AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ; ಸುವೇಂದು ಅಧಿಕಾರಿಗೆ ಕೋಲ್ಕತ್ತ ಹೈಕೋರ್ಟ್​ನಿಂದ ನೋಟಿಸ್​

ನಂದಿಗ್ರಾಮದಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರಿ ವಿರುದ್ಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಪ್ರಕರಣ ವಿಚಾರಣೆಯನ್ನು ನ್ಯಾಯಮೂರ್ತಿ ಕೌಶಿಕ್​ ಚಂದಾ ಕೈಗೆತ್ತಿಕೊಂಡಿದ್ದರು.

ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ; ಸುವೇಂದು ಅಧಿಕಾರಿಗೆ ಕೋಲ್ಕತ್ತ ಹೈಕೋರ್ಟ್​ನಿಂದ ನೋಟಿಸ್​
ಸುವೇಂದು ಅಧಿಕಾರಿ
TV9 Web
| Edited By: |

Updated on: Jul 14, 2021 | 4:26 PM

Share

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುವೇಂದು ಅಧಿಕಾರಿ ಗೆಲುವನ್ನು ಪ್ರಶ್ನಿಸಿ ಸಿಎಂ ಮಮತಾ ಬ್ಯಾನರ್ಜಿ ಕೋಲ್ಕತ್ತ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಶಂಪಾ ಸರ್ಕಾರ್​ ಇದೀಗ ಸುವೇಂದು ಅಧಿಕಾರಿಗೆ ನೋಟಿಸ್​ ನೀಡಿದ್ದಾರೆ. ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ, ಚುನಾವಣೆಗೆ ಸಂಬಂಧಪಟ್ಟ ಎಲ್ಲ ದಾಖಲೆಗಳು, ಪೇಪರ್​ಗಳು, ಡಿವೈಸ್​, ವಿಡಿಯೋ ರೆಕಾರ್ಡಿಂಗ್​ಗಳನ್ನೆಲ್ಲ ಸಂಬಂಧಪಟ್ಟ ಆಡಳಿತ ಸಂರಕ್ಷಿಸಬೇಕು ಎಂದೂ ನಿರ್ದೇಶನ ನೀಡಿದ್ದಾರೆ.

ಜನರ ಪ್ರತಿನಿಧಿ ಕಾಯ್ದೆ, 1951 ರ ಸೆಕ್ಷನ್ 86 (1) ರಡಿ ಸಲ್ಲಿಸಲಾದ ಈ ಚುನಾವಣಾ ಅರ್ಜಿಯಲ್ಲಿ ದೋಷವಿಲ್ಲ. ಈ ಕೋರ್ಟ್​​ನಿಂದ ರಚಿತವಾದ ಚುನಾವಣಾ ಅರ್ಜಿ ನಿಯಮದ 24ನೇ ನಿಯಮದಡಿ ಒಂದು ನೋಟಿಸ್​ ನೀಡೋಣ. ಮತ್ತೆ ಆಗಸ್ಟ್​ 12ರಂದು ವಿಚಾರಣೆ ನಡೆಸಲಾಗವುದು ಎಂದು ಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಯವರ ಪರ ಹಿರಿಯ ನ್ಯಾಯವಾದಿ ಸೋಮೇಂದ್ರನಾಥ್​ ಮುಖರ್ಜಿ ವಾದಮಂಡಿಸಿದ್ದಾರೆ.

ನಂದಿಗ್ರಾಮದಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರಿ ವಿರುದ್ಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಪ್ರಕರಣ ವಿಚಾರಣೆಯನ್ನು ನ್ಯಾಯಮೂರ್ತಿ ಕೌಶಿಕ್​ ಚಂದಾ ಕೈಗೆತ್ತಿಕೊಂಡಿದ್ದರು. ಆದರೆ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ನಂತರ ಪ್ರಕರಣದ ವಿಚಾರಣೆ ನಡೆಸುವ ನ್ಯಾಯಾಧೀಶರನ್ನು ಬದಲಿಸಬೇಕು ಎಂದು ಮಮತಾ ಬ್ಯಾನರ್ಜಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಹಾಸನ: ಮೂಲ ಯೋಜನೆಗೆ ವಿರುದ್ಧವಾಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯತ್ನ; ಹೆಚ್ ಡಿ ರೇವಣ್ಣ ಆಕ್ರೋಶ

Calcutta High Court Issues Notice To Suvendu Adhikari in the Mamata Banerjee’s Election Petition Case

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ