AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಸರ್ಕಾರಕ್ಕೆ 11.7 ಕೋಟಿ ರೂಪಾಯಿ ಪಾವತಿ ಸಾಧ್ಯವಿಲ್ಲ: ಪದ್ಮನಾಭಸ್ವಾಮಿ ದೇವಾಲಯ ಸಮಿತಿ

ದೇವಸ್ಥಾನದ ಆಗು ಹೋಗುಗಳನ್ನು ನೋಡಿಕೊಳ್ಳಲು ಸುಪ್ರೀಂಕೋರ್ಟ್​ ತಾತ್ಕಾಲಿಕ ಸಮಿತಿ ಒಂದನ್ನು ರಚಿಸಿದೆ. ಈ ಸಮಿತಿಯು ಸುಪ್ರೀಂಕೋರ್ಟ್​ ಬಳಿ ಈ ವಿಚಾರವನ್ನು ಹೇಳಿದೆ.

ಕೇರಳ ಸರ್ಕಾರಕ್ಕೆ 11.7 ಕೋಟಿ ರೂಪಾಯಿ ಪಾವತಿ ಸಾಧ್ಯವಿಲ್ಲ: ಪದ್ಮನಾಭಸ್ವಾಮಿ ದೇವಾಲಯ ಸಮಿತಿ
ಪದ್ಮನಾಭಸ್ವಾಮಿ ದೇವಾಲಯ
ರಾಜೇಶ್ ದುಗ್ಗುಮನೆ
| Edited By: |

Updated on: Feb 12, 2021 | 8:55 PM

Share

ನವದೆಹಲಿ: ವಿಶ್ವವಿಖ್ಯಾತ ಪದ್ಮನಾಭಸ್ವಾಮಿ ದೇವಾಲಯವು ಕೇರಳ ಸರ್ಕಾರಕ್ಕೆ ಪಾವತಿಸಬೇಕಿರುವ ₹ 11.7 ಕೋಟಿ ನಿರ್ವಹಣಾ ವೆಚ್ಚವನ್ನು ಕೊರೊನಾ ಕಾರಣದಿಂದ ಈ ವರ್ಷ ಪಾವತಿಸಲು ಸಾಧ್ಯವಿಲ್ಲ ಎಂದು ದೇವಾಲಯ ನಿರ್ವಹಣಾ ಸಮಿತಿ ಸುಪ್ರಿಂಕೋರ್ಟ್​ಗೆ​ ಹೇಳಿದೆ. ದೇವಾಲಯದ ಭದ್ರತೆ ಹಾಗೂ ನಿರ್ವಹಣೆಗೆ ದೇವಾಲಯವು ರಾಜ್ಯ ಸರ್ಕಾರಕ್ಕೆ ₹ 11.7 ಕೋಟಿ ಪಾವತಿಸಬೇಕಿದೆ. ಆದರೆ, ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಬರಬೇಕಿದ್ದ ದೇಣಿಗೆ ಪ್ರಮಾಣ ತೀವ್ರವಾಗಿ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಪಾವತಿಸಲು ಸಾಧ್ಯವೇ ಇಲ್ಲ ಎನ್ನುವುದು ದೇವಸ್ಥಾನದ ನಿಲುವು.

ದೇವಸ್ಥಾನದ ಆಗು ಹೋಗುಗಳನ್ನು ನೋಡಿಕೊಳ್ಳಲು ಸುಪ್ರೀಂಕೋರ್ಟ್​ ತಾತ್ಕಾಲಿಕ ಸಮಿತಿ ಒಂದನ್ನು ರಚಿಸಿದೆ. ಈ ಸಮಿತಿಯು ಸುಪ್ರೀಂಕೋರ್ಟ್​ ಬಳಿ ಈ ವಿಚಾರವನ್ನು ಹೇಳಿದೆ. ಈ ಸಮಯದಲ್ಲಿ ನಾವು ಯಾವುದೇ ಆದೇಶ ಹೊರಡಿಸುವುದಿಲ್ಲ. ಕೇರಳ ಸರ್ಕಾರವು ಈ ಕೋರಿಕೆಯನ್ನು ಪರಿಗಣಿಸಲಿ ಎಂದು ಉನ್ನತ ನ್ಯಾಯಾಲಯ ನಿರ್ದೇಶಿಸಿದೆ.

ರಾಜವಂಶಸ್ಥರೇ ದೇವಸ್ಥಾನವನ್ನು ನಡೆಸಬೇಕು ಎನ್ನುವ ಕೇರಳ ಹೈಕೋರ್ಟ್​ ಆದೇಶವನ್ನು ರದ್ದು ಮಾಡಿದ್ದ ಸುಪ್ರೀಂಕೋರ್ಟ್​, ಭದ್ರತೆ ಹಾಗೂ ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಖರ್ಚುಗಳನ್ನು ರಾಜ್ಯ ಸರ್ಕಾರ ಮೊದಲು  ಭರಿಸಲಿ. ನಂತರ ದೇವಾಲಯ ಅದನ್ನು ಸರ್ಕಾರಕ್ಕೆ ಪಾವತಿಸಲಿ ಎಂದು ಹೇಳಿತ್ತು. ಅದರಂತೆ ಸರ್ಕಾರಕ್ಕೆ 11.7 ಕೋಟಿ ರೂಪಾಯಿ ಪಾವತಿಸಬೇಕಿದೆ.

ಕೊರೊನಾ ವೈರಸ್​ ಕಾಣಿಸಿಕೊಂಡ ನಂತರ ಕಳೆದ ಮಾರ್ಚ್​ನಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿತ್ತು. ಈ ವೇಳೆ ದೇವಾಲಯದ ಬಾಗಿಲನ್ನು ಹಾಕಲಾಗಿತ್ತು. ನಂತರ 2020ರ ಆಗಸ್ಟ್​ 26ರಂದು ದೇವಾಲಯವನ್ನು ತೆರೆಯಲಾಗಿತ್ತು. ಆದರೆ, ಅಕ್ಟೋಬರ್​ನಲ್ಲಿ ದೇವಾಲಯದ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿತ್ತು. ಹೀಗಾಗಿ, ದೇವಸ್ಥಾನವನ್ನು ಮತ್ತೆ ಮುಚ್ಚಲಾಗಿತ್ತು.

ಇದನ್ನೂ ಓದಿ: 5 ತಿಂಗಳ ಬಳಿಕ ಭಕ್ತರಿಗೆ ಪದ್ಮನಾಭ ಸ್ವಾಮಿಯ ಅನಂತ ದರ್ಶನ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು