Rajya Sabha seats on October 4 announced By Election Commission)

Published On - 12:50 pm, Thu, 9 September 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ