AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಡಿಯಲ್ಲಿ ಭಾರತೀಯರಿಗೆ ಹಿಂಸೆ ನೀಡಿದ ರಷ್ಯಾ ಸೈನಿಕರು; ತುಂಬ ಸಂಕಟವಾಗುತ್ತಿದೆ ಎಂದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ

ಉಕ್ರೇನ್​​ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದ್ದರೂ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷಗಳ ಹಲವು ನಾಯಕರು ಇದೇ ವಿಚಾರವನ್ನು ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

Video: ಗಡಿಯಲ್ಲಿ ಭಾರತೀಯರಿಗೆ ಹಿಂಸೆ ನೀಡಿದ ರಷ್ಯಾ ಸೈನಿಕರು; ತುಂಬ ಸಂಕಟವಾಗುತ್ತಿದೆ ಎಂದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ
ರಾಹುಲ್​ ಗಾಂಧಿ
Follow us
TV9 Web
| Updated By: Lakshmi Hegde

Updated on:Feb 28, 2022 | 10:39 AM

ಉಕ್ರೇನ್​ ಮೇಲೆ ರಷ್ಯಾ ಯುದ್ಧ ಸಾರಿದ ಬೆನ್ನಲ್ಲೇ ಉಕ್ರೇನ್​​ನಿಂದ ಭಾರತೀಯರನ್ನು ವಾಪಸ್​ ಕರೆತರುವ ಕಾರ್ಯ ಭರದಿಂದ ಸಾಗುತ್ತಿದೆ. ಆಪರೇಶನ್​ ಗಂಗಾ (Operation Ganga) ಹೆಸರಿನ ಕಾರ್ಯಾಚರಣೆಯಡಿ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದೆ. ಅಷ್ಟಾಗ್ಯೂ ಕೂಡ ಇನ್ನೂ ಸಾವಿರಾರು ಮಂದಿ ಉಕ್ರೇನ್​​ನಲ್ಲಿಯೇ ಸಿಲುಕಿದ್ದಾರೆ. ರಷ್ಯಾ ಸೈನಿಕರ ಕ್ರೌರ್ಯ ಮಿತಿಮೀರಿದ್ದು ಪೋಲ್ಯಾಂಡ್​, ರೊಮೇನಿಯಾ ಗಡಿ ಭಾಗಕ್ಕೆ ತೆರಳಿರುವ ಭಾರತೀಯರು ಸೇರಿ ಇನ್ನಿತರ ದೇಶಗಳ ಜನರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಉಕ್ರೇನ್​​ ವಾಯುಮಾರ್ಗ ಬಂದ್ ಆಗಿರುವ ಹಿನ್ನೆಲೆಯಲ್ಲಿ ಭಾರತೀಯರು ಸೇರಿ ಉಳಿದ ದೇಶಗಳ ಜನರು ಪೋಲ್ಯಾಂಡ್​ ಮತ್ತು ರೊಮೇನಿಯಾ ಗಡಿಯವರಿಗೆ ರಸ್ತೆ ಮಾರ್ಗದ ಮೂಲಕ ಬಂದು, ಅಲ್ಲಿಂದ ತಮ್ಮ ತಾಯ್ನಾಡಿನ ವಿಮಾನ ಹತ್ತುತ್ತಿದ್ದಾರೆ. ಆದರೆ ಹೀಗೆ ಗಡಿ ಭಾಗಕ್ಕೆ ಬಂದಿರುವ ಜನರ ಮೇಲೆ ರಷ್ಯಾ ಸೈನಿಕರು ದೌರ್ಜನ್ಯ ಎಸಗುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಕಾಂಗ್ರೆಸ್ ಸಂಸದ ರಾಹುಲ್​ ಗಾಂಧಿಯವರೂ ಕೂಡ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಇಂಥ ಹಿಂಸೆಯನ್ನು ಅನುಭವಿಸುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ನೋಡಲು ತುಂಬ ದುಃಖವಾಗುತ್ತಿದೆ. ಈ ವಿಡಿಯೋವನ್ನು ಅವರ ಪಾಲಕರೂ ನೋಡುತ್ತಾರೆ. ತಮ್ಮ ಮಕ್ಕಳಿಗೆ ಹೀಗೆಲ್ಲ ಹಿಂಸೆ ನೀಡುವ ದೃಶ್ಯವನ್ನು ನೋಡುವ ಸ್ಥಿತಿ ಯಾವ ಪಾಲಕರಿಗೂ ಬರಬಾರದು. ಇವರನ್ನೆಲ್ಲ ಅಲ್ಲಿಂದ ಭಾರತಕ್ಕೆ ಕರೆತರಲು ಭಾರತ ಸರ್ಕಾರ ಏನೆಲ್ಲ ಯೋಜನೆ ರೂಪಿಸಿದೆ ಎಂಬುದನ್ನು ತಿಳಿಸಬೇಕು. ವಿದ್ಯಾರ್ಥಿಗಳ ಕುಟುಂಬಕ್ಕೂ ಹೇಳುವ ಮೂಲಕ ಸಮಾಧಾನ ಮಾಡಬೇಕು. ನಮ್ಮ ಜನರು ಹೀಗೆ ಅನಾಥರಾಗಲು ಬಿಡಬಾರದು ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.

ಉಕ್ರೇನ್​​ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದ್ದರೂ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷಗಳ ಹಲವು ನಾಯಕರು ಇದೇ ವಿಚಾರವನ್ನು ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಇಬ್ಬರು ವಿದ್ಯಾರ್ಥಿಗಳು ಮಾತನಾಡುತ್ತಿದ್ದ ವಿಡಿಯೋ ಶೇರ್ ಮಾಡಿಕೊಂಡಿದ್ದ ರಾಹುಲ್​ ಗಾಂಧಿ, ಭಾರತೀಯ ವಿದ್ಯಾರ್ಥಿಗಳು ಬಂಕರ್​​ನಲ್ಲಿ ಇರುವ ದೃಶ್ಯ ನೋಡಿದರೆ ಮನಸಿಗೆ ಕಿರಿಕಿರಿಯಾಗುತ್ತದೆ. ರಷ್ಯಾದ ಆಕ್ರಮಣ ತೀವ್ರವಾಗಿರುವ ಪೂರ್ವ ಉಕ್ರೇನ್​​ನಲ್ಲಿ ಭಾರತೀಯರು ಅನೇಕರು ಸಿಲುಕಿದ್ದಾರೆ. ಅಲ್ಲಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದ ಬಗ್ಗೆ ನೋವಾಗುತ್ತದೆ. ಭಾರತೀಯರನ್ನು ಸ್ಥಳಾಂತರ ಮಾಡುವ ಕೆಲಸ ಎಷ್ಟಾಗತ್ತೋ ಅಷ್ಟು ಬೇಗ ಮಾಡಬೇಕು ಎಂದು ನಾನು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದರು.

ಇದನ್ನೂ ಓದಿ: Russia-Ukraine War: ರಷ್ಯಾದ 3500ಕ್ಕೂ ಹೆಚ್ಚು ಸೈನಿಕರನ್ನು ಕೊಂದಿದ್ದಾಗಿ ಹೇಳಿದ ಉಕ್ರೇನ್​; ಇಲ್ಲಿದೆ ಪ್ರಮುಖ ಬೆಳವಣಿಗೆಗಳ ವಿವರ

Published On - 9:47 am, Mon, 28 February 22

ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್