AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತದಿಂದ ತೆರಳುವುದು ಮತ್ತಷ್ಟು ವಿಳಂಬ

ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಗೆ ಭಾರತಕ್ಕೆ ಆಗಮಿಸಿದ್ದ ಕೆನಾಡ ಪ್ರಧಾನಿ ಜಸ್ಟಿನ್ ಟ್ರುಡೊ ಸಭೆ ಮುಗಿಸಿ ಅವರು ಭಾನುವಾರ ಸಂಜೆ ಕೆನಾಡಕ್ಕೆ ಹೋಗಬೇಕಿತ್ತು. ಆದರೆ ತಮ್ಮ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಭಾರತದಲ್ಲಿ ಉಳಿಯುವಂತಾಗಿತ್ತು. ಆದರೆ ಸೋಮವಾರ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ CC-150 ಪೋಲಾರಿಸ್ ವಿಮಾನ ಲಂಡನ್​​​ನಲ್ಲಿ ಇಳಿದಿದೆ. ಇದೀಗ ಮತ್ತೆ ಜಸ್ಟಿನ್ ಟ್ರುಡೊ ಮತ್ತೆ ಭಾರತದಲ್ಲಿ ಉಳಿದಿದ್ದು, ಭಾರತದಿಂದ ತೆರಳುವುದು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಭಾರತದಿಂದ ತೆರಳುವುದು ಮತ್ತಷ್ಟು ವಿಳಂಬ
ಕೆನಾಡ ಪ್ರಧಾನಿ ಜಸ್ಟಿನ್ ಟ್ರುಡೊ
ಅಕ್ಷಯ್​ ಪಲ್ಲಮಜಲು​​
|

Updated on:Sep 12, 2023 | 12:12 PM

Share

ದೆಹಲಿ, ಸೆ.12: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ( Justin Trudeau) ಅವರು ಭಾರತಕ್ಕೆ ಬಂದಿದ್ದರು. ಎರಡು ದಿನಗಳು ಶೃಂಗಸಭೆಯನ್ನು ಮುಗಿಸಿ ಅವರು ಭಾನುವಾರ ಸಂಜೆ ಕೆನಡಾಕ್ಕೆ ಹೋಗಬೇಕಿತ್ತು. ಆದರೆ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಕೆನಡಾಕ್ಕೆ ಹೋಗಲು ಸಾಧ್ಯವಾಗದೇ ಭಾರತದಲ್ಲಿಯೇ ಉಳಿದಿದ್ದರು. ನಂತರ ಸೋಮವಾರ ರಾತ್ರಿ 10 ಗಂಟೆಗೆ ಕೆನಾಡದಿಂದ ಎರಡನೇ ವಿಮಾನ ಭಾರತವನ್ನು ತಲುಪುವ ನಿರೀಕ್ಷೆಯಿತ್ತು. ಆದರೆ ಇದೀಗ ಅದನ್ನು ಕೂಡ ಲಂಡನ್​​ನಲ್ಲಿ ಇಳಿಸಲಾಗಿದೆ.

ಕೆನಡಾದ ಸಶಸ್ತ್ರ ಪಡೆಗಳು ತನ್ನ CC-150 ಪೋಲಾರಿಸ್ ವಿಮಾನವನ್ನು ಪ್ರಧಾನಿ ಜಸ್ಟಿನ್ ಟ್ರುಡೊ ಕರೆತರಲು ಭಾರತಕ್ಕೆ ಸೋಮವಾರ ಕಳುಹಿಸಲಾಗಿದೆ. ರೋಮ್ ಮೂಲಕ ಬರಬೇಕಿದ್ದ ಈ ವಿಮಾನ ಲಂಡನ್​​ನಲ್ಲಿ​​ ತುರ್ತು ಲ್ಯಾಂಡ್​​ ಆಗಿದೆ ಎಂದು ಸಿಬಿಸಿ ನ್ಯೂಸ್ ವರದಿ ಮಾಡಿದೆ. ಆದರೆ ಈ ವಿಮಾನವನ್ನು ಲಂಡನ್​​ನಲ್ಲಿ ಇಳಿಸಲು ಕಾರಣ ಏನು? ಎಂಬ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಿಲ್ಲ. ಇದೀಗ ಮತ್ತೆ ಜಸ್ಟಿನ್ ಟ್ರುಡೊ ಅವರು ತಮ್ಮ ತವರು ದೇಶಕ್ಕೆ ಹೋಗುವುದು ಮತ್ತಷ್ಟು ತಡವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇದನ್ನೂ ಓದಿ:ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ದೆಹಲಿಯಲ್ಲೇ ಉಳಿದ ನಿಯೋಗ

ಜಸ್ಟಿನ್ ಟ್ರುಡೊ ಜತೆಗೆ ಅವರು ಮಗ ಕೂಡ ಭಾರತಕ್ಕೆ ಬಂದಿದ್ದು, ಇದೀಗ ಇಬ್ಬರು ಕೂಡ ಭಾರತದಲ್ಲೇ ಉಳಿಯುವಂತಾಗಿ , ಈ ಕಾರಣದಿಂದ ಸೂಕ್ತ ವಿಮಾನ ವ್ಯವಸ್ಥೆ ಮಾಡಲಾಗುವುದು ಎಂದು ಕೆನಡಾ ತಿಳಿಸಿದೆ. ಜಸ್ಟಿನ್ ಟ್ರುಡೊ ಬಳಸುವ ವಿಮಾನವು 36 ವರ್ಷ ಹಳೆಯದಾಗಿದೆ ಮತ್ತು ಈ ಹಿಂದೆಯೂ ಸಹ ಸಮಸ್ಯೆಗಳನ್ನು ಉಂಟುಮಾಡಿದೆ.

ಅಕ್ಟೋಬರ್ 2016ರಲ್ಲಿ, ಈ ವಿಮಾನವು ಬೆಲ್ಜಿಯಂಗೆ ಟೇಕ್ ಆಫ್ ಆದ ಅರ್ಧ ಗಂಟೆಯ ನಂತರ ಒಟ್ಟಾವಾಗೆ ಮರಳಿತು. ಆ ವಿಮಾನವು 16 ತಿಂಗಳುಗಳ ಕಾಲವರೆಗೆ ಯಾವುದೇ ಪ್ರಯಾಣವನ್ನು ಮಾಡಿಲ್ಲ ಎಂದು ಹೇಳಲಾಗಿದೆ. ಇನ್ನು ಈ ಬಗ್ಗೆ ಕೆನಾಡ ವಿರೋಧ ಪಕ್ಷದ ನಾಯಕ ಪಿಯರೆ ಪೊಯಿಲಿವ್ರೆ ಅವರು ಟೀಕಿಸಿದ್ದು, ಇದು ಅವರು ಅನುಭವಿಸಬೇಕಾದ ಸಂಕಷ್ಟ, ಇನ್ನು ಈ ಒತ್ತಡವನ್ನು ದೇಶದ ಜನರ ಮೇಲೆ ಹಾಕುತ್ತಾರೆ ಎಂದು ಹೇಳಿದ್ದಾರೆ. ವಿಮಾನದ ವ್ಯವಸ್ಥೆಯಲ್ಲಿ ಉಂಟಾದ ಸಮಸ್ಯೆಯಿಂದ ಮತ್ತೆ ಭಾರತದಲ್ಲಿ ಉಳಿಯಬೇಕಾಗಿದೆ. ಅಲ್ಲಿಯವರೆಗೆ ನವದೆಹಲಿಯ ಲಲಿತ್ ಹೋಟೆಲ್‌ನಲ್ಲಿ ಉಳಿದುಕೊಳ್ಳಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:10 pm, Tue, 12 September 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ