AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan: ನೀವು ಒಗ್ಗಟ್ಟಾದ್ರೆ ಪಾಕಿಸ್ತಾನವನ್ನೂ ಹಿಂದೂ ದೇಶ ಮಾಡಬಹುದು: ಬಾಗೇಶ್ವರ್ ಧಾಮ್ ಮುಖ್ಯಸ್ಥರ ಹೇಳಿಕೆ

Acharya Dhirendra Shastri: ಜನರು ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಮಾಡಬಹುದು. ಭಾರತ ಅಥವಾ ಪಾಕಿಸ್ತಾನವನ್ನು ಹಿಂದೂ ದೇಶವನ್ನಾಗಿಯೂ ಮಾಡಬಹುದು ಎಂದು ಬಾಗೇಶ್ವರ್ ಧಾಮ್ ಟ್ರಸ್ಟ್ ಮುಖ್ಯಸ್ಥ ಧೀರೇಂದ್ರ ಶಾಸ್ತ್ರಿ ಹೇಳಿದ್ದಾರೆ.

Pakistan: ನೀವು ಒಗ್ಗಟ್ಟಾದ್ರೆ ಪಾಕಿಸ್ತಾನವನ್ನೂ ಹಿಂದೂ ದೇಶ ಮಾಡಬಹುದು: ಬಾಗೇಶ್ವರ್ ಧಾಮ್ ಮುಖ್ಯಸ್ಥರ ಹೇಳಿಕೆ
ಆಚಾರ್ಯ ಧೀರೇಂದ್ರ ಶಾಸ್ತ್ರಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 28, 2023 | 7:01 PM

Share

ಸೂರತ್: ಮಧ್ಯಪ್ರದೇಶದ ಬಾಗೇಶ್ವರ್ ಧಾಮ್ ಟ್ರಸ್ಟ್​ನ ಮುಖ್ಯಸ್ಥ ಆಚಾರ್ಯ ಧೀರೇಂದ್ರ ಶಾಸ್ತ್ರಿ (Acharya Dhirendra Shastri) ಇದೀಗ ಮತ್ತೊಮ್ಮೆ ಹಿಂದುತ್ವದ ಪುನಶ್ಚೇತನದ ಬಗ್ಗೆ ಮಾತನಾಡಿದ್ದಾರೆ. ಗುಜರಾತ್​ನ ಸೂರತ್ ನಗರದಲ್ಲಿ ನಡೆಸಿದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಧಿರೇಂದ್ರ ಶಾಸ್ತ್ರಿ, ಪಾಕಿಸ್ತಾನವನ್ನು ಬೇಕಾದರೆ ಹಿಂದೂ ರಾಷ್ಟ್ರವಾಗಿ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಜನರು ಒಗ್ಗಟ್ಟು ತೋರಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಅವರು ಪಾಕಿಸ್ತಾನವನ್ನು ಹಿಂದೂ ರಾಷ್ಟ್ರವಾಗಿ ಮಾಡಬಹುದು ಎಂದು ನಿದರ್ಶನ ಕಲ್ಪಿಸಿದ್ದಾರೆ.

ಗುಜರಾತ್ ರಾಜ್ಯದ ಜನರಿಂದ ತನಗೆ ಹಣವಾಗಲೀ, ಹೆಸರಾಗಲೀ ಮಾಡುವ ಉದ್ದೇಶ ಇಲ್ಲ. ಹಿಂದುತ್ವದ ಅಡಿಯಲ್ಲಿ ಎಲ್ಲಾ ಹಿಂದೂಗಳನ್ನು ಒಗ್ಗೂಡಿಸುವುದು ನನ್ನ ಪ್ರಯತ್ನ. ನೀವು ಹಿಂದೂಗಳು ಒಗ್ಗಟ್ಟಾಗಿದ್ದರೆ ಭಾರತವನ್ನಾಗಲೀ ಅಥವಾ ಪಾಕಿಸ್ತಾನವನ್ನಾಗಲೀ ಹಿಂದೂ ದೇಶವಾಗಿ ಮಾಡಬಹುದು ಎಂದು ಬಾಗೇಶ್ವರ್ ಧಾಮ್ ಸರ್ಕಾರ್ ಎಂದು ಖ್ಯಾತರಾಗಿರುವ ಧೀರೇಂದ್ರ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಕೆಲವರು ಭಾರತ ದೇಶವನ್ನು ಹಿಂದೂ ರಾಷ್ಟ್ರವಾಗಿ ಹೇಗೆ ಮಾಡುತ್ತೀರಿ ಎಂದು ಕೇಳುತ್ತಾರೆ. ಭಾರತ ಈಗಾಗಲೇ ಹಿಂದೂ ರಾಷ್ಟ್ರವೇ ಆಗಿದೆ. ಮುಂದೆಯೂ ಹಿಂದೂ ದೇಶವಾಗಿಯೇ ಮುಂದುವರಿಯುತ್ತದೆ ಎಂದು ಬಾಗೇಶ್ವರ್ ಧಾಮ್ ಪೀಠದ ಮುಖ್ಯಸ್ಥರು ಹೇಳಿದ್ದಾರೆ.

ಇದನ್ನೂ ಓದಿManipur: ಮಣಿಪುರದಲ್ಲಿ ಕಮಾಂಡೋ ಕಾರ್ಯಾಚರಣೆ; ಕೆಲವೇ ಗಂಟೆಯಲ್ಲಿ 40 ಮಂದಿ ಎನ್​ಕೌಂಟರ್

ಅಯೋಧ್ಯೆ ಆಯ್ತು, ಈಗ ಮಥುರಾದ ಸರದಿ ಎಂದ ಶಾಸ್ತ್ರಿ

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರ ನಿರ್ಮಾಣ ಆಗುತ್ತಿದೆ. ಇದು ಹಿಂದೂಗಳಿಗೆ ಸಿಕ್ಕ ಗೆಲುವು. ಈಗ ಮಥುರಾದ ಸರದಿ ಇದೆ. ಸನಾತನಿಗಳು ಮತ್ತೆ ಎಚ್ಚೆತ್ತು ಮಥುರಾದಲ್ಲಿ ಹಿಂದೂಗಳು ಕೃಷ್ಣ ಜನ್ಮಸ್ಥಾನವನ್ನು ಮರಳಿಪಡೆಯಬೇಕಿದೆ ಎಂದು ಧಿರೇಂದ್ರ ಶಾಸ್ತ್ರಿ ಕರೆ ನೀಡಿದ್ದಾರೆ.

ಇದೇ ವೇಳೆ, ಪಾಕಿಸ್ತಾನವನ್ನು ಹಿಂದೂ ದೇಶವಾಗಿ ಮಾಡಬಹುದು ಎಂಬ ಪೀಠಾಧಿಪತಿಯ ಹೇಳಿಕೆಗೆ ಹಲವು ಅಚ್ಚರಿ ವ್ಯಕ್ತಪಡಿಸುತ್ತಿರುವುದು ಹೌದು. ಬಹುತೇಕ ನೂರಕ್ಕೆ ನೂರು ಇಸ್ಲಾಮಿಕ್ ದೇಶವಾಗಿರುವ ಪಾಕಿಸ್ತಾನವನ್ನು ಹಿಂದೂ ದೇಶವಾಗಿ ಮಾಡುವ ಉಪಾಯವಾದರೂ ಏನು ಎಂಬುದನ್ನು ಸ್ವಾಮಿಗಳು ತಿಳಿಸಬೇಕು ಎಂದು ಕೆಲವರು ಕೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ