AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆಗೆ ಸಂಪುಟ ಸಮ್ಮತಿ

ದೆಹಲಿ: ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆಯೊಂದನ್ನು ಸ್ಥಾಪಿಸಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಯುವಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ. ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸುವ ಫಲಿತಾಂಶವು ಮೂರು ವರ್ಷಗಳ ಕಾಲ ಮಾನ್ಯವಿರಲಿದೆ. ಜೊತೆಗೆ, ಈ ಅವಧಿಯಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ […]

ರಾಷ್ಟ್ರೀಯ ನೇಮಕಾತಿ ಏಜೆನ್ಸಿ ಸ್ಥಾಪನೆಗೆ ಸಂಪುಟ ಸಮ್ಮತಿ
KUSHAL V
|

Updated on: Aug 19, 2020 | 5:00 PM

Share

ದೆಹಲಿ: ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸಲು ರಾಷ್ಟ್ರೀಯ ನೇಮಕಾತಿ ಸಂಸ್ಥೆಯೊಂದನ್ನು ಸ್ಥಾಪಿಸಲು ಕೇಂದ್ರ ಸಂಪುಟ ಅಸ್ತು ಎಂದಿದೆ. ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​ ಸರ್ಕಾರ ಕೈಗೊಂಡಿರುವ ಈ ನಿರ್ಧಾರ ಯುವಕರಿಗೆ ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಪರೀಕ್ಷೆಯಲ್ಲಿ ಅಭ್ಯರ್ಥಿ ಗಳಿಸುವ ಫಲಿತಾಂಶವು ಮೂರು ವರ್ಷಗಳ ಕಾಲ ಮಾನ್ಯವಿರಲಿದೆ. ಜೊತೆಗೆ, ಈ ಅವಧಿಯಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆದು ಉತ್ತಮ ಅಂಕಗಳನ್ನು ಪಡೆಯುವ ಅವಕಾಶವನ್ನೂ ಸಹ ಕಲ್ಪಿಸಲಾಗಿದೆ.

ಸದ್ಯ, ಸ್ಥಾಪನೆಯಾಗಲಿರುವ ಸಂಸ್ಥೆಯು ರೇಲ್ವೇ ಇಲಾಖೆ, ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಹಾಗೂ SSC ಅಡಿಯಲ್ಲಿ ನಡೆಯುವ ನೇಮಕಾತಿಗೆ ಪರೀಕ್ಷೆ ನಡೆಸಲಿದ್ದು ಮುಂಬರುವ ದಿನಗಳಲ್ಲಿ ಇತರೆ ಸರ್ಕಾರಿ ಸಂಸ್ಥೆಗಳ ನೇಮಕಾತಿ ಪರೀಕ್ಷೆಯ ಜವಾಬ್ದಾರಿಯನ್ನ ಸಹ ವಹಿಸಲಿದೆ ಎಂದು ಜಾವಡೇಕರ್​ ತಿಳಿಸಿದರು.

ನೂತನ ಸಂಸ್ಥೆಯ ಕೆಳಗೆ ನಡೆಸಲಾಗುವ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ 12 ಭಾಷೆಗಳಲ್ಲಿ ಪರೀಕ್ಷೆ ಬರೆಯುವ ಅವಕಾಶ ಸಹ ಕಲ್ಪಿಸಲಾಗಿದೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ