AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ; ಸುವೇಂದು ಅಧಿಕಾರಿಗೆ ಕೋಲ್ಕತ್ತ ಹೈಕೋರ್ಟ್​ನಿಂದ ನೋಟಿಸ್​

ನಂದಿಗ್ರಾಮದಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರಿ ವಿರುದ್ಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಪ್ರಕರಣ ವಿಚಾರಣೆಯನ್ನು ನ್ಯಾಯಮೂರ್ತಿ ಕೌಶಿಕ್​ ಚಂದಾ ಕೈಗೆತ್ತಿಕೊಂಡಿದ್ದರು.

ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ; ಸುವೇಂದು ಅಧಿಕಾರಿಗೆ ಕೋಲ್ಕತ್ತ ಹೈಕೋರ್ಟ್​ನಿಂದ ನೋಟಿಸ್​
ಸುವೇಂದು ಅಧಿಕಾರಿ
TV9 Web
| Edited By: |

Updated on: Jul 14, 2021 | 4:26 PM

Share

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುವೇಂದು ಅಧಿಕಾರಿ ಗೆಲುವನ್ನು ಪ್ರಶ್ನಿಸಿ ಸಿಎಂ ಮಮತಾ ಬ್ಯಾನರ್ಜಿ ಕೋಲ್ಕತ್ತ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಶಂಪಾ ಸರ್ಕಾರ್​ ಇದೀಗ ಸುವೇಂದು ಅಧಿಕಾರಿಗೆ ನೋಟಿಸ್​ ನೀಡಿದ್ದಾರೆ. ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ, ಚುನಾವಣೆಗೆ ಸಂಬಂಧಪಟ್ಟ ಎಲ್ಲ ದಾಖಲೆಗಳು, ಪೇಪರ್​ಗಳು, ಡಿವೈಸ್​, ವಿಡಿಯೋ ರೆಕಾರ್ಡಿಂಗ್​ಗಳನ್ನೆಲ್ಲ ಸಂಬಂಧಪಟ್ಟ ಆಡಳಿತ ಸಂರಕ್ಷಿಸಬೇಕು ಎಂದೂ ನಿರ್ದೇಶನ ನೀಡಿದ್ದಾರೆ.

ಜನರ ಪ್ರತಿನಿಧಿ ಕಾಯ್ದೆ, 1951 ರ ಸೆಕ್ಷನ್ 86 (1) ರಡಿ ಸಲ್ಲಿಸಲಾದ ಈ ಚುನಾವಣಾ ಅರ್ಜಿಯಲ್ಲಿ ದೋಷವಿಲ್ಲ. ಈ ಕೋರ್ಟ್​​ನಿಂದ ರಚಿತವಾದ ಚುನಾವಣಾ ಅರ್ಜಿ ನಿಯಮದ 24ನೇ ನಿಯಮದಡಿ ಒಂದು ನೋಟಿಸ್​ ನೀಡೋಣ. ಮತ್ತೆ ಆಗಸ್ಟ್​ 12ರಂದು ವಿಚಾರಣೆ ನಡೆಸಲಾಗವುದು ಎಂದು ಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಯವರ ಪರ ಹಿರಿಯ ನ್ಯಾಯವಾದಿ ಸೋಮೇಂದ್ರನಾಥ್​ ಮುಖರ್ಜಿ ವಾದಮಂಡಿಸಿದ್ದಾರೆ.

ನಂದಿಗ್ರಾಮದಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರಿ ವಿರುದ್ಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಪ್ರಕರಣ ವಿಚಾರಣೆಯನ್ನು ನ್ಯಾಯಮೂರ್ತಿ ಕೌಶಿಕ್​ ಚಂದಾ ಕೈಗೆತ್ತಿಕೊಂಡಿದ್ದರು. ಆದರೆ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ನಂತರ ಪ್ರಕರಣದ ವಿಚಾರಣೆ ನಡೆಸುವ ನ್ಯಾಯಾಧೀಶರನ್ನು ಬದಲಿಸಬೇಕು ಎಂದು ಮಮತಾ ಬ್ಯಾನರ್ಜಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಹಾಸನ: ಮೂಲ ಯೋಜನೆಗೆ ವಿರುದ್ಧವಾಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯತ್ನ; ಹೆಚ್ ಡಿ ರೇವಣ್ಣ ಆಕ್ರೋಶ

Calcutta High Court Issues Notice To Suvendu Adhikari in the Mamata Banerjee’s Election Petition Case

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ