AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬಿ ಗಾಯಕ ಮೂಸೆ ವಾಲಾ ಹತ್ಯೆ ಹೊಣೆ ಹೊತ್ತ ಕೆನಡಾದ ಗ್ಯಾಂಗ್​​ಸ್ಟರ್ ಗೋಲ್ಡಿ ಬ್ರಾರ್

ಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್​​ಯ ನಿಕಟ ಸಹವರ್ತಿ ಬ್ರಾರ್ ಅವರು ಪಂಜಾಬ್‌ನಲ್ಲಿರುವ ಅವರ ಘಟಕವು ಮೂಸೆ ವಾಲಾ ಮೇಲೆ ದಾಳಿ ನಡೆಸಿದೆ ಎಂದು ಹೇಳಿದ್ದಾರೆ. 2021 ಫೆಬ್ರವರಿಯಲ್ಲಿ ಫರೀದ್​​ ಕೋಟ್​ನಲ್ಲಿ ಯೂತ್ ಕಾಂಗ್ರೆಸ್ ನಾಯಕ ಗುರುಲಾಲ್ ಸಿಂಗ್ ಪೆಹಲ್ವಾನ್ ಹತ್ಯೆ ಪ್ರಕರಣದಲ್ಲಿ...

ಪಂಜಾಬಿ ಗಾಯಕ ಮೂಸೆ ವಾಲಾ ಹತ್ಯೆ ಹೊಣೆ ಹೊತ್ತ ಕೆನಡಾದ ಗ್ಯಾಂಗ್​​ಸ್ಟರ್ ಗೋಲ್ಡಿ ಬ್ರಾರ್
ಸಿಧು ಮೂಸೆ ವಾಲಾ
TV9 Web
| Edited By: |

Updated on:May 29, 2022 | 9:51 PM

Share

ಕೆನಡಾ ಮೂಲದ ಸತಿಂದರ್ ಸಿಂಗ್  ಅಲಿಯಾಸ್  ಗೋಲ್ಡಿ ಬ್ರಾರ್ (Goldy Brar)  ಭಾನುವಾರ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪಂಜಾಬಿ ಗಾಯಕ, ರಾಜಕಾರಣಿ ಸಿಧು ಮೂಸ್ ವಾಲಾ (Sidhu Moose Wala) ಅವರ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಭಾನುವಾರ ಮಾನ್ಸಾ (Mansa) ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಸಿಧು ಮೂಸೆ  ವಾಲಾ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಂಜಾಬ್ ಸರ್ಕಾರವು ಅವರ ರಕ್ಷಣೆಗಾಗಿ ಒದಗಿಸಿದ್ದ ಇಬ್ಬರು ಬಂದೂಕುಧಾರಿಗಳನ್ನು ಹಿಂತೆಗೆದುಕೊಂಡ ಒಂದು ದಿನದ ನಂತರ ಈ ಹತ್ಯೆ ನಡೆದಿದೆ. ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯ್​​ಯ ನಿಕಟ ಸಹವರ್ತಿ ಬ್ರಾರ್  ಪಂಜಾಬ್‌ನಲ್ಲಿರುವ ಅವರ ಘಟಕವು ಮೂಸೆ ವಾಲಾ ಮೇಲೆ ದಾಳಿ ನಡೆಸಿದೆ ಎಂದು ಹೇಳಿದ್ದಾರೆ. 2021 ಫೆಬ್ರವರಿಯಲ್ಲಿ ಫರೀದ್​​ ಕೋಟ್​ನಲ್ಲಿ ಯೂತ್ ಕಾಂಗ್ರೆಸ್ ನಾಯಕ ಗುರುಲಾಲ್ ಸಿಂಗ್ ಪೆಹಲ್ವಾನ್ ಹತ್ಯೆ ಪ್ರಕರಣದಲ್ಲಿ ಬ್ರಾರ್ ಮುಖ್ಯ ಸಂಚುಕೋರ ಆಗಿದ್ದ. ಮಾರ್ಚ್ 2021 ರಲ್ಲಿ ಫರೀದ್ ಕೋಟ್ ನ್ಯಾಯಾಲಯವು ಈತನ ವಿರುದ್ಧ ಓಪನ್ ಎಂಡೆಡ್ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿತು.

ತಮ್ಮ ಫೇಸ್‌ಬುಕ್ ಪುಟಗಳಲ್ಲಿ ಎರಡು ಪ್ರತ್ಯೇಕ ಪೋಸ್ಟ್‌ಗಳಲ್ಲಿ, ಬಿಷ್ಣೋಯ್ ಮತ್ತು ಬ್ರಾರ್ ಪಂಜಾಬಿ ಗಾಯಕನ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಈ ಪೋಸ್ಟ್ ಗಳ ವಿಶ್ವಾಸರ್ಹತೆ ಬಗ್ಗೆ ನಾವು ಸ್ವತಂತ್ರವಾಗಿ ದೃಢಪಡಿಸಿಲ್ಲ ಎಂದು ದಿ ಕ್ವಿಂಟ್ ವರದಿ ಮಾಡಿದೆ. ಆದಾಗ್ಯೂ, ನಾವು ಎರಡು ಫೇಸ್‌ಬುಕ್ ಪೋಸ್ಟ್‌ಗಳನ್ನು ಗಮನಿಸಿದ್ದೇವೆ. ಅವುಗಳ ಸತ್ಯಾಸತ್ಯತೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಪಂಜಾಬ್ ಪೊಲೀಸರು ದಿ ಕ್ವಿಂಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ
Image
ರಥಯಾತ್ರೆ ವೇಳೆ ದಾಳಿ ಮಾಡಿದವರು ಈಗ ಜೈಲಿನಲ್ಲಿ ‘ಜಗನ್ನಾಥ ಜಗನ್ನಾಥ’ ಅಂತ ಜಪಿಸುತ್ತಿದ್ದಾರೆ: ಅಮಿತ್ ಶಾ
Image
Sidhu Moose Wala: ಭದ್ರತೆ ವಾಪಸ್ ಪಡೆದ ಬೆನ್ನಲ್ಲೇ ಗುಂಡೇಟಿನಿಂದ ಹತ್ಯೆಗೀಡಾದ ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆ ವಾಲಾ
Image
Aadhaar Card ಆಧಾರ್ ಕಾರ್ಡ್ ಫೋಟೊಕಾಪಿ ಹಂಚಿಕೊಳ್ಳಬೇಡಿ ಎಂಬ ಯುಐಡಿಎಐ ಎಚ್ಚರಿಕೆ ವಾಪಸ್ ಪಡೆದ ಕೇಂದ್ರ ಸರ್ಕಾರ
Image
ಪ್ರವಾದಿ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ; ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಎಫ್ಐಆರ್

‘ವಿಐಪಿ ಸಂಸ್ಕೃತಿ’ ವಿರುದ್ಧದ ಆಮ್ ಆದ್ಮಿ ಪಕ್ಷದ ನಿರ್ಧಾರದಿಂದಾಗಿ ಪಂಜಾಬ್ ಪೊಲೀಸರು 424 ವ್ಯಕ್ತಿಗಳ ಭದ್ರತೆಯನ್ನು ಹಿಂತೆಗೆದು ಕೊಂಡ ಒಂದು ದಿನದ ಹತ್ಯೆ ನಡೆದಿದೆ. ಮೂಸೆ ವಾಲಾ ದಾಳಿಯ ಸಮಯದಲ್ಲಿ ಬುಲೆಟ್ ಪ್ರೂಫ್ ವಾಹನ ಮತ್ತು ಅವರ ಶಸ್ತ್ರಸಜ್ಜಿತ ಭದ್ರತಾ ಅಧಿಕಾರಿಯನ್ನು ಜತೆಗೆ ಕರೆದೊಯ್ದಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ಎರಡು ಕಾರುಗಳು ಸಿಧು ಮೂಸೆ ವಾಲಾ ಅವರ ಕಾರನ್ನು ಅಡ್ಡಗಟ್ಟಿದವು. ಭಾರೀ ಗುಂಡಿನ ದಾಳಿಯ ನಂತರ ಸಿಧು ಮೂಸೆ ವಾಲಾ ಅವರಿಗೆ ಅನೇಕ ಬುಲೆಟ್‌ಗಳು ಗಾಯಗಳಾಗಿವೆ. ಅವರ ಜೊತೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಟಿಯಾಲಕ್ಕೆ ಕಳುಹಿಸಲಾಗಿದೆ” ಎಂದು ಮಾನ್ಸಾ ಎಸ್‌ಎಸ್‌ಪಿ ಗೌರವ್ ಟೂರಾ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 9:24 pm, Sun, 29 May 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ