AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ವಿಭಿನ್ನ ರೀತಿಯಲ್ಲಿ ನಾಮಪತ್ರ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿ

ನಾನು ಮೊದಲು 1994ರಲ್ಲಿ ನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದೆ. 1995ರಲ್ಲಿ ನಂತರ ಚೇರ್​ಮನ್​ ಪೋಸ್ಟ್​ಗಾಗಿ ಹೋರಾಟ ಮಾಡಿದೆ.  ಆಗ ನನ್ನ ಕೈಯಲ್ಲಿ ದುಡ್ಡು ಇರಲಿಲ್ಲ ಎಂದು ವೈಧರಾಜ್ ಕಿಶನ್ ತಿಳಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ; ವಿಭಿನ್ನ ರೀತಿಯಲ್ಲಿ ನಾಮಪತ್ರ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿ
ಪಿಪಿಇ ಕಿಟ್​ ಧರಿಸಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿ
TV9 Web
| Edited By: |

Updated on: Jan 25, 2022 | 9:48 PM

Share

ಶಹಜಾನ್​ಪುರ: ಉತ್ತರಪ್ರದೇಶದ ವಿಧಾನಸಭೆ ಚುನಾವಣೆ (Uttar Pradesh Assembly Elction) ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಹಾಗೇ, ಉತ್ತರಪ್ರದೇಶದ ಶಹಜಾನ್​ಪುರ ವಿಧಾನಸಭಾ ಕ್ಷೇತ್ರದ, ಸಂಯುಕ್ತ ವಿಕಾಸ್​ ಪಾರ್ಟಿ ಅಭ್ಯರ್ಥಿ ವೈಧರಾಜ್ ಕಿಶನ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಅವರು ನಾಮಪತ್ರ ಸಲ್ಲಿಸಿದ್ದು ಸಖತ್​ ಸುದ್ದಿಯಾಗಿದೆ. ವೈಧರಾಜ್​ ಕಿಶನ್​ ಅವರು ಪಿಪಿಇ ಕಿಟ್​ ಧರಿಸಿ, ಕೈಯಲ್ಲಿ ಸ್ಯಾನಿಟೈಸರ್​ ಮತ್ತು ಥರ್ಮಲ್​ ಸ್ಕ್ಯಾನರ್​ ಹಿಡಿದು ನಾಮಪತ್ರ ಸಲ್ಲಿಸಿದ್ದೇ ಹೀಗೆ ಸುದ್ದಿಯಾಗಲು ಕಾರಣ.   ಇದುವರೆಗೆ 18 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಇವರೀಗ 19ನೇ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ವೈಧರಾಜ್ ಕೇವಲ ಶಹಜಾನ್​ಪುರದಿಂದ ಮಾತ್ರವಲ್ಲ, ಯೋಗಿ ಆದಿತ್ಯನಾಥ್​ ಸ್ಪರ್ಧಿಸುತ್ತಿರುವ ಗೋರಖ್​ಪುರ ವಿಧಾನಸಭಾ ಕ್ಷೇತ್ರದಿಂದಲೂ ಕಣಕ್ಕಿಳಿಯಲಿದ್ದಾರೆ. ಅಲ್ಲಿ ಕೂಡ ಶೀಘ್ರದಲ್ಲೇ ನಾಮಪತ್ರ ಸಲ್ಲಿಸಲಿದ್ದಾರೆ.  

ನೀವ್ಯಾಕೆ ಪಿಪಿಇ ಕಿಟ್​ ಧರಿಸಿ ನಾಮಪತ್ರ ಸಲ್ಲಿಸಲು ಬಂದಿದ್ದೀರಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಎದುರು ಮೊದಲು ಯಾರು ಬರುತ್ತಾರೋ ಮೊದಲು ಅವರ ದೇಹದ ತಾಪಮಾನ ಚೆಕ್​ ಮಾಡುತ್ತೇನೆ. ಅದಕ್ಕಾಗಿಯೇ ಥರ್ಮಲ್​ ಸ್ಕ್ಯಾನರ್​ ಹಿಡಿದಿದ್ದೇನೆ. ಇನ್ನು ನನ್ನನ್ನು ನಾನು ಕೊರೊನಾದಿಂದ ರಕ್ಷಿಸಿಕೊಳ್ಳುವ ಸಲುವಾಗಿ ಪಿಪಿಇ ಕಿಟ್ ಧರಿಸಿದ್ದೇನೆ. ಸ್ಯಾನಿಟೈಸರ್​ ಕೈ ಸ್ವಚ್ಛಗೊಳಿಸಿಕೊಳ್ಳಲು ಬೇಕಾಗುತ್ತದೆ ಎಂದು ಹೇಳಿದರು.

ನಂತರ ತಮ್ಮ ಚುನಾವಣೆ ದಾರಿಯ ಬಗ್ಗೆ ವಿವರಿಸಿದ ಅವರು, ನಾನು ಮೊದಲು 1994ರಲ್ಲಿ ನಗರ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿದೆ. 1995ರಲ್ಲಿ ನಂತರ ಚೇರ್​ಮನ್​ ಪೋಸ್ಟ್​ಗಾಗಿ ಹೋರಾಟ ಮಾಡಿದೆ.  ಆಗ ನನ್ನ ಕೈಯಲ್ಲಿ ದುಡ್ಡು ಇರಲಿಲ್ಲ. ಹೀಗಾಗಿ ಮತ ಕೇಳುವ ಜತೆ, ಹಣವನ್ನೂ ಕೇಳುತ್ತಿದ್ದೆ.  ನಂತರ ಚುನಾವಣೆಯಲ್ಲಿ 8 ಸಾವಿರ ಮತಗಳು ಬಂದವು. 1.5 ಲಕ್ಷ ರೂಪಾಯಿ ನಗದು ಸಂಗ್ರಹವಾಯಿತು. ಇದು ನನ್ನ 19ನೇ ಚುನಾವಣೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೇಡವೆಂದರೂ ತಲೆಗೆ ಸುತ್ತಿದ ರುಮಾಲನ್ನು ಕಿತ್ತು ಬಿಸಾಡಿದ ಸಿದ್ದರಾಮಯ್ಯ ಆಮೇಲೆ ತಮ್ಮ ಕ್ರಾಪು ಸರಿಮಾಡಿಕೊಂಡರು!!

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್