AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court : ಕೇಂದ್ರ ಸಚಿವರ ಕಾರಿನ ಮೇಲೆ ದಾಳಿ ಪ್ರಕರಣ, ಸಿಬಿಐ ತನಿಖೆಗೆ ನಿರ್ದೇಶಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ

ಕೇಂದ್ರ ಸಚಿವರ ಕಾರಿನ ಮೇಲೆ ಭಾರತ ತೃಣಮೂಲದ ಕಾರ್ಯಕರ್ತರು​​ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ನಿರ್ದೇಶಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.

Supreme Court : ಕೇಂದ್ರ ಸಚಿವರ ಕಾರಿನ ಮೇಲೆ ದಾಳಿ ಪ್ರಕರಣ, ಸಿಬಿಐ ತನಿಖೆಗೆ ನಿರ್ದೇಶಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Apr 13, 2023 | 1:34 PM

Share

ದೆಹಲಿ: ಫೆಬ್ರವರಿ 25ರಂದು ಕೇಂದ್ರ ಗೃಹ ಮತ್ತು ಯುವ ವ್ಯವಹಾರಗಳ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ (Nisith Pramanik) ಅವರ ಬೆಂಗಾವಲು ಪಡೆ ಮೇಲೆ ಅಖಿಲ ಭಾರತ ತೃಣಮೂಲದ ಕಾರ್ಯಕರ್ತರು​​ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತನಿಖೆಗೆ ನಿರ್ದೇಶಿಸಿದ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು (ಏ.13) ರದ್ದುಗೊಳಿಸಿದೆ. ಸಚಿವರ ಕಾರು ಮತ್ತು ಬೆಂಗಾವಲು ವಾಹನದ ಮೇಲಿನ ದಾಳಿ ಮತ್ತು ಇತರ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರ ತನಿಖಾ ವರದಿಯ ಕೆಲವು ಅಂಶಗಳನ್ನು ಹೈಕೋರ್ಟ್ ಪರಿಗಣಿಸಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಹೇಳಿದೆ. ಈ ಸಂಗತಿಗಳನ್ನು ಗಮನದಲ್ಲಿಟ್ಟುಕೊಂಡು, ಪ್ರಕರಣವನ್ನು ಕಲ್ಕತ್ತಾ ಹೈಕೋರ್ಟ್‌ಗೆ ಮತ್ತೆ ಹಿಂತಿರುಗಿಸಲಾಗುತ್ತದೆ, ಇದು ರಾಜ್ಯ ಪೊಲೀಸರು ಸಲ್ಲಿಸಿದ ಅಫಿಡವಿಟ್‌ಗಳನ್ನು ಪರಿಶೀಲಿಸಬೇಕು ಮತ್ತು ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒಪ್ಪಿಸುವ ಪ್ರಕರಣವೇ ಅಥವಾ ಅಲ್ಲವೇ ಎಂಬುದನ್ನು ಈ ಪ್ರಕರಣದಲ್ಲಿ ಹೊಸ ದೃಷ್ಟಿಕೋನವನ್ನು ತೆಗೆದುಕೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸುಪ್ರೀಂ ಕೋರ್ಟ್‌ನ ಈ ಆದೇಶವು ಪಶ್ಚಿಮ ಬಂಗಾಳ ಸರ್ಕಾರವು ಸಲ್ಲಿಸಿದ ಮೇಲ್ಮನವಿಗೆ ಬಂದ ಆದೇಶವಾಗಿದೆ. ಈ ಘಟನೆಯ ಕುರಿತು ಕಳೆದ ತಿಂಗಳು ಸಿಬಿಐ ತನಿಖೆಗೆ ಆದೇಶಿಸಿದ್ದ ಕಲ್ಕತ್ತಾ ಹೈಕೋರ್ಟ್‌ಗೆ ಮತ್ತೊಮ್ಮೆ ಪರಿಶೀಲನೆ ನಡೆಸುವಂತೆ ಹೇಳಿದೆ.

ಇದನ್ನೂ ಓದಿ:Nisith Pramanik: ಕೇಂದ್ರ ಸಚಿವ ನಿಸಿತ್ ಪ್ರಮಾಣಿಕ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ

ಸಚಿವರ ಮೇಲಿನ ಹಲ್ಲೆ ಪ್ರಕರಣದಲ್ಲಿ ರಾಜ್ಯ ಪೊಲೀಸರು ನ್ಯಾಯಯುತ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಫೆಬ್ರವರಿಯಲ್ಲಿ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸಿಬಿಐ ತನಿಖೆಯ ಅಗತ್ಯವಿದ್ದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶವನ್ನು ಮತ್ತೊಮ್ಮೆ ಪರಿಶೀಲನೆ ಮಾಡಲು ಹೈಕೋರ್ಟ್‌ಗೆ ಈ ಪ್ರಕರಣದ ಅರ್ಜಿಯನ್ನು ಹಿಂತಿರುಗಿಸಲಾಗಿದೆ. ಪಶ್ಚಿಮ ಬಂಗಾಳ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಗುರುವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಪ್ರಕರಣದಲ್ಲಿ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ವಿರೋಧ ಪಕ್ಷದ ನಾಯಕ ಅನಗತ್ಯ ಆತುರ ತೋರಿಸಿದ್ದಾರೆ.

ಘಟನೆ ಫೆಬ್ರವರಿ 25 ರಂದು ನಡೆದಿದ್ದು, ಫೆಬ್ರವರಿ 27 ರೊಳಗೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ಮೇಲಾಗಿ, ಹೈಕೋರ್ಟ್ ತನ್ನ ತೀರ್ಪಿನಲ್ಲಿ ಸಿಬಿಐ ತನಿಖೆಗೆ ಆದೇಶಿಸಲು ಸಮರ್ಥನೆಯಾಗಿ ಪೊಲೀಸ್ ಅಫಿಡವಿಟ್‌ನ ಆಯ್ದ ಭಾಗಗಳನ್ನು ಅವಲಂಬಿಸಿದೆ ಎಂದು ಸಿಂಘ್ವಿ ಹೇಳಿದರು.