AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ. 26ರಂದು ಭಾರತಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿ

ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ತಮ್ಮ ಇಂಡೋ-ಪೆಸಿಫಿಕ್ ಪ್ರವಾಸದ ಭಾಗವಾಗಿ ಭಾರತಕ್ಕೆ ಆಗಮಿಸಲಿದ್ದಾರೆ. ಪ್ರಧಾನಿ ಕಚೇರಿಯ ಅಧಿಕೃತ ಹೇಳಿಕೆಯ ಪ್ರಕಾರ, ಈ ಪ್ರವಾಸವು ಆಸ್ಟ್ರೇಲಿಯಾ ಮತ್ತು ಜಪಾನ್ ಭೇಟಿಗಳನ್ನು ಸಹ ಒಳಗೊಂಡಿರುತ್ತದೆ. ಮಾರ್ಕ್ ಕಾರ್ನಿ ತಮ್ಮ ಭಾರತ ಭೇಟಿಯನ್ನು ಮುಂಬೈನಿಂದ ಪ್ರಾರಂಭಿಸಲಿದ್ದಾರೆ, ನಂತರ ನವದೆಹಲಿಗೆ ಪ್ರಯಾಣಿಸಲಿದ್ದಾರೆ. ದೆಹಲಿಯಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಫೆ. 26ರಂದು ಭಾರತಕ್ಕೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಭೇಟಿ
Mark Carney And Pm Modi
ಸುಷ್ಮಾ ಚಕ್ರೆ
|

Updated on: Feb 23, 2026 | 9:28 PM

Share

ನವದೆಹಲಿ, ಫೆಬ್ರವರಿ 23: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗೆ ಪ್ರಯಾಣಿಸಲಿದ್ದಾರೆ. ಅವರ ಭೇಟಿಯ ಸಮಯದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣೆಯ ವ್ಯವಹಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಕೆನಡಾ ಸರ್ಕಾರದ ಹೇಳಿಕೆ ತಿಳಿಸಿದೆ. “ಪ್ರಧಾನಿ ಕಾರ್ನಿ ಮೊದಲು ಮುಂಬೈಗೆ ಭೇಟಿ ನೀಡಲಿದ್ದಾರೆ, ನಂತರ ನವದೆಹಲಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು (PM Modi) ಭೇಟಿ ಮಾಡಲಿದ್ದಾರೆ.

ಉಭಯ ನಾಯಕರು ಕೆನಡಾ-ಭಾರತದ ಸಂಬಂಧವನ್ನು ಗಟ್ಟಿಗೊಳಿಸುವ ಮತ್ತು ವಿಸ್ತರಿಸುವತ್ತ ಗಮನಹರಿಸಲಿದ್ದಾರೆ. ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ (AI), ಪ್ರತಿಭೆ, ಸಂಸ್ಕೃತಿ ಮತ್ತು ರಕ್ಷಣೆಯಲ್ಲಿ ಮಹತ್ವಾಕಾಂಕ್ಷೆಯ ಹೊಸ ಪಾಲುದಾರಿಕೆಗಳೊಂದಿಗೆ ಈ ಭೇಟಿಯ ಚರ್ಚೆ ನಡೆಯಲಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಶಾಲೆಯಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು

ಜಸ್ಟಿನ್ ಟ್ರುಡೊ ನಂತರ ಅಧಿಕಾರ ವಹಿಸಿಕೊಂಡ ನಂತರ ಕಾರ್ನಿ ಅವರ ಭಾರತಕ್ಕೆ ಇದು ಮೊದಲ ಭೇಟಿಯಾಗಿದೆ. 2024ರಲ್ಲಿ ಭಾರತವು ಕೆನಡಾದ 7ನೇ ಅತಿದೊಡ್ಡ ಸರಕು ಮತ್ತು ಸೇವೆಗಳ ವ್ಯಾಪಾರ ಪಾಲುದಾರರಾಗಿದ್ದು, ಇದರಲ್ಲಿ ಕೆನಡಾ ಸರ್ಕಾರದ ಪ್ರಕಾರ 2 ದೇಶಗಳ ನಡುವಿನ ದ್ವಿಮುಖ ವ್ಯಾಪಾರವು ಸುಮಾರು 31 ಶತಕೋಟಿ ಡಾಲರ್‌ಗಳಷ್ಟಿತ್ತು. 2025ರ G20 ನಾಯಕರ ಶೃಂಗಸಭೆಯ ಸಂದರ್ಭದಲ್ಲಿ, ನವದೆಹಲಿ ಮತ್ತು ಒಟ್ಟಾವಾ ಮಹತ್ವಾಕಾಂಕ್ಷೆಯ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದವಾದ CEPAಗಾಗಿ ಔಪಚಾರಿಕವಾಗಿ ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡವು. ಇದು 2030ರ ವೇಳೆಗೆ ಎರಡೂ ರಾಷ್ಟ್ರಗಳ ನಡುವಿನ ದ್ವಿಮುಖ ವ್ಯಾಪಾರವನ್ನು 70 ಶತಕೋಟಿ ಡಾಲರ್‌ಗಳಿಗೆ ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ