ಕರ್ನಾಟಕಕ್ಕೆ ಗುಡ್ ನ್ಯೂಸ್; 6,405 ಕೋಟಿ ಮೌಲ್ಯದ 2 ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ

7 ಜಿಲ್ಲೆಗಳನ್ನು ಒಳಗೊಂಡ ಎರಡು ಬಹುಪಥ ರೈಲ್ವೆ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಜಾರ್ಖಂಡ್, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ 6,405 ಕೋಟಿ ರೂ. ಮೌಲ್ಯದ 2 ರೈಲ್ವೆ ಯೋಜನೆಗಳಿಗೆ ಸಂಪುಟ ಒಪ್ಪಿಗೆ ನೀಡಿದೆ. ಈ ಉಪಕ್ರಮಗಳು ಪ್ರಯಾಣ ಅನುಕೂಲತೆಯನ್ನು ಸುಧಾರಿಸುತ್ತದೆ, ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆ ಮಾಡುತ್ತದೆ, ತೈಲ ಆಮದುಗಳನ್ನು ಕಡಿಮೆ ಮಾಡುತ್ತದೆ ಮತ್ತು ಕಡಿಮೆ CO2 ಹೊರಸೂಸುವಿಕೆಗೆ ಕೊಡುಗೆ ನೀಡುತ್ತದೆ.

ಕರ್ನಾಟಕಕ್ಕೆ ಗುಡ್ ನ್ಯೂಸ್; 6,405 ಕೋಟಿ ಮೌಲ್ಯದ 2 ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ
Minister Ashwini Vaishnaw

Updated on: Jun 11, 2025 | 4:35 PM

ನವದೆಹಲಿ, ಜೂನ್ 11: ಕೇಂದ್ರ ಸಚಿವ ಸಂಪುಟ ಕರ್ನಾಟಕ, ಆಂಧ್ರಪ್ರದೇಶ, ಜಾರ್ಖಂಡ್ ರಾಜ್ಯಗಳಲ್ಲಿ 2 ಬೃಹತ್ ರೈಲ್ವೆ ಯೋಜನೆಗಳಿಗೆ (Railway Projects) ಅನುಮೋದನೆ ನೀಡಿದೆ. ಜಾರ್ಖಂಡ್‌ನಲ್ಲಿ ಕೊಡೆರ್ಮಾ-ಬರ್ಕಕಾನ ಡಬಲಿಂಗ್  ಮತ್ತು ಕರ್ನಾಟಕ, ಆಂಧ್ರಪ್ರದೇಶದಲ್ಲಿ ಬಳ್ಳಾರಿ-ಚಿಕ್ಜಾಜೂರ್ ಡಬಲಿಂಗ್ ಗೆ ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಒಟ್ಟು 6,405 ಕೋಟಿ ರೂ.ಗಳಲ್ಲಿ 318 ಕಿ.ಮೀ. ಉದ್ದದ ರೈಲ್ವೆ ಯೋಜನೆಗಳಿಗೆ ಒಪ್ಪಿಗೆ ನೀಡಲಾಯಿತು. ಸರಕು ಸಾಗಣೆಯನ್ನು ಹೆಚ್ಚಿಸುವುದು, ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವುದು ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಸುಧಾರಿಸುವುದು ಈ ಯೋಜನೆಗಳ ಗುರಿಯಾಗಿದೆ. 3 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ಅವು ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುತ್ತವೆ ಮತ್ತು ಆರ್ಥಿಕ ಬೆಳವಣಿಗೆಗೆ ಬೆಂಬಲ ನೀಡುತ್ತವೆ.

7 ಜಿಲ್ಲೆಗಳನ್ನು ಒಳಗೊಂಡ 2 ಬಹುಪಥ ರೈಲ್ವೆ ಯೋಜನೆಗಳಿಗೆ ಇಂದು ಸಂಪುಟ ಅನುಮೋದನೆ ನೀಡಿತು. ಅಂದಾಜು ರೂ. 6,405 ಕೋಟಿ ವೆಚ್ಚದಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದೆ. ಈ ಉಪಕ್ರಮಗಳು ಪ್ರಯಾಣ ಅನುಕೂಲತೆಯನ್ನು ಸುಧಾರಿಸುತ್ತದೆ, ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆ ಮಾಡುತ್ತದೆ, ತೈಲ ಆಮದುಗಳನ್ನು ಕಡಿಮೆ ಮಾಡುತ್ತದೆ ಮತ್ತು ಕಡಿಮೆ CO2 ಹೊರಸೂಸುವಿಕೆಗೆ ಕೊಡುಗೆ ನೀಡುತ್ತದೆ, ಸುಸ್ಥಿರ ಮತ್ತು ಪರಿಣಾಮಕಾರಿ ರೈಲು ಕಾರ್ಯಾಚರಣೆಗಳನ್ನು ಬೆಂಬಲಿಸುತ್ತದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ
ವಿದೇಶಕ್ಕೆ ತೆರಳಿದ್ದ ವಿವಿಧ ಪಕ್ಷಗಳ ನಾಯಕರ ಜೊತೆ ಪ್ರಧಾನಿ ಮೋದಿ ಔತಣಕೂಟ
ನಾವು ಪಾಕಿಸ್ತಾನದೊಳಗೆ ದಾಳಿ ಮಾಡಲು ಹಿಂಜರಿಯುವುದಿಲ್ಲ; ಜೈಶಂಕರ್ ಎಚ್ಚರಿಕೆ
ಆ ಒಂದೇ ಒಂದು ತಪ್ಪಿನಿಂದ ಸಿಕ್ಕಿಬಿದ್ದ ರಾಜಾ ರಘುವಂಶಿ ಪತ್ನಿ ಸೋನಂ
ಲೋಕಸಭೆಗೆ ಉಪಸಭಾಪತಿ ಆಯ್ಕೆ ಮಾಡುವಂತೆ ಪ್ರಧಾನಿ ಮೋದಿಗೆ ಖರ್ಗೆ ಪತ್ರ

ಇದನ್ನೂ ಓದಿ: ವರದಕ್ಷಿಣೆಯಾಗಿ ಸೊಸೆಯ ಕಿಡ್ನಿಯನ್ನೇ ಕೇಳಿದ ಮಾವ!

ಈ ಯೋಜನೆಗಳು ಜಾರ್ಖಂಡ್, ಕರ್ನಾಟಕ ಮತ್ತು ಆಂಧ್ರಪ್ರದೇಶದ 7 ಜಿಲ್ಲೆಗಳನ್ನು ಒಳಗೊಂಡಿರುತ್ತವೆ ಮತ್ತು ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 318 ಕಿ.ಮೀ. ಹೆಚ್ಚಿಸುತ್ತವೆ ಎಂದು ಸಚಿವರು ಹೇಳಿದ್ದಾರೆ.


ಸಂಪುಟ ಅನುಮೋದಿಸಿದ ಎರಡು ಯೋಜನೆಗಳು:

1. ಕೊಡೆರ್ಮಾ – ಬರ್ಕಕಾನಾ ದ್ವಿಗುಣಗೊಳಿಸುವಿಕೆ (133 ಕಿ.ಮೀ) – ಯೋಜನಾ ವಿಭಾಗವು ಜಾರ್ಖಂಡ್‌ನ ಪ್ರಮುಖ ಕಲ್ಲಿದ್ದಲು ಉತ್ಪಾದಿಸುವ ಪ್ರದೇಶದ ಮೂಲಕ ಹಾದುಹೋಗುತ್ತದೆ. ಇದಲ್ಲದೆ, ಇದು ಪಾಟ್ನಾ ಮತ್ತು ರಾಂಚಿ ನಡುವಿನ ಪರಿಣಾಮಕಾರಿ ರೈಲು ಸಂಪರ್ಕವಾಗಿ ಕಾರ್ಯನಿರ್ವಹಿಸುತ್ತದೆ.

2. ಬಳ್ಳಾರಿ – ಚಿಕ್ಕಜಾಜೂರ್ ದ್ವಿಮುಖ ಮಾರ್ಗ (185 ಕಿ.ಮೀ.) – ಈ ಯೋಜನೆಯ ಮಾರ್ಗವು ಕರ್ನಾಟಕದ ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳು ಮತ್ತು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಮೂಲಕ ಹಾದುಹೋಗುತ್ತದೆ. ಅಂದಾಜು 3,342 ಕೋಟಿ ರೂ. ವೆಚ್ಚದಲ್ಲಿ ಇದನ್ನು ಅಭಿವೃದ್ಧಿಪಡಿಸಲಾಗುವುದು. ಈ ಮಾರ್ಗವು ಮಂಗಳೂರು ಬಂದರನ್ನು ಸಿಕಂದರಾಬಾದ್‌ಗೆ ಸಂಪರ್ಕಿಸುತ್ತದೆ ಮತ್ತು ಕಬ್ಬಿಣದ ಅದಿರು, ಕೋಕಿಂಗ್ ಕಲ್ಲಿದ್ದಲು, ಉಕ್ಕು, ರಸಗೊಬ್ಬರಗಳು, ಪೆಟ್ರೋಲಿಯಂ ಉತ್ಪನ್ನಗಳು ಮತ್ತು ಆಹಾರ ಧಾನ್ಯಗಳಂತಹ ಪ್ರಮುಖ ಸರಕುಗಳನ್ನು ಸಾಗಿಸಲು ನಿರ್ಣಾಯಕವಾಗಿದೆ.

ಇದನ್ನೂ ಓದಿ: Gali Janardhana Reddy: ಗಾಲಿ ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು

ಇದು ಕರ್ನಾಟಕದ ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳು ಮತ್ತು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಸಂಪರ್ಕವನ್ನು ಹೆಚ್ಚಿಸುತ್ತದೆ. 19 ನಿಲ್ದಾಣಗಳು, 29 ಪ್ರಮುಖ ಸೇತುವೆಗಳು, 230 ಸಣ್ಣ ಸೇತುವೆಗಳು, 21 ROBಗಳು ಮತ್ತು 85 RUBಗಳೊಂದಿಗೆ ಈ ಮಾರ್ಗವು ಸರಕು ಸಾಗಣೆಯನ್ನು ಬೆಂಬಲಿಸಲು ಆಧುನೀಕೃತ ಮೂಲಸೌಕರ್ಯವನ್ನು ನೀಡುತ್ತದೆ. ಬಳ್ಳಾರಿ-ಚಿಕ್ಜಾಜೂರ್ ದ್ವಿಗುಣಗೊಳಿಸುವಿಕೆಯು 470 ಹಳ್ಳಿಗಳ ಸುಮಾರು 13 ಲಕ್ಷ ಜನರಿಗೆ ಪ್ರಯೋಜನವನ್ನು ನೀಡುವ ಸಾಧ್ಯತೆಯಿದೆ ಮತ್ತು ವಾರ್ಷಿಕವಾಗಿ 18.9 ಮಿಲಿಯನ್ ಟನ್ ಸರಕು ಸಾಗಣೆಗೆ ಅನುಕೂಲವಾಗಲಿದೆ.

ಅನುಮೋದಿತ ಮಲ್ಟಿ-ಟ್ರ್ಯಾಕಿಂಗ್ ಯೋಜನೆಯು ಸುಮಾರು 28.19 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಸುಮಾರು 1,408 ಹಳ್ಳಿಗಳಿಗೆ ಸಂಪರ್ಕವನ್ನು ಹೆಚ್ಚಿಸುತ್ತದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:32 pm, Wed, 11 June 25