AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan: ನೀವು ಒಗ್ಗಟ್ಟಾದ್ರೆ ಪಾಕಿಸ್ತಾನವನ್ನೂ ಹಿಂದೂ ದೇಶ ಮಾಡಬಹುದು: ಬಾಗೇಶ್ವರ್ ಧಾಮ್ ಮುಖ್ಯಸ್ಥರ ಹೇಳಿಕೆ

Acharya Dhirendra Shastri: ಜನರು ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಮಾಡಬಹುದು. ಭಾರತ ಅಥವಾ ಪಾಕಿಸ್ತಾನವನ್ನು ಹಿಂದೂ ದೇಶವನ್ನಾಗಿಯೂ ಮಾಡಬಹುದು ಎಂದು ಬಾಗೇಶ್ವರ್ ಧಾಮ್ ಟ್ರಸ್ಟ್ ಮುಖ್ಯಸ್ಥ ಧೀರೇಂದ್ರ ಶಾಸ್ತ್ರಿ ಹೇಳಿದ್ದಾರೆ.

Pakistan: ನೀವು ಒಗ್ಗಟ್ಟಾದ್ರೆ ಪಾಕಿಸ್ತಾನವನ್ನೂ ಹಿಂದೂ ದೇಶ ಮಾಡಬಹುದು: ಬಾಗೇಶ್ವರ್ ಧಾಮ್ ಮುಖ್ಯಸ್ಥರ ಹೇಳಿಕೆ
ಆಚಾರ್ಯ ಧೀರೇಂದ್ರ ಶಾಸ್ತ್ರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 28, 2023 | 7:01 PM

Share

ಸೂರತ್: ಮಧ್ಯಪ್ರದೇಶದ ಬಾಗೇಶ್ವರ್ ಧಾಮ್ ಟ್ರಸ್ಟ್​ನ ಮುಖ್ಯಸ್ಥ ಆಚಾರ್ಯ ಧೀರೇಂದ್ರ ಶಾಸ್ತ್ರಿ (Acharya Dhirendra Shastri) ಇದೀಗ ಮತ್ತೊಮ್ಮೆ ಹಿಂದುತ್ವದ ಪುನಶ್ಚೇತನದ ಬಗ್ಗೆ ಮಾತನಾಡಿದ್ದಾರೆ. ಗುಜರಾತ್​ನ ಸೂರತ್ ನಗರದಲ್ಲಿ ನಡೆಸಿದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಧಿರೇಂದ್ರ ಶಾಸ್ತ್ರಿ, ಪಾಕಿಸ್ತಾನವನ್ನು ಬೇಕಾದರೆ ಹಿಂದೂ ರಾಷ್ಟ್ರವಾಗಿ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಜನರು ಒಗ್ಗಟ್ಟು ತೋರಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಅವರು ಪಾಕಿಸ್ತಾನವನ್ನು ಹಿಂದೂ ರಾಷ್ಟ್ರವಾಗಿ ಮಾಡಬಹುದು ಎಂದು ನಿದರ್ಶನ ಕಲ್ಪಿಸಿದ್ದಾರೆ.

ಗುಜರಾತ್ ರಾಜ್ಯದ ಜನರಿಂದ ತನಗೆ ಹಣವಾಗಲೀ, ಹೆಸರಾಗಲೀ ಮಾಡುವ ಉದ್ದೇಶ ಇಲ್ಲ. ಹಿಂದುತ್ವದ ಅಡಿಯಲ್ಲಿ ಎಲ್ಲಾ ಹಿಂದೂಗಳನ್ನು ಒಗ್ಗೂಡಿಸುವುದು ನನ್ನ ಪ್ರಯತ್ನ. ನೀವು ಹಿಂದೂಗಳು ಒಗ್ಗಟ್ಟಾಗಿದ್ದರೆ ಭಾರತವನ್ನಾಗಲೀ ಅಥವಾ ಪಾಕಿಸ್ತಾನವನ್ನಾಗಲೀ ಹಿಂದೂ ದೇಶವಾಗಿ ಮಾಡಬಹುದು ಎಂದು ಬಾಗೇಶ್ವರ್ ಧಾಮ್ ಸರ್ಕಾರ್ ಎಂದು ಖ್ಯಾತರಾಗಿರುವ ಧೀರೇಂದ್ರ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಕೆಲವರು ಭಾರತ ದೇಶವನ್ನು ಹಿಂದೂ ರಾಷ್ಟ್ರವಾಗಿ ಹೇಗೆ ಮಾಡುತ್ತೀರಿ ಎಂದು ಕೇಳುತ್ತಾರೆ. ಭಾರತ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಮುಂದೆಯೂ ಹಿಂದೂ ದೇಶವಾಗಿಯೇ ಮುಂದುವರಿಯುತ್ತದೆ ಎಂದು ಬಾಗೇಶ್ವರ್ ಧಾಮ್ ಪೀಠದ ಮುಖ್ಯಸ್ಥರು ಹೇಳಿದ್ದಾರೆ.

ಇದನ್ನೂ ಓದಿManipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್

ಅಯೋಧ್ಯೆ ಆಯ್ತು, ಈಗ ಮಥುರಾದ ಸರದಿ ಎಂದ ಶಾಸ್ತ್ರಿ

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರ ನಿರ್ಮಾಣ ಆಗುತ್ತಿದೆ. ಇದು ಹಿಂದೂಗಳಿಗೆ ಸಿಕ್ಕ ಗೆಲುವು. ಈಗ ಮಥುರಾದ ಸರದಿ ಇದೆ. ಸನಾತನಿಗಳು ಮತ್ತೆ ಎಚ್ಚೆತ್ತು ಮಥುರಾದಲ್ಲಿ ಹಿಂದೂಗಳು ಕೃಷ್ಣ ಜನ್ಮಸ್ಥಾನವನ್ನು ಮರಳಿಪಡೆಯಬೇಕಿದೆ ಎಂದು ಧಿರೇಂದ್ರ ಶಾಸ್ತ್ರಿ ಕರೆ ನೀಡಿದ್ದಾರೆ.

ಇದೇ ವೇಳೆ, ಪಾಕಿಸ್ತಾನವನ್ನು ಹಿಂದೂ ದೇಶವಾಗಿ ಮಾಡಬಹುದು ಎಂಬ ಪೀಠಾಧಿಪತಿಯ ಹೇಳಿಕೆಗೆ ಹಲವು ಅಚ್ಚರಿ ವ್ಯಕ್ತಪಡಿಸುತ್ತಿರುವುದು ಹೌದು. ಬಹುತೇಕ ನೂರಕ್ಕೆ ನೂರು ಇಸ್ಲಾಮಿಕ್ ದೇಶವಾಗಿರುವ ಪಾಕಿಸ್ತಾನವನ್ನು ಹಿಂದೂ ದೇಶವಾಗಿ ಮಾಡುವ ಉಪಾಯವಾದರೂ ಏನು ಎಂಬುದನ್ನು ಸ್ವಾಮಿಗಳು ತಿಳಿಸಬೇಕು ಎಂದು ಕೆಲವರು ಕೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್