AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆಗೆ ಸಂಪುಟ ಸಮ್ಮತಿ

ದೆಹಲಿ: ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆಯೊಂದನ್ನು ಸ್ಥಾಪಿಸಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಯುವಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸುವ ಫಲಿತಾಂಶವು ಮೂರು ವರ್ಷಗಳ ಕಾಲ ಮಾನ್ಯವಿರಲಿದೆ. ಜೊತೆಗೆ, ಈ ಅವಧಿಯಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ […]

ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆಗೆ ಸಂಪುಟ ಸಮ್ಮತಿ
KUSHAL V
|

Updated on: Aug 19, 2020 | 5:00 PM

Share

ದೆಹಲಿ: ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆಯೊಂದನ್ನು ಸ್ಥಾಪಿಸಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಯುವಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸುವ ಫಲಿತಾಂಶವು ಮೂರು ವರ್ಷಗಳ ಕಾಲ ಮಾನ್ಯವಿರಲಿದೆ. ಜೊತೆಗೆ, ಈ ಅವಧಿಯಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆದು ಉತ್ತಮ ಅಂಕಗಳನ್ನು ಪಡೆಯುವ ಅವಕಾಶವನ್ನೂ ಸಹ ಕಲ್ಪಿಸಲಾಗಿದೆ.

ಸದ್ಯ, ಸ್ಥಾಪನೆಯಾಗಲಿರುವ ಸಂಸ್ಥೆಯು ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಪರೀಕ್ಷೆ ನಡೆಸಲಿದ್ದು ಮುಂಬರುವ ದಿನಗಳಲ್ಲಿ ಇತರೆ ಸರ್ಕಾರಿ ಸಂಸ್ಥೆಗಳ ನೇಮಕಾತಿ ಪರೀಕ್ಷೆಯ ಜವಾಬ್ದಾರಿಯನ್ನ ಸಹ ವಹಿಸಲಿದೆ ಎಂದು ಜಾವಡೇಕರ್​ ತಿಳಿಸಿದರು.

ನೂತನ ಸಂಸ್ಥೆಯ ಕೆಳಗೆ ನಡೆಸಲಾಗುವ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ 12 ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಅವಕಾಶ ಸಹ ಕಲ್ಪಿಸಲಾಗಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು