ಅಮೆರಿಕದಲ್ಲಿ ಮೈಸೂರಿನ ಯುವಕ ಗುಂಡಿಗೆ ಬಲಿ, ಮುಗಿಲುಮುಟ್ಟಿದ ಆಕ್ರಂದನ

ಮೈಸೂರು: ಅಮೆರಿಕದಲ್ಲಿ ಅಪರಿಚಿತ ಗುಂಡಿನ ದಾಳಿಗೆ ಮೈಸೂರಿನ ಯುವಕ ಬಲಿಯಾಗಿದ್ದಾನೆ. ಮೈಸೂರಿನ ಕುವೆಂಪು ನಗರದ ಯೋಗ ಶಿಕ್ಷಕ ಸುದೇಶ್ ಎಂಬುವವರ ಪುತ್ರ 25 ವರ್ಷ ವಯಸ್ಸಿನ ಅಭಿಷೇಕ್ ಬಲಿಯಾದ ಯುವಕ. ಒಂದೂವರೆ ವರ್ಷದ ಹಿಂದೆ ಓದಲು ಎಂದು ವಿದೇಶಕ್ಕೆ ತೆರಳಿದ್ದ. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ. ಅಲ್ಲದೆ ಬಿಡುವಿನ ವೇಳೆ ಕ್ಯಾಲಿಫೋರ್ನಿಯಾ‌ ಬಳಿಯ ಸನ್ ಬೆರ್ನಾರ್ಡಿನೋ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ. ನಿನ್ನೆ ಬೆಳಗ್ಗೆ ಕೆಲಸ ಮುಗಿಸಿ ವಾಪಸಾಗುವಾಗ ಗುಂಡಿನ ದಾಳಿ ನಡೆದಿದೆ. […]

ಅಮೆರಿಕದಲ್ಲಿ ಮೈಸೂರಿನ ಯುವಕ ಗುಂಡಿಗೆ ಬಲಿ,  ಮುಗಿಲುಮುಟ್ಟಿದ ಆಕ್ರಂದನ
ಸಾಧು ಶ್ರೀನಾಥ್​

Updated on: Nov 29, 2019 | 6:54 PM

ಮೈಸೂರು: ಅಮೆರಿಕದಲ್ಲಿ ಅಪರಿಚಿತ ಗುಂಡಿನ ದಾಳಿಗೆ ಮೈಸೂರಿನ ಯುವಕ ಬಲಿಯಾಗಿದ್ದಾನೆ. ಮೈಸೂರಿನ ಕುವೆಂಪು ನಗರದ ಯೋಗ ಶಿಕ್ಷಕ ಸುದೇಶ್ ಎಂಬುವವರ ಪುತ್ರ 25 ವರ್ಷ ವಯಸ್ಸಿನ ಅಭಿಷೇಕ್ ಬಲಿಯಾದ ಯುವಕ. ಒಂದೂವರೆ ವರ್ಷದ ಹಿಂದೆ ಓದಲು ಎಂದು ವಿದೇಶಕ್ಕೆ ತೆರಳಿದ್ದ.

ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಕಂಪ್ಯೂಟರ್ ಸೈನ್ಸ್ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ. ಅಲ್ಲದೆ ಬಿಡುವಿನ ವೇಳೆ ಕ್ಯಾಲಿಫೋರ್ನಿಯಾ‌ ಬಳಿಯ ಸನ್ ಬೆರ್ನಾರ್ಡಿನೋ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ.

ನಿನ್ನೆ ಬೆಳಗ್ಗೆ ಕೆಲಸ ಮುಗಿಸಿ ವಾಪಸಾಗುವಾಗ ಗುಂಡಿನ ದಾಳಿ ನಡೆದಿದೆ. ಅಪರಿಚಿತರ ಗುಂಡಿನ ದಾಳಿಗೆ ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕ್ಯಾಲಿಫೋರ್ನಿಯಾ‌ದಿಂದ ಮೃತದೇಹ ತರಲು ಅಭಿಷೇಕ್ ಕುಟುಂಬಸ್ಥರ ಪರದಾಡುತ್ತಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Published On - 6:18 pm, Fri, 29 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us