AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ನಮ್ಮನ್ನು ನೀವು ಏನು ಬೇಕಾದರೂ ಕರೆಯಿರಿ, ಮಣಿಪುರಕ್ಕೆ ನಾವು ಸಹಾಯ ಮಾಡುತ್ತೇವೆ, ಮೋದಿಗೆ ರಾಹುಲ್ ಟಾಂಗ್​

ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವನ್ನು ಟೀಕಿಸಿದ ಮೋದಿಗೆ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಖಡಕ್ ಉತ್ತರ​​ ನೀಡಿದ್ದಾರೆ. ನಮ್ಮನ್ನು ನೀವು ಏನು ಬೇಕಾದರೂ ಕರೆಯಬಹುದು. ನಾವು ಎಂದಿಗೂ INDIA. ಮಣಿಪುರವನ್ನು ಮತ್ತೆ ಮೊದಲಿನ ಸ್ಥಿತಿಗೆ ತರವುದು ನಮ್ಮ ಗುರಿ ಎಂದು ಹೇಳಿದ್ದಾರೆ.

Rahul Gandhi: ನಮ್ಮನ್ನು ನೀವು ಏನು ಬೇಕಾದರೂ ಕರೆಯಿರಿ, ಮಣಿಪುರಕ್ಕೆ ನಾವು ಸಹಾಯ ಮಾಡುತ್ತೇವೆ, ಮೋದಿಗೆ ರಾಹುಲ್ ಟಾಂಗ್​
ರಾಹುಲ್​​ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on:Jul 25, 2023 | 3:40 PM

Share

ದೆಹಲಿ; ಪ್ರಧಾನಿ ಮೋದಿ ಇಂದು ಬಿಜೆಪಿ ಸಂಸದರ ಸಭೆಯಲ್ಲಿ ಪ್ರತಿಪಕ್ಷಗಳ “ಇಂಡಿಯಾ” ಮೈತ್ರಿಕೂಟದ ಬಗ್ಗೆ ಟೀಕಿಸಿದ್ದಾರೆ. ವಿರೋಧ ಪಕ್ಷಗಳ ಮೈತ್ರಿಕೂಟ ದೇಶದಲ್ಲಿ ದಿಕ್ಕು ತೋಚದಂತಿದೆ. ದೇಶದ ಹೆಸರಿನಲ್ಲಿ ಜನರ ದಿಕ್ಕು ತಪ್ಪಿಸಲು ಪ್ರಯತ್ನ ಮಾಡುತ್ತಿದೆ.  ಈಸ್ಟ್ ಇಂಡಿಯಾ ಕಂಪನಿ ಮತ್ತು ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಮತ್ತು ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಲ್ಲೂ ಇಂಡಿಯಾ ಇದೆ ಎಂದು ಈ ಸಭೆಯಲ್ಲಿ ಹೇಳಿದ್ದಾರೆ. ಇದೀಗ ಇದಕ್ಕೆ ರಾಹುಲ್​​ ಗಾಂಧಿ (Rahul Gandhi) ಟ್ವೀಟ್​​ ಮೂಲಕ ಟಾಂಗ್ ನೀಡಿದ್ದಾರೆ. ನಮ್ಮ ಮುಖ್ಯ ಉದ್ದೇಶ ಮಣಿಪುರದಲ್ಲಿ ಶಾಂತಿ ಕಾಪಾಡುವುದು, ಅಲ್ಲಿಯ ಜನರಿಗೆ ಸಹಾಯ ಮಾಡುವುದು ನಮ್ಮ ಮುಖ್ಯ ಗುರಿ. ಈಶಾನ್ಯ ರಾಜ್ಯದಲ್ಲಿ ಮತ್ತೆ ಭಾರತದ ಪರಿಕಲ್ಪನೆಯನ್ನು ಪುನರ್ನಿರ್ಮಿಸುತ್ತೇವೆ ಎಂದು ಟ್ವೀಟ್​​ ಮೂಲಕ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಹೇಳಿಕೆಗೆ ಟ್ವಿಟರ್​​ ಮೂಲಕ ಉತ್ತರ ನೀಡಿದ ರಾಹುಲ್​​ ಗಾಂಧಿ”ಮಿಸ್ಟರ್ ಮೋದಿ ನಮ್ಮನ್ನು ನೀವು ಏನು ಬೇಕಾದರೂ ಕರೆಯಬಹುದು. ನಾವು ಎಂದಿಗೂ INDIA. ಮಣಿಪುರವನ್ನು ಮತ್ತೆ ಮೊದಲಿನ ಸ್ಥಿತಿಗೆ ತರವುದು ನಮ್ಮ ಗುರಿ. ಅಲ್ಲಿಯ ಮಕ್ಕಳು ಮತ್ತು ಮಹಿಳೆಯರ ಕಣ್ಣೀರನ್ನು ಒರೆಸಲು ಸಹಾಯ ಮಾಡುತ್ತೇವೆ. ಎಲ್ಲ ಜನರಿಗೂ ನಾವು ಪ್ರೀತಿ ಮತ್ತು ಶಾಂತಿಯನ್ನು ಮತ್ತೆ ನೀಡುತ್ತೇವೆ. ಮಣಿಪುರದಲ್ಲಿ ಮತ್ತೆ ಭಾರತದ ಕಲ್ಪನೆಯನ್ನು ಮರುನಿರ್ಮಾಣ ಮಾಡುತ್ತೇವೆ” ಎಂದು ಹೇಳಿದ್ದಾರೆ.

ಮಣಿಪುರದಲ್ಲಿ ನಡೆದ ಹಿಂಸಾಚಾರದಿಂದ ದೇಶದ್ಯಾಂತ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇನ್ನೂ ಉರಿಯುತ್ತಿರುವ ಬೆಂಕಿಗೆ ತುಪ್ಪು ಸುರಿದಂತೆ, ಮೇ 4ರಂದು ಚಿತ್ರಿಸಲಾಗಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿರುವ ವಿಡಿಯೋ ಇತ್ತಿಚೇಗೆ ವೈರಲ್​​ ಆಗಿರುವುದು ಈ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಬಗ್ಗೆ ಮುಂಗಾರು ಅಧಿವೇಶನದಲ್ಲಿ ಚರ್ಚೆಯಾಗಬೇಕು ಎಂದು ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು, ಕೇಂದ್ರ ಸರ್ಕಾರ ಚರ್ಚೆ ಒಪ್ಪಿಗೆ ನೀಡಿತ್ತು, ಆದರೆ ಇದೀಗ ವಿರೋಧ ಪಕ್ಷಗಳು ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ಅವರೇ ನೇರವಾಗಿ ಉತ್ತರ ನೀಡಬೇಕು ಎಂದು ವಿರೋಧ ಪಕ್ಷಗಳು ಒತ್ತಾಯ ಮಾಡುತ್ತಿದೆ.

ಇದನ್ನೂ ಓದಿ: ಇಂಡಿಯನ್ ಮುಜಾಹಿದ್ದೀನ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದೆಲ್ಲದರಲ್ಲೂ ಇಂಡಿಯಾ ಇದೆ; ಪ್ರತಿಪಕ್ಷಗಳ ‘ಇಂಡಿಯಾ’ ಒಕ್ಕೂಟ ಬಗ್ಗೆ ಮೋದಿ ವಾಗ್ದಾಳಿ

ಇನ್ನೂ ಇಂದು 4ನೇ ದಿನದ ಮುಂಗಾರು ಸಂಸತ್​ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಬಿಜೆಪಿ ಪಕ್ಷದ ಸಂಸದರ ಸಭೆಯಲ್ಲಿ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಬಗ್ಗೆ ಮಾತನಾಡಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ವಿರೋಧ ಪಕ್ಷಗಳು ಇಂಡಿಯಾ ಎಂಬ ಹೆಸರಿನ ಮೂಲಕ ಜನರ ದಿಕ್ಕನ್ನು ತಪ್ಪಿಸುತ್ತಿದೆ. ಈ ಹಿಂದೆ ಈಸ್ಟ್ ಇಂಡಿಯಾ ಕಂಪನಿ ಎಂಬುದನ್ನು ವಿದೇಶಿಯರು ಸ್ಥಾಪನೆ ಮಾಡಿದ್ದರು, ಅದರಲ್ಲೂ ಇಂಡಿಯಾ ಇತ್ತು. ಇದೀಗ ಇಂಡಿಯಾ ಮೈತ್ರಿ  ಪಕ್ಷಗಳು ಇಂಡಿಯಾ ಎಂಬ ಕಂಪನಿಯನ್ನು ಸ್ಥಾಪನೆ ಮಾಡಿದೆ. ಭಯೋತ್ಪಾದನೆ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಲ್ಲೂ ಇಂಡಿಯಾ ಎಂಬುದು ಇತ್ತು. ಇಂಡಿಯಾ ಎಂಬ ಹೆಸರನ್ನು ಬಳಸುವುದರಲ್ಲಿ ಯಾವ ಅರ್ಥವೂ ಇಲ್ಲ ಎಂದು ಹೇಳಿದ್ದಾರೆ.

ಇನ್ನೂ ಮೋದಿ ಉಪನಾಮಕ್ಕೆ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ರಾಹುಲ್​​ ಗಾಂಧಿ ಅವರು ಪ್ರಧಾನಿ ಮೋದಿ ಅವರ ಈ ಹೇಳಿಕೆಗೆ ಟ್ವಿಟರ್​​ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Tue, 25 July 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ