AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲೇ ಉಳಿದ ನಿಯೋಗ

ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ದೆಹಲಿಗೆ ಆಗಮಿಸಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ವಿಮಾನ ಸರಿಯಾಗುವವರೆಗೆ ದೆಹಲಿಯಲ್ಲೇ ಕೆನಡಾ ನಿಯೋಗ ಉಳಿದುಕೊಳ್ಳಲಿದೆ. ಸದ್ಯ ಇಂಜಿನಿಯರಿಂಗ್ ತಂಡದಿಂದ ದೋಷ ಸರಿಪಡಿಸಲು ಯತ್ನಿಸಲಾಗುತ್ತಿದೆ. 

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲೇ ಉಳಿದ ನಿಯೋಗ
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ
Follow us
ಗಂಗಾಧರ​ ಬ. ಸಾಬೋಜಿ
|

Updated on:Sep 10, 2023 | 10:55 PM

ನವದೆಹಲಿ, ಸೆಪ್ಟೆಂಬರ್​ 10: ಜಿ20 ಶೃಂಗಸಭೆ ಮುಗಿಸಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ (justin trudeau) ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ವಿಮಾನ ಸರಿಯಾಗುವವರೆಗೆ ದೆಹಲಿಯಲ್ಲೇ ಕೆನಡಾ ನಿಯೋಗ ಉಳಿದುಕೊಳ್ಳಲಿದೆ. ಸ್ಥಳದಲ್ಲಿರುವ ಇಂಜಿನಿಯರಿಂಗ್ ತಂಡದಿಂದ ದೋಷ ಸರಿಪಡಿಸಲು ಯತ್ನಿಸಲಾಗುತ್ತಿದೆ ಎಂದು ಎಎನ್​ಐ ಸುದ್ದಿಸಂಸ್ಥೆಗೆ ವಿಮಾನ ನಿಲ್ದಾಣದ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ. ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶುಕ್ರವಾರ ದೆಹಲಿಗೆ ಆಗಮಿಸಿದ್ದ ಕೆನಡಾ ಪ್ರಧಾನಿ ಇಂದು ರಾತ್ರಿ 8 ಗಂಟೆಗೆ ವಾಪಸ್​ ಹೊರಡುವ ವೇಳೆ ತಾಂತ್ರಿಕ ದೋಷ ಕಂಡುಬಂದಿದೆ.

ವಿಮಾನ ನಿಲ್ದಾಣಕ್ಕೆ ಬಂದ ಮೇಲೆ ಕೆನಡಾಕೆ ಪ್ರಯಾಣಿಸಬೇಕಿದ್ದ ಸಿಎಫ್ಸಿ 001 ತಾಂತ್ರಿಕ ಸಮಸ್ಯೆ ಇದೆ ಎಂದು ಕೆನಡಾದ ಸಶಸ್ತ್ರ ಪಡೆಗಳಿಂದ ತಿಳಿದುಬಂದಿದೆ. ಈ ಸಮಸ್ಯೆಗಳನ್ನು ರಾತ್ರೋರಾತ್ರಿ ಪರಿಹರಿಸಲಾಗುವುದಿಲ್ಲ, ಪರ್ಯಾಯ ವ್ಯವಸ್ಥೆಗಳನ್ನು ಮಾಡುವವರೆಗೆ ನಮ್ಮ ನಿಯೋಗವು ಭಾರತದಲ್ಲಿಯೇ ಉಳಿಯುತ್ತದೆ ಎಂದು ಕೆನಡಾದ ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ಎಎನ್​​ಐ ಟ್ವೀಟ್​

ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬರುವುದಕ್ಕೂ ಮುನ್ನ ಪ್ರಧಾನಿ ಟ್ರುಡೊ ಅವರು ಜಿ 20 ಶೃಂಗಸಭೆಯ ಹೊರತಾಗಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಕೆನಡಾದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಚಟುವಟಿಕೆಗಳು ಮತ್ತು ರಾಜತಾಂತ್ರಿಕರ ವಿರುದ್ಧ ಹಿಂಸಾಚಾರ, ಪ್ರಚೋದನೆ ಕುರಿತು ಟ್ರುಡೊ ಬಳಿ ಪ್ರಧಾನಿ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ದ್ವಿಪಕ್ಷೀಯ ಸಭೆ ಬಗ್ಗೆ ಪ್ರಧಾನಿ ಮೋದಿ ಟ್ವೀಟ್​

ಕೆನಡಾದಲ್ಲಿನ ಭಾರತೀಯ ಸಮುದಾಯ ಮತ್ತು ಅವರ ಪೂಜಾ ಸ್ಥಳಗಳಿಗೆ ಬೆದರಿಕೆ ಹಾಕುತ್ತಿರುವ ಬಗ್ಗೆ ತಿಳಿಸಲಾಗಿದೆ. ಸಂಘಟಿತ ಅಪರಾಧ, ಮಾದಕವಸ್ತು ಸಿಂಡಿಕೇಟ್ಗಳು ಮತ್ತು ಮಾನವ ಕಳ್ಳಸಾಗಣೆಯೊಂದಿಗೆ ಅಂತಹ ಶಕ್ತಿಗಳ ಸಂಬಂಧವು ಕೆನಡಾಕ್ಕೂ ಕಳವಳಕಾರಿಯಾಗಿರಬೇಕು. ಅಂತಹ ಬೆದರಿಕೆಗಳನ್ನು ಎದುರಿಸಲು ಉಭಯ ದೇಶಗಳು ಸಹಕರಿಸುವುದು ಅತ್ಯಗತ್ಯ ಎಂದಿದ್ದಾರೆ.

ಇದನ್ನೂ ಓದಿ: ಭಾರತ ಮತ್ತು ಫ್ರಾನ್ಸ್ ನಡುವಿನ ಸಂಬಂಧ ಹೊಸ ಎತ್ತರಕ್ಕೆ ಕೊಂಡೊಯ್ಯಲಾಗುವುದು: ಪ್ರಧಾನಿ ನರೇಂದ್ರ ಮೋದಿ

ಕೆನಡಾದಲ್ಲಿ ಹೆಚ್ಚುತ್ತಿರುವ ಖಲಿಸ್ತಾನಿ ಪರ ಅಂಶಗಳ ಉಪಸ್ಥಿತಿಯ ಬಗ್ಗೆ ಭಾರತದ ಕಳವಳವನ್ನು ನಿವಾರಿಸಲು ಕೆನಡಾದ ಪ್ರಧಾನಿ ಪ್ರಯತ್ನಿಸಿದ್ದು, ತಮ್ಮ ದೇಶವು ಯಾವಾಗಲೂ ಹಿಂಸಾಚಾರವನ್ನು ತಡೆಯುತ್ತದೆ ಮತ್ತು ದ್ವೇಷವನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ. ಕೆಲವರ ಕ್ರಮಗಳು ಇಡೀ ಸಮುದಾಯವನ್ನು ಅಥವಾ ಕೆನಡಾವನ್ನು ಪ್ರತಿನಿಧಿಸುವುದಿಲ್ಲ ಎಂದು ತಿಳಿಸಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:34 pm, Sun, 10 September 23

ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ