AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Bypolls: ರಾಜ್ಯಸಭೆಯ 7 ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ ಮತ್ತು ಅಸ್ಸಾಂ ನಿಂದ ಆಯ್ಕೆಯಾಗಿದ್ದ ರಾಜ್ಯ ಸಭಾ ಸದಸ್ಯರು ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ಖಾಲಿ ಆಗಿದ್ದರೆ, ಮಹಾರಾಷ್ಟ್ರದಲ್ಲಿ, ರಾಜ್ಯಸಭಾ ಸದಸ್ಯ ರಾಜೀವ್ ಶಂಕರರಾವ್ ಸತಾವ್ ಮೃತರಾದ ಹಿನ್ನೆಲೆಯಲ್ಲಿ ಖಾಲಿಯಾಗಿತ್ತು.

Rajya Sabha Bypolls: ರಾಜ್ಯಸಭೆಯ 7 ಸ್ಥಾನಕ್ಕೆ ಉಪಚುನಾವಣೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ
ರಾಜ್ಯಸಭೆ
TV9 Web
| Edited By: |

Updated on:Sep 09, 2021 | 1:12 PM

Share

ರಾಜ್ಯಸಭೆಯಲ್ಲಿ ಖಾಲಿ ಇರುವ 6 ಸ್ಥಾನಗಳಿಗೆ ಅಕ್ಟೋಬರ್​ 4ರಂದು ಉಪಚುನಾವಣೆ (Rajya Sabha Bypolls) ನಡೆಸಲಾಗುವುದು ಎಂದು ಇಂದು ಚುನಾವಣಾ ಆಯೋಗ (Election Commission) ಘೋಷಿಸಿದೆ.  ತಮಿಳುನಾಡಿನ ಎರಡು ರಾಜ್ಯಸಭಾ ಸ್ಥಾನ, ಪಶ್ಚಿಮ ಬಂಗಾಳದ ಒಂದು, ಅಸ್ಸಾಂ, ಮಧ್ಯಪ್ರದೇಶ, ಪುದುಚೇರಿ ಮತ್ತು ಮಹಾರಾಷ್ಟ್ರಗಳ ತಲಾ ಒಂದು ಸೀಟ್​ಗಾಗಿ ಅಕ್ಟೋಬರ್​ 4ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.  ಇದರಲ್ಲೀಗ ಆರು ಸೀಟುಗಳು ಈಗಾಗಲೇ ಖಾಲಿ ಇದೆ. ಅದರಲ್ಲಿ ಪುದುಚೇರಿಯಲ್ಲಿ ಇನ್ನೂ ಖಾಲಿ ಆಗಿಲ್ಲ. ಆದರೆ ಪುದುಚೇರಿ ರಾಜ್ಯಸಭಾ ಸದಸ್ಯ ಎನ್​. ಗೋಪಾಲಕೃಷ್ಣ ಅಕ್ಟೋಬರ್​ 6ರಂದು ನಿವೃತ್ತ ಗೊಳ್ಳಲಿದ್ದು, ಆ ಸ್ಥಾನಕ್ಕೂ ಕೂಡ ಮುಂಚಿತವಾಗಿಯೇ, ಅಂದರೆ ಅಕ್ಟೋಬರ್​ 4ರಂದು ಚುನಾವಣೆ ನಡೆಯಲಿದೆ ಎಂದು ಎಲೆಕ್ಷನ್​ ಕಮಿಷನ್​ ತಿಳಿಸಿದೆ. 

ಪಶ್ಚಿಮ ಬಂಗಾಳ, ತಮಿಳುನಾಡು, ಮಧ್ಯಪ್ರದೇಶ ಮತ್ತು ಅಸ್ಸಾಂ ನಿಂದ ಆಯ್ಕೆಯಾಗಿದ್ದ ರಾಜ್ಯ ಸಭಾ ಸದಸ್ಯರು ರಾಜೀನಾಮೆ ನೀಡಿದ್ದರಿಂದ ಆ ಸ್ಥಾನ ಖಾಲಿ ಆಗಿದ್ದರೆ, ಮಹಾರಾಷ್ಟ್ರದಲ್ಲಿ, ರಾಜ್ಯಸಭಾ ಸದಸ್ಯ ರಾಜೀವ್ ಶಂಕರರಾವ್ ಸತಾವ್ ಮೃತರಾದ ಹಿನ್ನೆಲೆಯಲ್ಲಿ ಖಾಲಿಯಾಗಿತ್ತು. ಪಶ್ಚಿಮ ಬಂಗಾಳದ ಮಾನಸ್​ ರಂಜನ್​ ಭುನಿಯಾ, ಅಸ್ಸಾಂ ರಾಜ್ಯ ಸಭಾ ಸದಸ್ಯ ಬಿಸ್ವಜಿತ್ ದೈರ್ಮರ್ಯ, ತಮಿಳುನಾಡಿನ ಕೆ.ಪಿ.ಮುನುಸಾಮಿ ಮತ್ತು ಆರ್​.ವೈಥಿಲಿಂಗಮ್​ ಮತ್ತು ಮಧ್ಯಪ್ರದೇಶದ ಥಾವರ್​ಚಾಂದ್ ಗೆಹ್ಲೋಟ್​ ರಾಜೀನಾಮೆ ನೀಡಿದವರಾಗಿದ್ದಾರೆ.

ರಾಜ್ಯಸಭೆಯ ಒಟ್ಟು 7 ಸ್ಥಾನಗಳಿಗೆ ಉಪಚುನಾವಣೆ ನಡೆಯುವ ಜತೆಗೆ, ಬಿಹಾರದ ವಿಧಾನಪರಿಷತ್​​ನಲ್ಲಿರುವ ಒಂದು ಖಾಲಿ ಸ್ಥಾನಕ್ಕೂ ಅಕ್ಟೋಬರ್​ 4ರಂದೇ ಉಪಚುನಾವಣೆ ನಡೆಯಲಿದೆ ಎಂದು ಇಸಿ ತಿಳಿಸಿದೆ. ಎಂಎಲ್​ಸಿ ತನ್ವೀರ್ ಅಕ್ತರ್​ ಮೇ 9ರಂದು ಮೃತರಾದ ಬಳಿಕ ಈ ಸೀಟ್​ ಖಾಲಿಯಾಗಿತ್ತು. ಈ ಎಲ್ಲ ಉಪಚುನಾವಣೆಗಳ ಫಲಿತಾಂಶ ಅಕ್ಟೋಬರ್ 4ರಂದು ಸಂಜೆಯೇ ಘೋಷಣೆಯಾಗಲಿದೆ.

ಇದನ್ನೂ ಓದಿ: ಕಿರಿಕ್​ ಪಾರ್ಟಿ ರೀತಿ ಡಿಸೆಂಬರ್​ನಲ್ಲಿ ರಕ್ಷಿತ್​ ಶೆಟ್ಟಿ ಅದೃಷ್ಟ ಪರೀಕ್ಷೆ; ‘777 ಚಾರ್ಲಿ’ ಟಾರ್ಚರ್​ಗೆ ಧರ್ಮ ಸುಸ್ತೋ ಸುಸ್ತು​

‘ದೇಶವಿರೋಧಿ’ ಉಪನ್ಯಾಸ, ಟೀಕೆಗಳು ಬೇಡ: ಸಿಬ್ಬಂದಿಗಳಿಗೆ ಸೂಚನೆ ನೀಡಿದ ಕೇರಳದ ಸೆಂಟ್ರಲ್ ಯುನಿವರ್ಸಿಟಿ

(Bypolls to 7 Rajya Sabha seats on October 4 announced By Election Commission)

Published On - 12:50 pm, Thu, 9 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ