AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಹೊತ್ತಿ ಉರಿದ CAA ಕಿಚ್ಚು: ಪ್ರತಿಭಟನಾಕಾರರ ಆಕ್ರೋಶಕ್ಕೆ ಐವರು ಬಲಿ

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ವೇಳೆಯೇ ರಾಷ್ಟ್ರ ರಾಜಧಾನಿ ದೆಹಲಿಯ ಈಶಾನ್ಯ ಭಾಗ ಹೊತ್ತಿ ಉರಿಯುತ್ತಿದೆ. ಸಿಎಎ ಪರ-ವಿರೋಧಿ ಗುಂಪುಗಳು ಕಲ್ಲೆಸೆತ, ಅಂಗಡಿಗಳು-ಮನೆಗಳಿಗೆ ಬೆಂಕಿ ಹಚ್ಚೋ ಮೂಲಕ ದೆಹಲಿಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುವಂತೆ ಮಾಡಿದ್ದಾರೆ. ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ, ದೆಹಲಿಯ ಜಾಮಿಯಾ ಮಿಲ್ಲಿಯಾ ವಿವಿಯಲ್ಲಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಇದರಲ್ಲಿ ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ರು. ಈ ಘಟನೆ ಮರೆಯೋ ಮುನ್ನವೇ ಈಶಾನ್ಯ ದೆಹಲಿಯ ಜಫರಾಬಾದ್​, ಮೌಜ್​ಪುರ, ಸೀಲಾಂಪುರ, […]

ದೆಹಲಿಯಲ್ಲಿ ಹೊತ್ತಿ ಉರಿದ CAA ಕಿಚ್ಚು: ಪ್ರತಿಭಟನಾಕಾರರ ಆಕ್ರೋಶಕ್ಕೆ ಐವರು ಬಲಿ
ಸಾಧು ಶ್ರೀನಾಥ್​
|

Updated on:Feb 25, 2020 | 1:14 PM

Share

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ವೇಳೆಯೇ ರಾಷ್ಟ್ರ ರಾಜಧಾನಿ ದೆಹಲಿಯ ಈಶಾನ್ಯ ಭಾಗ ಹೊತ್ತಿ ಉರಿಯುತ್ತಿದೆ. ಸಿಎಎ ಪರ-ವಿರೋಧಿ ಗುಂಪುಗಳು ಕಲ್ಲೆಸೆತ, ಅಂಗಡಿಗಳು-ಮನೆಗಳಿಗೆ ಬೆಂಕಿ ಹಚ್ಚೋ ಮೂಲಕ ದೆಹಲಿಯಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುವಂತೆ ಮಾಡಿದ್ದಾರೆ.

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ, ದೆಹಲಿಯ ಜಾಮಿಯಾ ಮಿಲ್ಲಿಯಾ ವಿವಿಯಲ್ಲಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಇದರಲ್ಲಿ ಹಲವಾರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ರು. ಈ ಘಟನೆ ಮರೆಯೋ ಮುನ್ನವೇ ಈಶಾನ್ಯ ದೆಹಲಿಯ ಜಫರಾಬಾದ್​, ಮೌಜ್​ಪುರ, ಸೀಲಾಂಪುರ, ಗೌತಂಪುರಿ, ಭಜನ್​ಪುರ, ಚಾಂದ್​ಬಾಗ್, ಮುಸ್ತಾಫಾಬಾದ್, ವಜೀರಾಬಾದ್, ಶಿವ್ ವಿಹಾರ್ ಪ್ರದೇಶಗಳಲ್ಲಿ ಸಿಎಎ ಪರ-ವಿರೋಧಿ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿವೆ.

ಭಾರತಕ್ಕೆ ಕೆಟ್ಟ ಹೆಸರು ತರಲು ಕಾಣದ ಕೈಗಳ ಕೈವಾಡ? ಈಶಾನ್ಯ ದೆಹಲಿಯ ಜಫರಾಬಾದ್​ನಲ್ಲಿ, ಸಿಎಎ ವಿರೋಧಿಸಿ ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಶನಿವಾರ ಏಕಾಏಕಿ ಪ್ರತಿಭಟನೆ ಆರಂಭಿಸಿದ್ರು. ಇದನ್ನ ವಿರೋಧಿಸಿ ಮೌಜ್​ಪುರದಲ್ಲಿ ಸಿಎಎ ಪರ ಇರುವವರು ಭಾನುವಾರ ಪ್ರತಿಭಟನೆಗೆ ಮುಂದಾದ್ರು. ಇದು ಸಿಎಎ ಪರ-ವಿರೋಧಿ ಗುಂಪುಗಳನ ನಡುವೆ ಸಂಘರ್ಷಕ್ಕೆ ಕಾರಣವಾಗಿ, ಭಾನುವಾರವೇ ಕಲ್ಲು ತೂರಾಟ ನಡೆದಿತ್ತು. ಪೊಲೀಸರು ಲಾಠಿಚಾರ್ಜ್ ನಡೆಸಿ ಕಲ್ಲು ತೂರಾಟ ನಡೆಸ್ತಿದ್ದವರನ್ನ ಚದುರಿಸಿ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತಂದಿದ್ರು. ಆದ್ರೆ, ಸೋಮವಾರ ಮತ್ತೆ ಎರಡು ಗುಂಪುಗಳ ನಡುವೆ ಮತ್ತೆ ಕಲ್ಲು ತೂರಾಟ ನಡೆದಿದೆ.

ದೆಹಲಿಯಲ್ಲಿ ಸಿಎಎ ಪರ-ವಿರೋಧಿ ಹೋರಾಟಕ್ಕೆ 5 ಬಲಿ! ದೆಹಲಿಯ ಚಾಂದ್​ಬಾಗ್, ಮೌಜ್​ಪುರ, ಭಜನ್​ಪುರ, ವಜೀರಾಬಾದ್​, ಜಫರಾಬಾದ್​ಗಳಲ್ಲಿ ಸೋಮವಾರ ಸಿಎಎ ಪರ-ವಿರೋಧಿ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ವು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ರತನ್​ಲಾಲ್ ಎಂಬ ಹೆಡ್ ಕಾನ್ಸ್​ಟೇಬಲ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದೇ ರೀತಿ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಮೊಹಮ್ಮದ್ ಫುರ್​ಖಾನ್ ಅನ್ನೋ ವ್ಯಕ್ತಿಯೂ ಮೃತಪಟ್ಟಿದ್ದಾನೆ.

ಅಲ್ದೆ, ದೆಹಲಿಯ ಶಾದರಾ ಡಿಸಿಪಿ ಅಮಿತ್ ಶರ್ಮಾಗೆ ಕಲ್ಲೇಟು ತಗುಲಿ ತೀವ್ರ ಗಾಯಗಳಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಮೆಟ್ರೋ ಜಫರಾಬಾದ್, ಮೌಜ್​ಪುರ ಮೆಟ್ರೋ ಸ್ಟೇಷನ್​ಗಳನ್ನ ಸೋಮವಾರ ಬೆಳಗ್ಗಿನಿಂದಲೇ ಮುಚ್ಚಿತ್ತು. ಇಷ್ಟಾದ್ರೂ, ಎರಡು ಮೆಟ್ರೋ ಸ್ಟೇಷನ್​ಗಳ ಅಕ್ಕಪಕ್ಕದ ಅಂಗಡಿಗಳು, ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಅಲ್ದೆ, ಹಲವು ಅಂಗಡಿಗಳಿಗೆ ಬೆಂಕಿ ಕೂಡ ಹಚ್ಚಲಾಗಿದೆ.

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಟ್ವೀಟ್: ದೆಹಲಿಯಲ್ಲಿ ನಡೆದಿರೋ ಹಿಂಸಾಚಾರದ ಕುರಿತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದು, ಜನರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಅಲ್ದೆ, ಪರಿಸ್ಥಿತಿ ಹತೋಟಿಗೆ ತರುವಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ಲೆಫ್ಟಿನೆಂಟ್ ಗವರ್ನರ್​ಗೆ ಮನವಿ ಮಾಡಿದ್ದಾರೆ. ಇನ್ನು ಪರಿಸ್ಥಿತಿ ಕುರಿತು ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿ ಶಾಂತಿ-ಸುವ್ಯವಸ್ಥೆ ಕಾಪಾಡಲು ಸೂಚನೆ ನೀಡಿದ್ದಾರೆ.

ಟ್ರಂಪ್ ಭೇಟಿ ವೇಳೆಯೇ ಶಾಂತಿ ಕದಡಲು ಪ್ರಯತ್ನ? ಈಶಾನ್ಯ ದೆಹಲಿಯಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಲು ಕಾಣದ ಕೈಗಳು ಕೆಲಸ ಮಾಡ್ತಿವೆ ಅಂತಾ ಕೇಂದ್ರ ಸರ್ಕಾರ ಅನುಮಾನ ವ್ಯಕ್ತಪಡಿಸಿದೆ. ಯಾಕಂದ್ರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಭೇಟಿ ವೇಳೆಯೇ ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಕದಡಲು ಕೆಲವರು ಪ್ರಯತ್ನಿಸ್ತಿದ್ದಾರೆ ಅಂತಾ ಗಂಭೀರ ಆರೋಪ ಮಾಡಿದೆ. ಟ್ರಂಪ್ ಭೇಟಿ ವೇಳೆ ಗಲಭೆ ಎಬ್ಬಿಸಿದ್ರೆ, ಸಿಎಎ ವಿರೋಧಿ ಅಲೆ ಎಷ್ಟರ ಮಟ್ಟಿಗಿದೆ ಅಂತಾ ಬಿಂಬಿಸಲು ಸಾಧ್ಯವಾಗುತ್ತದೆ ಅನ್ನೋ ಕಾರಣಕ್ಕೆ ಪ್ರತಿಭಟನೆಯನ್ನ ಹಿಂಸಾಚಾರಕ್ಕೆ ತಿರುಗಿಸಲಾಗಿದೆ ಅಂತಾ ಕೇಂದ್ರ ಸರ್ಕಾರದ ಉನ್ನತ ಮೂಲಗಳು ಹೇಳಿವೆ.

ಒಟ್ನಲ್ಲಿ ವಿಶ್ವದ ದೊಡ್ಡಣ್ಣ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿ ವೇಳೆ ದೆಹಲಿಯಲ್ಲಿ ಶಾಂತಿ ಕದಡಲು ಯತ್ನಿಸಿ, ಭಾರತಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಗಳು ನಡೆದಿವೆ. ಮಂಗಳವಾರ ಪೊಲೀಸರು ಪರಿಸ್ಥಿತಿಯನ್ನು ಹೇಗೆ ನಿಯಂತ್ರಿಸ್ತಾರೆ ಅನ್ನೋದ್ರ ಮೇಲೆ ಮತ್ತೆ ಕಲ್ಲು ತೂರಾಟ ನಡೆಯುತ್ತಾ ಇಲ್ವಾ ಅನ್ನೋ ನಿರ್ಧಾರವಾಗಲಿದೆ.

Published On - 7:22 am, Tue, 25 February 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ