AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಸರ್ಕಾರಕ್ಕೆ 11.7 ಕೋಟಿ ರೂಪಾಯಿ ಪಾವತಿ ಸಾಧ್ಯವಿಲ್ಲ: ಪದ್ಮನಾಭಸ್ವಾಮಿ ದೇವಾಲಯ ಸಮಿತಿ

ದೇವಸ್ಥಾನದ ಆಗು ಹೋಗುಗಳನ್ನು ನೋಡಿಕೊಳ್ಳಲು ಸುಪ್ರೀಂಕೋರ್ಟ್​ ತಾತ್ಕಾಲಿಕ ಸಮಿತಿ ಒಂದನ್ನು ರಚಿಸಿದೆ. ಈ ಸಮಿತಿಯು ಸುಪ್ರೀಂಕೋರ್ಟ್​ ಬಳಿ ಈ ವಿಚಾರವನ್ನು ಹೇಳಿದೆ.

ಕೇರಳ ಸರ್ಕಾರಕ್ಕೆ 11.7 ಕೋಟಿ ರೂಪಾಯಿ ಪಾವತಿ ಸಾಧ್ಯವಿಲ್ಲ: ಪದ್ಮನಾಭಸ್ವಾಮಿ ದೇವಾಲಯ ಸಮಿತಿ
ಪದ್ಮನಾಭಸ್ವಾಮಿ ದೇವಾಲಯ
ರಾಜೇಶ್ ದುಗ್ಗುಮನೆ
| Edited By: |

Updated on: Feb 12, 2021 | 8:55 PM

Share

ನವದೆಹಲಿ: ವಿಶ್ವವಿಖ್ಯಾತ ಪದ್ಮನಾಭಸ್ವಾಮಿ ದೇವಾಲಯವು ಕೇರಳ ಸರ್ಕಾರಕ್ಕೆ ಪಾವತಿಸಬೇಕಿರುವ ₹ 11.7 ಕೋಟಿ ನಿರ್ವಹಣಾ ವೆಚ್ಚವನ್ನು ಕೊರೊನಾ ಕಾರಣದಿಂದ ಈ ವರ್ಷ ಪಾವತಿಸಲು ಸಾಧ್ಯವಿಲ್ಲ ಎಂದು ದೇವಾಲಯ ನಿರ್ವಹಣಾ ಸಮಿತಿ ಸುಪ್ರಿಂಕೋರ್ಟ್​ಗೆ​ ಹೇಳಿದೆ. ದೇವಾಲಯದ ಭದ್ರತೆ ಹಾಗೂ ನಿರ್ವಹಣೆಗೆ ದೇವಾಲಯವು ರಾಜ್ಯ ಸರ್ಕಾರಕ್ಕೆ ₹ 11.7 ಕೋಟಿ ಪಾವತಿಸಬೇಕಿದೆ. ಆದರೆ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಬರಬೇಕಿದ್ದ ದೇಣಿಗೆ ಪ್ರಮಾಣ ತೀವ್ರವಾಗಿ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಪಾವತಿಸಲು ಸಾಧ್ಯವೇ ಇಲ್ಲ ಎನ್ನುವುದು ದೇವಸ್ಥಾನದ ನಿಲುವು.

ದೇವಸ್ಥಾನದ ಆಗು ಹೋಗುಗಳನ್ನು ನೋಡಿಕೊಳ್ಳಲು ಸುಪ್ರೀಂಕೋರ್ಟ್​ ತಾತ್ಕಾಲಿಕ ಸಮಿತಿ ಒಂದನ್ನು ರಚಿಸಿದೆ. ಈ ಸಮಿತಿಯು ಸುಪ್ರೀಂಕೋರ್ಟ್​ ಬಳಿ ಈ ವಿಚಾರವನ್ನು ಹೇಳಿದೆ. ಈ ಸಮಯದಲ್ಲಿ ನಾವು ಯಾವುದೇ ಆದೇಶ ಹೊರಡಿಸುವುದಿಲ್ಲ. ಕೇರಳ ಸರ್ಕಾರವು ಈ ಕೋರಿಕೆಯನ್ನು ಪರಿಗಣಿಸಲಿ ಎಂದು ಉನ್ನತ ನ್ಯಾಯಾಲಯ ನಿರ್ದೇಶಿಸಿದೆ.

ರಾಜವಂಶಸ್ಥರೇ ದೇವಸ್ಥಾನವನ್ನು ನಡೆಸಬೇಕು ಎನ್ನುವ ಕೇರಳ ಹೈಕೋರ್ಟ್​ ಆದೇಶವನ್ನು ರದ್ದು ಮಾಡಿದ್ದ ಸುಪ್ರೀಂಕೋರ್ಟ್​, ಭದ್ರತೆ ಹಾಗೂ ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಖರ್ಚುಗಳನ್ನು ರಾಜ್ಯ ಸರ್ಕಾರ ಮೊದಲು  ಭರಿಸಲಿ. ನಂತರ ದೇವಾಲಯ ಅದನ್ನು ಸರ್ಕಾರಕ್ಕೆ ಪಾವತಿಸಲಿ ಎಂದು ಹೇಳಿತ್ತು. ಅದರಂತೆ ಸರ್ಕಾರಕ್ಕೆ 11.7 ಕೋಟಿ ರೂಪಾಯಿ ಪಾವತಿಸಬೇಕಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಕಳೆದ ಮಾರ್ಚ್​ನಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಈ ವೇಳೆ ದೇವಾಲಯದ ಬಾಗಿಲನ್ನು ಹಾಕಲಾಗಿತ್ತು. ನಂತರ 2020ರ ಆಗಸ್ಟ್​ 26ರಂದು ದೇವಾಲಯವನ್ನು ತೆರೆಯಲಾಗಿತ್ತು. ಆದರೆ, ಅಕ್ಟೋಬರ್​ನಲ್ಲಿ ದೇವಾಲಯದ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿತ್ತು. ಹೀಗಾಗಿ, ದೇವಸ್ಥಾನವನ್ನು ಮತ್ತೆ ಮುಚ್ಚಲಾಗಿತ್ತು.

ಇದನ್ನೂ ಓದಿ: 5 ತಿಂಗಳ ಬಳಿಕ ಭಕ್ತರಿಗೆ ಪದ್ಮನಾಭ ಸ್ವಾಮಿಯ ಅನಂತ ದರ್ಶನ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?