AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಗಡಿಯಲ್ಲಿ ಭಾರತೀಯರಿಗೆ ಹಿಂಸೆ ನೀಡಿದ ರಷ್ಯಾ ಸೈನಿಕರು; ತುಂಬ ಸಂಕಟವಾಗುತ್ತಿದೆ ಎಂದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ

ಉಕ್ರೇನ್​​ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದ್ದರೂ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷಗಳ ಹಲವು ನಾಯಕರು ಇದೇ ವಿಚಾರವನ್ನು ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

Video: ಗಡಿಯಲ್ಲಿ ಭಾರತೀಯರಿಗೆ ಹಿಂಸೆ ನೀಡಿದ ರಷ್ಯಾ ಸೈನಿಕರು; ತುಂಬ ಸಂಕಟವಾಗುತ್ತಿದೆ ಎಂದ ಕಾಂಗ್ರೆಸ್​ ಸಂಸದ ರಾಹುಲ್​ ಗಾಂಧಿ
ರಾಹುಲ್​ ಗಾಂಧಿ
TV9 Web
| Edited By: |

Updated on:Feb 28, 2022 | 10:39 AM

Share

ಉಕ್ರೇನ್​ ಮೇಲೆ ರಷ್ಯಾ ಯುದ್ಧ ಸಾರಿದ ಬೆನ್ನಲ್ಲೇ ಉಕ್ರೇನ್​​ನಿಂದ ಭಾರತೀಯರನ್ನು ವಾಪಸ್​ ಕರೆತರುವ ಕಾರ್ಯ ಭರದಿಂದ ಸಾಗುತ್ತಿದೆ. ಆಪರೇಶನ್​ ಗಂಗಾ (Operation Ganga) ಹೆಸರಿನ ಕಾರ್ಯಾಚರಣೆಯಡಿ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದೆ. ಅಷ್ಟಾಗ್ಯೂ ಕೂಡ ಇನ್ನೂ ಸಾವಿರಾರು ಮಂದಿ ಉಕ್ರೇನ್​​ನಲ್ಲಿಯೇ ಸಿಲುಕಿದ್ದಾರೆ. ರಷ್ಯಾ ಸೈನಿಕರ ಕ್ರೌರ್ಯ ಮಿತಿಮೀರಿದ್ದು ಪೋಲ್ಯಾಂಡ್​, ರೊಮೇನಿಯಾ ಗಡಿ ಭಾಗಕ್ಕೆ ತೆರಳಿರುವ ಭಾರತೀಯರು ಸೇರಿ ಇನ್ನಿತರ ದೇಶಗಳ ಜನರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಉಕ್ರೇನ್​​ ವಾಯುಮಾರ್ಗ ಬಂದ್ ಆಗಿರುವ ಹಿನ್ನೆಲೆಯಲ್ಲಿ ಭಾರತೀಯರು ಸೇರಿ ಉಳಿದ ದೇಶಗಳ ಜನರು ಪೋಲ್ಯಾಂಡ್​ ಮತ್ತು ರೊಮೇನಿಯಾ ಗಡಿಯವರಿಗೆ ರಸ್ತೆ ಮಾರ್ಗದ ಮೂಲಕ ಬಂದು, ಅಲ್ಲಿಂದ ತಮ್ಮ ತಾಯ್ನಾಡಿನ ವಿಮಾನ ಹತ್ತುತ್ತಿದ್ದಾರೆ. ಆದರೆ ಹೀಗೆ ಗಡಿ ಭಾಗಕ್ಕೆ ಬಂದಿರುವ ಜನರ ಮೇಲೆ ರಷ್ಯಾ ಸೈನಿಕರು ದೌರ್ಜನ್ಯ ಎಸಗುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.

ಕಾಂಗ್ರೆಸ್ ಸಂಸದ ರಾಹುಲ್​ ಗಾಂಧಿಯವರೂ ಕೂಡ ವಿಡಿಯೋ ಶೇರ್​ ಮಾಡಿಕೊಂಡಿದ್ದಾರೆ. ಇಂಥ ಹಿಂಸೆಯನ್ನು ಅನುಭವಿಸುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ನೋಡಲು ತುಂಬ ದುಃಖವಾಗುತ್ತಿದೆ. ಈ ವಿಡಿಯೋವನ್ನು ಅವರ ಪಾಲಕರೂ ನೋಡುತ್ತಾರೆ. ತಮ್ಮ ಮಕ್ಕಳಿಗೆ ಹೀಗೆಲ್ಲ ಹಿಂಸೆ ನೀಡುವ ದೃಶ್ಯವನ್ನು ನೋಡುವ ಸ್ಥಿತಿ ಯಾವ ಪಾಲಕರಿಗೂ ಬರಬಾರದು. ಇವರನ್ನೆಲ್ಲ ಅಲ್ಲಿಂದ ಭಾರತಕ್ಕೆ ಕರೆತರಲು ಭಾರತ ಸರ್ಕಾರ ಏನೆಲ್ಲ ಯೋಜನೆ ರೂಪಿಸಿದೆ ಎಂಬುದನ್ನು ತಿಳಿಸಬೇಕು. ವಿದ್ಯಾರ್ಥಿಗಳ ಕುಟುಂಬಕ್ಕೂ ಹೇಳುವ ಮೂಲಕ ಸಮಾಧಾನ ಮಾಡಬೇಕು. ನಮ್ಮ ಜನರು ಹೀಗೆ ಅನಾಥರಾಗಲು ಬಿಡಬಾರದು ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.

ಉಕ್ರೇನ್​​ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಕರೆತರಲಾಗುತ್ತಿದ್ದರೂ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷಗಳ ಹಲವು ನಾಯಕರು ಇದೇ ವಿಚಾರವನ್ನು ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಇಬ್ಬರು ವಿದ್ಯಾರ್ಥಿಗಳು ಮಾತನಾಡುತ್ತಿದ್ದ ವಿಡಿಯೋ ಶೇರ್ ಮಾಡಿಕೊಂಡಿದ್ದ ರಾಹುಲ್​ ಗಾಂಧಿ, ಭಾರತೀಯ ವಿದ್ಯಾರ್ಥಿಗಳು ಬಂಕರ್​​ನಲ್ಲಿ ಇರುವ ದೃಶ್ಯ ನೋಡಿದರೆ ಮನಸಿಗೆ ಕಿರಿಕಿರಿಯಾಗುತ್ತದೆ. ರಷ್ಯಾದ ಆಕ್ರಮಣ ತೀವ್ರವಾಗಿರುವ ಪೂರ್ವ ಉಕ್ರೇನ್​​ನಲ್ಲಿ ಭಾರತೀಯರು ಅನೇಕರು ಸಿಲುಕಿದ್ದಾರೆ. ಅಲ್ಲಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದ ಬಗ್ಗೆ ನೋವಾಗುತ್ತದೆ. ಭಾರತೀಯರನ್ನು ಸ್ಥಳಾಂತರ ಮಾಡುವ ಕೆಲಸ ಎಷ್ಟಾಗತ್ತೋ ಅಷ್ಟು ಬೇಗ ಮಾಡಬೇಕು ಎಂದು ನಾನು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದಿದ್ದರು.

ಇದನ್ನೂ ಓದಿ: Russia-Ukraine War: ರಷ್ಯಾದ 3500ಕ್ಕೂ ಹೆಚ್ಚು ಸೈನಿಕರನ್ನು ಕೊಂದಿದ್ದಾಗಿ ಹೇಳಿದ ಉಕ್ರೇನ್​; ಇಲ್ಲಿದೆ ಪ್ರಮುಖ ಬೆಳವಣಿಗೆಗಳ ವಿವರ

Published On - 9:47 am, Mon, 28 February 22

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು