Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತದಿಂದ ತೆರಳುವುದು ಮತ್ತಷ್ಟು ವಿಳಂಬ

ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಗೆ ಭಾರತಕ್ಕೆ ಆಗಮಿಸಿದ್ದ ಕೆನಾಡ ಪ್ರಧಾನಿ ಜಸ್ಟಿನ್ ಟ್ರುಡೊ ಸಭೆ ಮುಗಿಸಿ ಅವರು ಭಾನುವಾರ ಸಂಜೆ ಕೆನಾಡಕ್ಕೆ ಹೋಗಬೇಕಿತ್ತು. ಆದರೆ ತಮ್ಮ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಭಾರತದಲ್ಲಿ ಉಳಿಯುವಂತಾಗಿತ್ತು. ಆದರೆ ಸೋಮವಾರ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ CC-150 ಪೋಲಾರಿಸ್ ವಿಮಾನ ಲಂಡನ್​​​ನಲ್ಲಿ ಇಳಿದಿದೆ. ಇದೀಗ ಮತ್ತೆ ಜಸ್ಟಿನ್ ಟ್ರುಡೊ ಮತ್ತೆ ಭಾರತದಲ್ಲಿ ಉಳಿದಿದ್ದು, ಭಾರತದಿಂದ ತೆರಳುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತದಿಂದ ತೆರಳುವುದು ಮತ್ತಷ್ಟು ವಿಳಂಬ
ಕೆನಾಡ ಪ್ರಧಾನಿ ಜಸ್ಟಿನ್ ಟ್ರುಡೊ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 12, 2023 | 12:12 PM

ದೆಹಲಿ, ಸೆ.12: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ( Justin Trudeau) ಅವರು ಭಾರತಕ್ಕೆ ಬಂದಿದ್ದರು. ಎರಡು ದಿನಗಳು ಶೃಂಗಸಭೆಯನ್ನು ಮುಗಿಸಿ ಅವರು ಭಾನುವಾರ ಸಂಜೆ ಕೆನಡಾಕ್ಕೆ ಹೋಗಬೇಕಿತ್ತು. ಆದರೆ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಕೆನಡಾಕ್ಕೆ ಹೋಗಲು ಸಾಧ್ಯವಾಗದೇ ಭಾರತದಲ್ಲಿಯೇ ಉಳಿದಿದ್ದರು. ನಂತರ ಸೋಮವಾರ ರಾತ್ರಿ 10 ಗಂಟೆಗೆ ಕೆನಾಡದಿಂದ ಎರಡನೇ ವಿಮಾನ ಭಾರತವನ್ನು ತಲುಪುವ ನಿರೀಕ್ಷೆಯಿತ್ತು. ಆದರೆ ಇದೀಗ ಅದನ್ನು ಕೂಡ ಲಂಡನ್​​ನಲ್ಲಿ ಇಳಿಸಲಾಗಿದೆ.

ಕೆನಡಾದ ಸಶಸ್ತ್ರ ಪಡೆಗಳು ತನ್ನ CC-150 ಪೋಲಾರಿಸ್ ವಿಮಾನವನ್ನು ಪ್ರಧಾನಿ ಜಸ್ಟಿನ್ ಟ್ರುಡೊ ಕರೆತರಲು ಭಾರತಕ್ಕೆ ಸೋಮವಾರ ಕಳುಹಿಸಲಾಗಿದೆ. ರೋಮ್ ಮೂಲಕ ಬರಬೇಕಿದ್ದ ಈ ವಿಮಾನ ಲಂಡನ್​​ನಲ್ಲಿ​​ ತುರ್ತು ಲ್ಯಾಂಡ್​​ ಆಗಿದೆ ಎಂದು ಸಿಬಿಸಿ ನ್ಯೂಸ್ ವರದಿ ಮಾಡಿದೆ. ಆದರೆ ಈ ವಿಮಾನವನ್ನು ಲಂಡನ್​​ನಲ್ಲಿ ಇಳಿಸಲು ಕಾರಣ ಏನು? ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ. ಇದೀಗ ಮತ್ತೆ ಜಸ್ಟಿನ್ ಟ್ರುಡೊ ಅವರು ತಮ್ಮ ತವರು ದೇಶಕ್ಕೆ ಹೋಗುವುದು ಮತ್ತಷ್ಟು ತಡವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲೇ ಉಳಿದ ನಿಯೋಗ

ಜಸ್ಟಿನ್ ಟ್ರುಡೊ ಜತೆಗೆ ಅವರು ಮಗ ಕೂಡ ಭಾರತಕ್ಕೆ ಬಂದಿದ್ದು, ಇದೀಗ ಇಬ್ಬರು ಕೂಡ ಭಾರತದಲ್ಲೇ ಉಳಿಯುವಂತಾಗಿ , ಈ ಕಾರಣದಿಂದ ಸೂಕ್ತ ವಿಮಾನ ವ್ಯವಸ್ಥೆ ಮಾಡಲಾಗುವುದು ಎಂದು ಕೆನಡಾ ತಿಳಿಸಿದೆ. ಜಸ್ಟಿನ್ ಟ್ರುಡೊ ಬಳಸುವ ವಿಮಾನವು 36 ವರ್ಷ ಹಳೆಯದಾಗಿದೆ ಮತ್ತು ಈ ಹಿಂದೆಯೂ ಸಹ ಸಮಸ್ಯೆಗಳನ್ನು ಉಂಟುಮಾಡಿದೆ.

ಅಕ್ಟೋಬರ್ 2016ರಲ್ಲಿ, ಈ ವಿಮಾನವು ಬೆಲ್ಜಿಯಂಗೆ ಟೇಕ್ ಆಫ್ ಆದ ಅರ್ಧ ಗಂಟೆಯ ನಂತರ ಒಟ್ಟಾವಾಗೆ ಮರಳಿತು. ಆ ವಿಮಾನವು 16 ತಿಂಗಳುಗಳ ಕಾಲವರೆಗೆ ಯಾವುದೇ ಪ್ರಯಾಣವನ್ನು ಮಾಡಿಲ್ಲ ಎಂದು ಹೇಳಲಾಗಿದೆ. ಇನ್ನು ಈ ಬಗ್ಗೆ ಕೆನಾಡ ವಿರೋಧ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಅವರು ಟೀಕಿಸಿದ್ದು, ಇದು ಅವರು ಅನುಭವಿಸಬೇಕಾದ ಸಂಕಷ್ಟ, ಇನ್ನು ಈ ಒತ್ತಡವನ್ನು ದೇಶದ ಜನರ ಮೇಲೆ ಹಾಕುತ್ತಾರೆ ಎಂದು ಹೇಳಿದ್ದಾರೆ. ವಿಮಾನದ ವ್ಯವಸ್ಥೆಯಲ್ಲಿ ಉಂಟಾದ ಸಮಸ್ಯೆಯಿಂದ ಮತ್ತೆ ಭಾರತದಲ್ಲಿ ಉಳಿಯಬೇಕಾಗಿದೆ. ಅಲ್ಲಿಯವರೆಗೆ ನವದೆಹಲಿಯ ಲಲಿತ್ ಹೋಟೆಲ್‌ನಲ್ಲಿ ಉಳಿದುಕೊಳ್ಳಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:10 pm, Tue, 12 September 23

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು