AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಸರ್ಕಾರಕ್ಕೆ 11.7 ಕೋಟಿ ರೂಪಾಯಿ ಪಾವತಿ ಸಾಧ್ಯವಿಲ್ಲ: ಪದ್ಮನಾಭಸ್ವಾಮಿ ದೇವಾಲಯ ಸಮಿತಿ

ದೇವಸ್ಥಾನದ ಆಗು ಹೋಗುಗಳನ್ನು ನೋಡಿಕೊಳ್ಳಲು ಸುಪ್ರೀಂಕೋರ್ಟ್​ ತಾತ್ಕಾಲಿಕ ಸಮಿತಿ ಒಂದನ್ನು ರಚಿಸಿದೆ. ಈ ಸಮಿತಿಯು ಸುಪ್ರೀಂಕೋರ್ಟ್​ ಬಳಿ ಈ ವಿಚಾರವನ್ನು ಹೇಳಿದೆ.

ಕೇರಳ ಸರ್ಕಾರಕ್ಕೆ 11.7 ಕೋಟಿ ರೂಪಾಯಿ ಪಾವತಿ ಸಾಧ್ಯವಿಲ್ಲ: ಪದ್ಮನಾಭಸ್ವಾಮಿ ದೇವಾಲಯ ಸಮಿತಿ
ಪದ್ಮನಾಭಸ್ವಾಮಿ ದೇವಾಲಯ
ರಾಜೇಶ್ ದುಗ್ಗುಮನೆ
| Edited By: |

Updated on: Feb 12, 2021 | 8:55 PM

Share

ನವದೆಹಲಿ: ವಿಶ್ವವಿಖ್ಯಾತ ಪದ್ಮನಾಭಸ್ವಾಮಿ ದೇವಾಲಯವು ಕೇರಳ ಸರ್ಕಾರಕ್ಕೆ ಪಾವತಿಸಬೇಕಿರುವ ₹ 11.7 ಕೋಟಿ ನಿರ್ವಹಣಾ ವೆಚ್ಚವನ್ನು ಕೊರೊನಾ ಕಾರಣದಿಂದ ಈ ವರ್ಷ ಪಾವತಿಸಲು ಸಾಧ್ಯವಿಲ್ಲ ಎಂದು ದೇವಾಲಯ ನಿರ್ವಹಣಾ ಸಮಿತಿ ಸುಪ್ರಿಂಕೋರ್ಟ್​ಗೆ​ ಹೇಳಿದೆ. ದೇವಾಲಯದ ಭದ್ರತೆ ಹಾಗೂ ನಿರ್ವಹಣೆಗೆ ದೇವಾಲಯವು ರಾಜ್ಯ ಸರ್ಕಾರಕ್ಕೆ ₹ 11.7 ಕೋಟಿ ಪಾವತಿಸಬೇಕಿದೆ. ಆದರೆ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಬರಬೇಕಿದ್ದ ದೇಣಿಗೆ ಪ್ರಮಾಣ ತೀವ್ರವಾಗಿ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಪಾವತಿಸಲು ಸಾಧ್ಯವೇ ಇಲ್ಲ ಎನ್ನುವುದು ದೇವಸ್ಥಾನದ ನಿಲುವು.

ದೇವಸ್ಥಾನದ ಆಗು ಹೋಗುಗಳನ್ನು ನೋಡಿಕೊಳ್ಳಲು ಸುಪ್ರೀಂಕೋರ್ಟ್​ ತಾತ್ಕಾಲಿಕ ಸಮಿತಿ ಒಂದನ್ನು ರಚಿಸಿದೆ. ಈ ಸಮಿತಿಯು ಸುಪ್ರೀಂಕೋರ್ಟ್​ ಬಳಿ ಈ ವಿಚಾರವನ್ನು ಹೇಳಿದೆ. ಈ ಸಮಯದಲ್ಲಿ ನಾವು ಯಾವುದೇ ಆದೇಶ ಹೊರಡಿಸುವುದಿಲ್ಲ. ಕೇರಳ ಸರ್ಕಾರವು ಈ ಕೋರಿಕೆಯನ್ನು ಪರಿಗಣಿಸಲಿ ಎಂದು ಉನ್ನತ ನ್ಯಾಯಾಲಯ ನಿರ್ದೇಶಿಸಿದೆ.

ರಾಜವಂಶಸ್ಥರೇ ದೇವಸ್ಥಾನವನ್ನು ನಡೆಸಬೇಕು ಎನ್ನುವ ಕೇರಳ ಹೈಕೋರ್ಟ್​ ಆದೇಶವನ್ನು ರದ್ದು ಮಾಡಿದ್ದ ಸುಪ್ರೀಂಕೋರ್ಟ್​, ಭದ್ರತೆ ಹಾಗೂ ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಖರ್ಚುಗಳನ್ನು ರಾಜ್ಯ ಸರ್ಕಾರ ಮೊದಲು  ಭರಿಸಲಿ. ನಂತರ ದೇವಾಲಯ ಅದನ್ನು ಸರ್ಕಾರಕ್ಕೆ ಪಾವತಿಸಲಿ ಎಂದು ಹೇಳಿತ್ತು. ಅದರಂತೆ ಸರ್ಕಾರಕ್ಕೆ 11.7 ಕೋಟಿ ರೂಪಾಯಿ ಪಾವತಿಸಬೇಕಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಕಳೆದ ಮಾರ್ಚ್​ನಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಈ ವೇಳೆ ದೇವಾಲಯದ ಬಾಗಿಲನ್ನು ಹಾಕಲಾಗಿತ್ತು. ನಂತರ 2020ರ ಆಗಸ್ಟ್​ 26ರಂದು ದೇವಾಲಯವನ್ನು ತೆರೆಯಲಾಗಿತ್ತು. ಆದರೆ, ಅಕ್ಟೋಬರ್​ನಲ್ಲಿ ದೇವಾಲಯದ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿತ್ತು. ಹೀಗಾಗಿ, ದೇವಸ್ಥಾನವನ್ನು ಮತ್ತೆ ಮುಚ್ಚಲಾಗಿತ್ತು.

ಇದನ್ನೂ ಓದಿ: 5 ತಿಂಗಳ ಬಳಿಕ ಭಕ್ತರಿಗೆ ಪದ್ಮನಾಭ ಸ್ವಾಮಿಯ ಅನಂತ ದರ್ಶನ

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!