AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಿಣಿಯರ ಸಂಬಳದ ಬಗ್ಗೆ ಲೆಕ್ಕ ಹಾಕುವಾಗ ಅವರ ದುಡಿಮೆ, ತ್ಯಾಗವನ್ನು ಪರಿಗಣಿಸಿ: ಸುಪ್ರೀಂಕೋರ್ಟ್

ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರು ಸಮಯ ಮತ್ತು ಶ್ರಮವನ್ನು ಮನೆಕೆಲಸಕ್ಕೆ ಮೀಸಲಾಗಿಡುತ್ತಾರೆ. ಗೃಹಿಣಿಯರ ಚಟುವಟಿಕೆಗಳನ್ನು ಪರಿಗಣಿಸಿದಾಗ ಇದೇನು ಅಚ್ಚರಿ ಹುಟ್ಟಿಸುವುದಿಲ್ಲ. ಅವರಿಗೆ ನೀಡುವ ಸಂಬಳವು ಕೆಲಸ, ದುಡಿವೆ ಮತ್ತು ತಾಗ್ಯವನ್ನು ಆಧರಿಸಿರಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಗೃಹಿಣಿಯರ ಸಂಬಳದ ಬಗ್ಗೆ ಲೆಕ್ಕ ಹಾಕುವಾಗ ಅವರ ದುಡಿಮೆ, ತ್ಯಾಗವನ್ನು ಪರಿಗಣಿಸಿ: ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 06, 2021 | 8:45 PM

ನವದೆಹಲಿ: ಗೃಹಿಣಿಯರಿಗೆ ನೀಡುವ ಸಂಬಳವು ಅವರ ಕೆಲಸ, ದುಡಿಮೆ ಮತ್ತು ತಾಗ್ಯವನ್ನು ಆಧರಿಸಿರಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ಇದು ನಮ್ಮ ರಾಷ್ಟ್ರದಲ್ಲಿನ ಅಂತರರಾಷ್ಟ್ರೀಯ ಕಾನೂನು ಕಟ್ಟುಪಾಡುಗಳು, ಸಾಮಾಜಿಕ ಸಮಾನತೆಯ ಬಗ್ಗೆ ಸಾಂವಿಧಾನಿಕ ದೃಷ್ಟಿಕೋನ ಮತ್ತು ಎಲ್ಲರಿಗೂ ಘನತೆಯನ್ನು ಖಾತರಿಪಡಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿ ಎನ್.ವಿ.ರಮಣ, ಎಸ್.ಅಬ್ದುಲ್ ನಜೀರ್ ಮತ್ತು ಸೂರ್ಯಕಾಂತ್ ಅವರ ನ್ಯಾಯಪೀಠವು ವಿಮಾ ಪರಿಹಾರ ಪ್ರಕರಣವೊಂದರ ತೀರ್ಪು ಪ್ರಕಟಿಸಿ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಪುರುಷರಿಗಿಂತ ಹೆಚ್ಚಾಗಿ ಮಹಿಳೆಯರು ಸಮಯ ಮತ್ತು ಶ್ರಮವನ್ನು ಮನೆಕೆಲಸಕ್ಕೆ ಮೀಸಲಾಗಿಡುತ್ತಾರೆ. ಗೃಹಿಣಿಯರ ಚಟುವಟಿಕೆಗಳನ್ನು ಪರಿಗಣಿಸಿದಾಗ ಇದೇನು ಅಚ್ಚರಿ ಹುಟ್ಟಿಸುವುದಿಲ್ಲ. ಗೃಹಿಣಿ ಸಾಮಾನ್ಯವಾಗಿ ಇಡೀ ಕುಟುಂಬಕ್ಕೆ ಆಹಾರವನ್ನು ಸಿದ್ಧಪಡಿಸುತ್ತಾಳೆ. ದಿನಸಿ ಮತ್ತು ಇತರ ಮನೆಯ ಶಾಪಿಂಗ್ ಅಗತ್ಯಗಳನ್ನು ನಿರ್ವಹಿಸುತ್ತಾಳೆ. ಮನೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸುತ್ತಾಳೆ. ಅಲಂಕಾರ, ರಿಪೇರಿ ಮತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಾಳೆ ಮಕ್ಕಳ ಮತ್ತು ಮನೆಯ ಯಾವುದೇ ವಯಸ್ಸಾದ ಸದಸ್ಯರ ಅಗತ್ಯತೆಗಳನ್ನು ನೋಡಿಕೊಳ್ಳುತ್ತಾಳೆ. ಬಜೆಟ್ ನಿರ್ವಹಣೆ ಜತೆ ಮತ್ತಷ್ಟು ಕೆಲಸಗಳನ್ನು ಮಾಡುತ್ತಾಳೆ ಎಂದು ನ್ಯಾಯವಾದಿ ರಮಣ ಅಭಿಪ್ರಾಯಪಟ್ಟಿದ್ದಾರೆ.

ಗೃಹಿಣಿಯರಿಗೆ ಕಲ್ಪನಾತ್ಮಕ ಆದಾಯವನ್ನು ನಿಗದಿಪಡಿಸುವ ವಿಷಯವು ಅತ್ಯಂತ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ. ಆಯ್ಕೆಯಿಂದ ಅಥವಾ ಸಾಮಾಜಿಕ / ಸಾಂಸ್ಕೃತಿ ನೀತಿಗಳ ಪರಿಣಾಮವಾಗಿ ಈ ಚಟುವಟಿಕೆಯಲ್ಲಿ ತೊಡಗಿರುವ ಮಹಿಳೆಯರಿಗೆ ಸಿಗುವ ಗೌರವಾಗಿದೆ ಇದು. ಕಾನೂನು ಮತ್ತು ನೆಲದ ಕಾನೂನು ಗೃಹಿಣಿಯರ ಶ್ರಮ, ಸೇವೆಗಳು ಮತ್ತು ತ್ಯಾಗದ ಮೌಲ್ಯವನ್ನು ನಂಬುತ್ತದೆ ಎಂಬುದನ್ನು ಇದು ಸಮಾಜಕ್ಕೆ ದೊಡ್ಡ ಪ್ರಮಾಣದಲ್ಲಿ ತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.

2014ರಲ್ಲಿ ಅಪಘಾತದಲ್ಲಿ ದಂಪತಿಗಳ ಸಾವಿಗೆ ಸಂಬಂಧಿಸಿದ ಪ್ರಕರಣವನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿರುವ ವೇಳೆ ಈ ವಿಷಯ ಪ್ರಸ್ತಾಪವಾಗಿದೆ. ಈ ಪ್ರಕರಣದಲ್ಲಿ ಕುಟುಂಬಕ್ಕೆ ವಿಮಾ ಕಂಪನಿ ₹ 40.71 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧಿಕರಣ ಆದೇಶಿಸಿತ್ತು. ಆದರೆ ಮೇಲ್ಮನವಿ ಆಲಿಸಿದ ದೆಹಲಿ ನ್ಯಾಯಾಲಯವು ಪರಿಹಾರ ಮೊತ್ತವನ್ನು 22 ಲಕ್ಷಕ್ಕೆ ಇಳಿಸಿತ್ತು. ವಿಮಾ ಕಂಪನಿಯು ಸಂತ್ರಸ್ತ ಕುಟುಂಬಕ್ಕೆ 2014ರಿಂದ ಶೇಕಡಾ 9ರಷ್ಟು ಬಡ್ಡಿ ಜತೆ ₹ 33.20 ಲಕ್ಷ ನೀಡುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದ್ದು, 2 ತಿಂಗಳೊಳಗೆ ನೀಡಬೇಕು ಎಂದು ಆದೇಶಿಸಿದೆ.

ಅಂದಾಜಿನಲ್ಲಿ ಆದಾಯವನ್ನು ನಿಗದಿಪಡಿಸುವಾಗ ನಿರ್ದಿಷ್ಟ ಪ್ರಕರಣದ ಸಂಗತಿಗಳು ಮತ್ತು ಸನ್ನಿವೇಶಗಳಲ್ಲಿ ಮಾತ್ರ ಇದನ್ನು ನೀಡಲಾಗುವುದು ಎಂದು ಎಂದು ಖಚಿತಪಡಿಸಿಕೊಳ್ಳಬೇಕು. ಪರಿಹಾರವನ್ನು ತುಂಬಾ ಸಂಪ್ರದಾಯಬದ್ಧವಾಗಿ ಅಥವಾ ತುಂಬಾ ಉದಾರವಾಗಿ ನಿರ್ಣಯಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಬರೆದಿದೆ.

ಗೃಹಿಣಿಯರಿಗೆ ಸಂಬಳ: ಕಮಲ್ ಹಾಸನ್, ಶಶಿ ತರೂರ್ ಯೋಚನೆಗೆ ಕಂಗನಾ ವಿರೋಧ

ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ