ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ; ಸುವೇಂದು ಅಧಿಕಾರಿಗೆ ಕೋಲ್ಕತ್ತ ಹೈಕೋರ್ಟ್​ನಿಂದ ನೋಟಿಸ್​

| Updated By: Lakshmi Hegde

Updated on: Jul 14, 2021 | 4:26 PM

ನಂದಿಗ್ರಾಮದಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರಿ ವಿರುದ್ಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಪ್ರಕರಣ ವಿಚಾರಣೆಯನ್ನು ನ್ಯಾಯಮೂರ್ತಿ ಕೌಶಿಕ್​ ಚಂದಾ ಕೈಗೆತ್ತಿಕೊಂಡಿದ್ದರು.

ಮಮತಾ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿ ವಿಚಾರಣೆ; ಸುವೇಂದು ಅಧಿಕಾರಿಗೆ ಕೋಲ್ಕತ್ತ ಹೈಕೋರ್ಟ್​ನಿಂದ ನೋಟಿಸ್​
ಸುವೇಂದು ಅಧಿಕಾರಿ
Follow us on

ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುವೇಂದು ಅಧಿಕಾರಿ ಗೆಲುವನ್ನು ಪ್ರಶ್ನಿಸಿ ಸಿಎಂ ಮಮತಾ ಬ್ಯಾನರ್ಜಿ ಕೋಲ್ಕತ್ತ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ನ್ಯಾಯಮೂರ್ತಿ ಶಂಪಾ ಸರ್ಕಾರ್​ ಇದೀಗ ಸುವೇಂದು ಅಧಿಕಾರಿಗೆ ನೋಟಿಸ್​ ನೀಡಿದ್ದಾರೆ. ಮಮತಾ ಬ್ಯಾನರ್ಜಿ ಸಲ್ಲಿಸಿರುವ ಅರ್ಜಿ ವಿಚಾರಣೆ ಬಾಕಿ ಇರುವುದರಿಂದ, ಚುನಾವಣೆಗೆ ಸಂಬಂಧಪಟ್ಟ ಎಲ್ಲ ದಾಖಲೆಗಳು, ಪೇಪರ್​ಗಳು, ಡಿವೈಸ್​, ವಿಡಿಯೋ ರೆಕಾರ್ಡಿಂಗ್​ಗಳನ್ನೆಲ್ಲ ಸಂಬಂಧಪಟ್ಟ ಆಡಳಿತ ಸಂರಕ್ಷಿಸಬೇಕು ಎಂದೂ ನಿರ್ದೇಶನ ನೀಡಿದ್ದಾರೆ.

ಜನರ ಪ್ರತಿನಿಧಿ ಕಾಯ್ದೆ, 1951 ರ ಸೆಕ್ಷನ್ 86 (1) ರಡಿ ಸಲ್ಲಿಸಲಾದ ಈ ಚುನಾವಣಾ ಅರ್ಜಿಯಲ್ಲಿ ದೋಷವಿಲ್ಲ. ಈ ಕೋರ್ಟ್​​ನಿಂದ ರಚಿತವಾದ ಚುನಾವಣಾ ಅರ್ಜಿ ನಿಯಮದ 24ನೇ ನಿಯಮದಡಿ ಒಂದು ನೋಟಿಸ್​ ನೀಡೋಣ. ಮತ್ತೆ ಆಗಸ್ಟ್​ 12ರಂದು ವಿಚಾರಣೆ ನಡೆಸಲಾಗವುದು ಎಂದು ಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಮಮತಾ ಬ್ಯಾನರ್ಜಿಯವರ ಪರ ಹಿರಿಯ ನ್ಯಾಯವಾದಿ ಸೋಮೇಂದ್ರನಾಥ್​ ಮುಖರ್ಜಿ ವಾದಮಂಡಿಸಿದ್ದಾರೆ.

ನಂದಿಗ್ರಾಮದಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಸುವೇಂದು ಅಧಿಕಾರಿ ವಿರುದ್ಧ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಪ್ರಕರಣ ವಿಚಾರಣೆಯನ್ನು ನ್ಯಾಯಮೂರ್ತಿ ಕೌಶಿಕ್​ ಚಂದಾ ಕೈಗೆತ್ತಿಕೊಂಡಿದ್ದರು. ಆದರೆ ಅವರು ಬಿಜೆಪಿ ನಾಯಕರೊಂದಿಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ನಂತರ ಪ್ರಕರಣದ ವಿಚಾರಣೆ ನಡೆಸುವ ನ್ಯಾಯಾಧೀಶರನ್ನು ಬದಲಿಸಬೇಕು ಎಂದು ಮಮತಾ ಬ್ಯಾನರ್ಜಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಹಾಸನ: ಮೂಲ ಯೋಜನೆಗೆ ವಿರುದ್ಧವಾಗಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಯತ್ನ; ಹೆಚ್ ಡಿ ರೇವಣ್ಣ ಆಕ್ರೋಶ

Calcutta High Court Issues Notice To Suvendu Adhikari in the Mamata Banerjee’s Election Petition Case